ಬ್ರೇಕಿಂಗ್ ನ್ಯೂಸ್
21-05-22 10:32 pm Source: Vijayakarnataka ಉದ್ಯೋಗ
ಹೊಸದಿಲ್ಲಿ: ಪೇಟಿಎಂ ಮಾತೃ ಸಂಸ್ಥೆ ಒನ್97 ಕಮ್ಯುನಿಕೇಶನ್ಸ್ ಶುಕ್ರವಾರ ತನ್ನ ಮಾರ್ಚ್ ತ್ರೈಮಾಸಿಕ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಕಂಪನಿಯ ನಷ್ಟ 761.4 ಕೋಟಿ ರೂ. ಏರಿಕೆಯಾಗಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿ 441.8 ಕೋಟಿ ರೂ. ನಷ್ಟ ಅನುಭವಿಸಿತ್ತು.
ಇದೇ ವೇಳೆ ಪೇಟಿಎಂ ಕಾರ್ಯಾಚರಣೆಗಳಿಂದ 1540.9 ಕೋಟಿ ರೂ. ಆದಾಯ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ 815.3 ಕೋಟಿ ರೂ. ಇತ್ತು. ಇದಕ್ಕೆ ಹೋಲಿಸಿದರೆ ಕಂಪನಿಯ ಆದಾಯ ಶೇ. 88.99ರಷ್ಟು ಏರಿಕೆ ಕಂಡಿದೆ.
ಆದಾಯ ಹೆಚ್ಚಲು ಎಂಡಿಆರ್ ಬೇರಿಂಗ್ ಉಪಕರಣಗಳ ಮೂಲಕ (ಪೇಟಿಎಂ ವ್ಯಾಲೆಟ್, ಪೇಟಿಎಂ ಬ್ಯಾಂಕ್ ಖಾತೆ, ಕಾರ್ಡ್ಗಳು, ಇತ್ಯಾದಿ) ವ್ಯಾಪಾರಿಗಳು ಹೆಚ್ಚಿನ ಪಾವತಿಗಳನ್ನು ಪಡೆದುಕೊಂಡಿದ್ದೇ ಕಾರಣ ಎಂದು ಪೇಟಿಎಂ ಹೇಳಿದೆ. ಪ್ಲಾಟ್ಫಾರ್ಮ್ನಲ್ಲಿ ಪಾಲುದಾರರ ಮೂಲಕ ಸಾಲಗಳ ವಿತರಣೆ ಏರಿಕೆಯಾಗಿದ್ದರಿಂದಲೂ ಆದಾಯ ಹೆಚ್ಚಳವಾಗಿದೆ ಎಂದು ಕಂಪನಿ ತಿಳಿಸಿದೆ.
![]()
ಇನ್ನು ಕಂಪನಿಯ ಸರಾಸರಿ ಮಾಸಿಕ ವಹಿವಾಟು ಬಳಕೆದಾರರ (ಎಂಟಿಯು) ಸಂಖ್ಯೆ, ಅಂದರೆ ಒಂದು ತಿಂಗಳಲ್ಲಿ ಕನಿಷ್ಠ ಒಂದು ಯಶಸ್ವಿ ಪಾವತಿ ಮಾಡಿದ ಬಳಕೆದಾರರ ಸಂಖ್ಯೆ ಶೇ. 41ರಷ್ಟು ಬೆಳವಣಿಗೆ ಕಂಡಿದ್ದು 7.09 ಕೋಟಿಗೆ ತಲುಪಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದೊಂದು ವರ್ಷದಲ್ಲಿ ನೀಡಲಾದ ಸಾಲಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ ಎಂದು ಕಂಪನಿ ಹೇಳಿದ್ದು, 65 ಲಕ್ಷ ಸಾಲ ವಿತರಿಸಿರುವುದಾಗಿ ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 374ರಷ್ಟು ಸಾಲ ವಿತರಣೆ ಹೆಚ್ಚಾಗಿರುವುದಾಗಿ ತಿಳಿಸಿದೆ.
ಇಷ್ಟೆಲ್ಲಾ ಬೆಳವಣಿಗಳ ನಡುವೆಯೂ ಕಂಪನಿಯ ನಷ್ಟ ಮುಂದುವರಿದಿದೆ. ಆದಾಯ ಏರಿಕೆಯಾಗಿದ್ದರೂ ವೆಚ್ಚಗಳು ಹೆಚ್ಚಳವಾಗಿರುವುದು ಇದಕ್ಕೆ ಕಾರಣವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಉದ್ಯೋಗಿಗಳ ಮೇಲಿನ ವೆಚ್ಚಗಳು 347.8 ಕೋಟಿ ರೂ.ನಿಂದ 863.4 ಕೋಟಿ ರೂ.ಗೆ ಏರಿಕೆಯಾಗಿವೆ.

ಪಾವತಿ ಪ್ರಕ್ರಿಯೆ ಶುಲ್ಕಗಳು ಮಾರ್ಚ್ 2022ರ ತ್ರೈಮಾಸಿಕದಲ್ಲಿ ಒಂದು ವರ್ಷದ ಹಿಂದೆ ಇದ್ದ 508.7 ಕೋಟಿ ರೂ.ನಿಂದ 774.2 ಕೋಟಿ ರೂಪಾಯಿಗಳಿಗೆ ಹೆಚ್ಚಿದ್ದು, ಶೇ. 52ರಷ್ಟು ಏರಿಕೆ ದಾಖಲಾಗಿದೆ. ಮಾರ್ಕೆಟಿಂಗ್ ವೆಚ್ಚಗಳು ಕೂಡ 100.1 ಕೋಟಿ ರೂ.ಗಳಿಂದ 248.9 ಕೋಟಿ ರೂ.ಗೆ ಏರಿಕೆಯಾಗಿವೆ.
ಒಟ್ಟಾರೆ ಇಡೀ ವರ್ಷದ ಲೆಕ್ಕ ತೆಗೆದುಕೊಂಡರೆ ಮಾರ್ಚ್ 31, 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಪೇಟಿಎಂ 2,396.4 ಕೋಟಿ ರೂ. ನಷ್ಟ ಅನುಭವಿಸಿದೆ. ಕಳೆದ ವರ್ಷ ಕಂಪನಿ 1,701 ಕೋಟಿ ರೂ. ನಷ್ಟ ಅನುಭವಿಸಿತ್ತು. ಆದರೆ ಆದಾಯ 2,802.4 ಕೋಟಿ ರೂ.ನಿಂದ ಶೇ. 77.49ರಷ್ಟು ಏರಿಕೆ ಕಂಡಿದ್ದು 4,974.2 ಕೋಟಿ ರೂ.ಗೆ ತಲುಪಿರುವುದೇ ಕಂಪನಿಯ ಪಾಲಿನ ಶುಭ ಸುದ್ದಿಯಾಗಿದೆ.
Paytm Q4 Results Company Net Loss Widens To Rs 761 Crore In March Quarter.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm