ಬ್ರೇಕಿಂಗ್ ನ್ಯೂಸ್
07-09-21 09:20 pm Source ; One India Kannada ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ : ಅಮೆಜಾನ್.ಕಾಂ ಅಂತಾರಾಷ್ಟ್ರೀಯ ಕಂಪನಿಯು ಜಾಗತಿಕ ಮಟ್ಟದ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡುತ್ತಿದೆ. ಸೆಪ್ಟೆಂಬರ್ 15ರಿಂದ ವಿಶ್ವದೆಲ್ಲೆಡೆ ನೇಮಕಾತಿ ಪ್ರಕ್ರಿಯೆ ಆರಂಭಗೊಳ್ಳಲಿದೆ ಎಂದು ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಆಂಡಿ ಜಸ್ಸಿ ಹೇಳಿದ್ದಾರೆ.
ರೀಟೇಲ್ ಹಾಗೂ ಕ್ಲೌಡ್, ಜಾಹೀರಾತು ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಮಾನವ ಸಂಪನ್ಮೂಲ ಬೇಡಿಕೆ ಹೆಚ್ಚಾಗಿದೆ. ಸಂಸ್ಥೆ ಆರಂಭಿಸಲಿರುವ ಪ್ರಾಜೆಕ್ಟ್ ಕ್ಯುಪಿರ್ ಜಾರಿಗೊಳಿಸಲು ಹೊಸ ನೇಮಕಾತಿ ಆರಂಭ ಅಗತ್ಯವಿದೆ. ಉಪಗ್ರಹ ಆಧಾರಿತವಾಗಿ ಬ್ರಾಡ್ಬ್ಯಾಂಡ್ ವಿಸ್ತರಣೆಗೆ ಅಮೆಜಾನ್ ಮುಂದಾಗಿದೆ.
ಜಾಗತಿಕವಾಗಿ 275,000 ಮಂದಿ ಉದ್ಯೋಗಿಗಳನ್ನು ಹೊಂದಿರುವ ಅಮೆಜಾನ್ ಈಗ ಕೆರಿಯರ್ ಡೇ ಮೂಲಕ ಇನ್ನೂ ಶೇ. 20 ರಷ್ಟು (55 ಸಾವಿರ ಮಂದಿ) ಟೆಕ್ ಮತ್ತು ಕಾರ್ಪೊರೇಟ್ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ ಎಂದು ಕಂಪನಿಯ ಮುಖ್ಯಸ್ಥ ಆಂಡಿ ಜಸ್ಸಿ ಹೇಳಿದ್ದಾರೆ

ಈ ಪೈಕಿ 40,000 ಮಂದಿ ಸಿಬ್ಬಂದಿ ಅಮೆರಿಕದಲ್ಲಿ ನೇಮಕವಾಗಲಿದ್ದು, ಮಿಕ್ಕಂತೆ ಭಾರತ, ಜರ್ಮನಿ ಮತ್ತು ಜಪಾನ್ ದೇಶಗಳಿಂದ ಉಳಿದವರನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ ಎಂದು ಜಸ್ಸಿ ಹೇಳಿದರು.
ಕೋವಿಡ್ ಸಂದರ್ಭದಲ್ಲಿ ನೇಮಕಾತಿ; ಕಳೆದ ಆರ್ಥಿಕ ವರ್ಷದಲ್ಲಿ ಸುಮಾರು 22 ಸಾವಿರ ಮಂದಿಯನ್ನು ಭಾರತದಿಂದ ನೇಮಕ ಮಾಡಿಕೊಳ್ಳಲಾಗಿದೆ. ಭಾರತದ ವಿವಿಧ ಭಾಷೆ ಮತ್ತು ವಿಶ್ವದ ಇತರ ರಾಷ್ಟ್ರಗಳಲ್ಲಿನ ಗ್ರಾಹಕರಿಗೆ ನೆರವಾಗಲು ತಾತ್ಕಾಲಿಕವಾಗಿ 20 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿತ್ತು.
ಹೈದರಾಬಾದ್, ಪುಣೆ, ಕೊಯಮತ್ತೂರು, ನೋಯ್ಡಾ, ಕೋಲ್ಕತ್ತಾ, ಜೈಪುರ, ಚಂಡೀಗಢ್, ಮಂಗಳೂರು, ಇಂಧೋರ್, ಭೋಪಾಲ್ ಮತ್ತು ಲಕ್ನೋದಲ್ಲಿ ಈಗ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಅಮೆಜಾನ್ ತನ್ನ ವರ್ಚುವಲ್ ಕಸ್ಟಮರ್ ಸರ್ವೀಸ್ ಯೋಜನೆಯಡಿ ಈ ಹುದ್ದೆಗಳನ್ನು ಭರ್ತಿ ಮಾಡಲಿದೆ. ಈ ಯೋಜನೆಯಡಿ ಕೆಲಸ ಪಡೆದವರಿಗೆ ಮನೆಯಿಂದಲೇ ಕೆಲಸ ಮಾಡುವ ಆಯ್ಕೆಯನ್ನು ಸಹ ನೀಡಲಾಗುತ್ತಿದೆ.
ಅಸೋಸಿಯೇಟ್ ಕಸ್ಟಮರ್ ಸರ್ವೀಸ್ ಹುದ್ದೆಯಲ್ಲಿ ಕಾರ್ಯ ನಿರ್ವಹಣೆ ಮಾಡುವವರು ಗ್ರಾಹಕರ ಜೊತೆ ಸಂಪರ್ಕದಲ್ಲಿ ಇರುತ್ತಾರೆ. ಇ-ಮೇಲ್, ಚಾಟ್, ಸಾಮಾಜಿಕ ಜಾಲತಾಣ, ಫೋನ್ ಮೂಲಕ ಗ್ರಾಹಕರ ಸಮಸ್ಯೆಯನ್ನು ಬಗೆಹರಿಸುತ್ತಿದ್ದಾರೆ.
ಅಮೆಜಾನ್.ಇನ್ 15 ರಾಜ್ಯಗಳಲ್ಲಿ 60 ಕ್ಕೂ ಹೆಚ್ಚು ಗೋದಾಮುಗಳು ಅಥವಾ ಈಡೇರಿಕೆ ಕೇಂದ್ರಗಳನ್ನು ಹೊಂದಿದೆ. ಈಗ ಇಂಜಿನಿಯರಿಂಗ್, ಸಂಶೋಧನಾ ವಿಜ್ಞಾನ, ರೊಬೋಟಿಕ್ಸ್ ಸೇರಿದಂತೆ ಹೊಸ ಕ್ಷೇತ್ರಗಳಲ್ಲಿ ನೇಮಕಾತಿ ನಡೆಯಲಿದೆ ಎಂದು ಅಖಿಲ್ ಸಕ್ಸೇನಾ,ಉಪಾಧ್ಯಕ್ಷ,ಗ್ರಾಹಕ ಪೂರೈಸುವ ಕಾರ್ಯಾಚರಣೆ, ಎಪಿಎಸಿ, ಅಮೆಜಾನ್ ಇಂಡಿಯಾದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Amazon CEO, Andy Jassy, unveils 55,000 Tech Jobs in his first Hiring push.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm