ಬ್ರೇಕಿಂಗ್ ನ್ಯೂಸ್
21-05-22 10:32 pm Source: Vijayakarnataka ಉದ್ಯೋಗ
ಹೊಸದಿಲ್ಲಿ: ಪೇಟಿಎಂ ಮಾತೃ ಸಂಸ್ಥೆ ಒನ್97 ಕಮ್ಯುನಿಕೇಶನ್ಸ್ ಶುಕ್ರವಾರ ತನ್ನ ಮಾರ್ಚ್ ತ್ರೈಮಾಸಿಕ ಫಲಿತಾಂಶವನ್ನು ಬಿಡುಗಡೆ ಮಾಡಿದ್ದು ಕಂಪನಿಯ ನಷ್ಟ 761.4 ಕೋಟಿ ರೂ. ಏರಿಕೆಯಾಗಿದೆ. ಕಳೆದ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿ 441.8 ಕೋಟಿ ರೂ. ನಷ್ಟ ಅನುಭವಿಸಿತ್ತು.
ಇದೇ ವೇಳೆ ಪೇಟಿಎಂ ಕಾರ್ಯಾಚರಣೆಗಳಿಂದ 1540.9 ಕೋಟಿ ರೂ. ಆದಾಯ ಗಳಿಸಿದೆ. ಹಿಂದಿನ ವರ್ಷದ ಇದೇ ತ್ರೈಮಾಸಿಕದಲ್ಲಿ ಕಂಪನಿಯ ಆದಾಯ 815.3 ಕೋಟಿ ರೂ. ಇತ್ತು. ಇದಕ್ಕೆ ಹೋಲಿಸಿದರೆ ಕಂಪನಿಯ ಆದಾಯ ಶೇ. 88.99ರಷ್ಟು ಏರಿಕೆ ಕಂಡಿದೆ.
ಆದಾಯ ಹೆಚ್ಚಲು ಎಂಡಿಆರ್ ಬೇರಿಂಗ್ ಉಪಕರಣಗಳ ಮೂಲಕ (ಪೇಟಿಎಂ ವ್ಯಾಲೆಟ್, ಪೇಟಿಎಂ ಬ್ಯಾಂಕ್ ಖಾತೆ, ಕಾರ್ಡ್ಗಳು, ಇತ್ಯಾದಿ) ವ್ಯಾಪಾರಿಗಳು ಹೆಚ್ಚಿನ ಪಾವತಿಗಳನ್ನು ಪಡೆದುಕೊಂಡಿದ್ದೇ ಕಾರಣ ಎಂದು ಪೇಟಿಎಂ ಹೇಳಿದೆ. ಪ್ಲಾಟ್ಫಾರ್ಮ್ನಲ್ಲಿ ಪಾಲುದಾರರ ಮೂಲಕ ಸಾಲಗಳ ವಿತರಣೆ ಏರಿಕೆಯಾಗಿದ್ದರಿಂದಲೂ ಆದಾಯ ಹೆಚ್ಚಳವಾಗಿದೆ ಎಂದು ಕಂಪನಿ ತಿಳಿಸಿದೆ.
![]()
ಇನ್ನು ಕಂಪನಿಯ ಸರಾಸರಿ ಮಾಸಿಕ ವಹಿವಾಟು ಬಳಕೆದಾರರ (ಎಂಟಿಯು) ಸಂಖ್ಯೆ, ಅಂದರೆ ಒಂದು ತಿಂಗಳಲ್ಲಿ ಕನಿಷ್ಠ ಒಂದು ಯಶಸ್ವಿ ಪಾವತಿ ಮಾಡಿದ ಬಳಕೆದಾರರ ಸಂಖ್ಯೆ ಶೇ. 41ರಷ್ಟು ಬೆಳವಣಿಗೆ ಕಂಡಿದ್ದು 7.09 ಕೋಟಿಗೆ ತಲುಪಿದೆ ಎಂದು ಕಂಪನಿ ತನ್ನ ಹೇಳಿಕೆಯಲ್ಲಿ ತಿಳಿಸಿದೆ.
ಕಳೆದೊಂದು ವರ್ಷದಲ್ಲಿ ನೀಡಲಾದ ಸಾಲಗಳ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ ಎಂದು ಕಂಪನಿ ಹೇಳಿದ್ದು, 65 ಲಕ್ಷ ಸಾಲ ವಿತರಿಸಿರುವುದಾಗಿ ಹೇಳಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 374ರಷ್ಟು ಸಾಲ ವಿತರಣೆ ಹೆಚ್ಚಾಗಿರುವುದಾಗಿ ತಿಳಿಸಿದೆ.
ಇಷ್ಟೆಲ್ಲಾ ಬೆಳವಣಿಗಳ ನಡುವೆಯೂ ಕಂಪನಿಯ ನಷ್ಟ ಮುಂದುವರಿದಿದೆ. ಆದಾಯ ಏರಿಕೆಯಾಗಿದ್ದರೂ ವೆಚ್ಚಗಳು ಹೆಚ್ಚಳವಾಗಿರುವುದು ಇದಕ್ಕೆ ಕಾರಣವಾಗಿದೆ. ಮಾರ್ಚ್ ತ್ರೈಮಾಸಿಕದಲ್ಲಿ ಉದ್ಯೋಗಿಗಳ ಮೇಲಿನ ವೆಚ್ಚಗಳು 347.8 ಕೋಟಿ ರೂ.ನಿಂದ 863.4 ಕೋಟಿ ರೂ.ಗೆ ಏರಿಕೆಯಾಗಿವೆ.

ಪಾವತಿ ಪ್ರಕ್ರಿಯೆ ಶುಲ್ಕಗಳು ಮಾರ್ಚ್ 2022ರ ತ್ರೈಮಾಸಿಕದಲ್ಲಿ ಒಂದು ವರ್ಷದ ಹಿಂದೆ ಇದ್ದ 508.7 ಕೋಟಿ ರೂ.ನಿಂದ 774.2 ಕೋಟಿ ರೂಪಾಯಿಗಳಿಗೆ ಹೆಚ್ಚಿದ್ದು, ಶೇ. 52ರಷ್ಟು ಏರಿಕೆ ದಾಖಲಾಗಿದೆ. ಮಾರ್ಕೆಟಿಂಗ್ ವೆಚ್ಚಗಳು ಕೂಡ 100.1 ಕೋಟಿ ರೂ.ಗಳಿಂದ 248.9 ಕೋಟಿ ರೂ.ಗೆ ಏರಿಕೆಯಾಗಿವೆ.
ಒಟ್ಟಾರೆ ಇಡೀ ವರ್ಷದ ಲೆಕ್ಕ ತೆಗೆದುಕೊಂಡರೆ ಮಾರ್ಚ್ 31, 2022 ಕ್ಕೆ ಕೊನೆಗೊಂಡ ವರ್ಷದಲ್ಲಿ ಪೇಟಿಎಂ 2,396.4 ಕೋಟಿ ರೂ. ನಷ್ಟ ಅನುಭವಿಸಿದೆ. ಕಳೆದ ವರ್ಷ ಕಂಪನಿ 1,701 ಕೋಟಿ ರೂ. ನಷ್ಟ ಅನುಭವಿಸಿತ್ತು. ಆದರೆ ಆದಾಯ 2,802.4 ಕೋಟಿ ರೂ.ನಿಂದ ಶೇ. 77.49ರಷ್ಟು ಏರಿಕೆ ಕಂಡಿದ್ದು 4,974.2 ಕೋಟಿ ರೂ.ಗೆ ತಲುಪಿರುವುದೇ ಕಂಪನಿಯ ಪಾಲಿನ ಶುಭ ಸುದ್ದಿಯಾಗಿದೆ.
Paytm Q4 Results Company Net Loss Widens To Rs 761 Crore In March Quarter.
15-09-26 04:46 pm
HK News Staffer
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 12:50 pm
HK News Staffer
ಕರಾವಳಿ ಅಭಿವೃದ್ಧಿಗೆ ಡಿಕೆಶಿ ಸರ್ಕಾರದ ಮಹತ್ವದ ಹೆಜ್...
15-09-26 09:46 am
ತುಳುನಾಡಿನಲ್ಲಿ ವಿಭಿನ್ನ ಗಣೇಶ ಚತುರ್ಥಿ ; ಮಣ್ಣಿನ ಮ...
14-09-26 10:01 pm
ಮಂಗಳೂರಿನಲ್ಲಿ ಎರಡು ದಿನ ಸಿಎಂ ಡಿಕೆಶಿ ವಾಸ್ತವ್ಯ ;...
14-09-26 06:02 pm
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
15-09-26 12:55 pm
HK News Staffer
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am
ಜೈಲಿನಲ್ಲಿದ್ದರೂ ಹಳೆ ಚಾಳಿ ಬಿಡದ ಪ್ರಜ್ವಲ್ ರೇವಣ್ಣ...
12-09-26 07:41 pm