ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm