ಬ್ರೇಕಿಂಗ್ ನ್ಯೂಸ್
24-05-22 05:25 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 24 : ಬೆಂಗಳೂರಿನಲ್ಲೊಬ್ಬ ರಸ್ತೆ, ಗೋಡೆ, ಕಾಲೇಜು ಆವರಣದಲ್ಲಿ ಸಾರಿ ಸಾರಿ ಎಂದು ಕೆಂಪು ಬಣ್ಣದಲ್ಲಿ ನೂರಾರು ಕಡೆ ರಾತ್ರೋರಾತ್ರಿ ಬರೆದಿಟ್ಟಿದ್ದು ಜನರ ಕುತೂಹಲಕ್ಕೆ ಕಾರಣವಾಗಿದೆ. ಯಾರೋ ಪ್ರೀತಿ ಹುಚ್ಚಿನಲ್ಲಿ ಈ ಕೆಲಸ ಮಾಡಿರಬೇಕು. ಆದರೆ ಯಾರು, ಯಾರಿಗೆ ಈ ಸಾರಿ ಕೇಳಿದ್ದಾರೆ ಎನ್ನುವುದರ ಪತ್ತೆಗೆ ಸ್ಥಳೀಯರು ಪೊಲೀಸರ ಮೊರೆ ಹೋಗಿದ್ದಾರೆ.
ಸುಂಕದಕಟ್ಟೆಯ ಶಾಂತಿಧಾಮ ಸ್ಕೂಲ್ ಬಳಿ ಅಪರಿಚಿತ ವ್ಯಕ್ತಿಯೊಬ್ಬ ಕ್ಷಮಿಸು (Sorry) ಎಂದು ಗೋಡೆ, ರಸ್ತೆಯಲ್ಲೆಲ್ಲಾ ಬರೆದಿದ್ದಾನೆ. ಬರೀ ಶಾಲೆ ಅಷ್ಟೇ ಅಲ್ಲ, ಅಲ್ಲೇ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್, ಮೆಟ್ಟಿಲ ಮೇಲೆಲ್ಲಾ 'Sorry' ಎಂದು ಬರೆಯಲಾಗಿದೆ. ಕಾಲೇಜ್ ಮುಂದಿನ ರಸ್ತೆ ಮೇಲೂ ಸಾರಿ ಅಂತ ನೂರಾರು ಸಾರಿ ಬರೆದಿದ್ದು ಕಂಡುಬಂದಿದೆ. ಇಂದು ಬೆಳಗ್ಗೆ ಎದ್ದು ನೋಡಿದ ಸ್ಥಳೀಯರಿಗೆ ಅಚ್ಚರಿಯಾಗಿದ್ದು, ಯಾರು ಯಾರಿಗಾಗಿ ಬರೆದಿದ್ದಾನೆ ಎಂದು ಕುತೂಹಲಗೊಂಡಿದ್ದಾರೆ.


ರಾತ್ರಿ ಬೈಕ್ನಲ್ಲಿ ಬಂದು ಬರೆದ ಅಪರಿಚಿತರು !
ಸ್ಥಳೀಯರು ಹೇಳುವ ಪ್ರಕಾರ ರಾತ್ರಿ 11 ರಿಂದ 12 ಗಂಟೆ ಸಮಯದಲ್ಲಿ ಡ್ಯೂಕ್ ಬೈಕ್ ನಲ್ಲಿ ಆಗಮಿಸಿದ್ದ ಇಬ್ಬರು ಯುವಕರು ಈ ಕೃತ್ಯ ಮಾಡಿದ್ದಾರೆ ಎನ್ನಲಾಗಿದೆ. ಫುಡ್ ಡೆಲಿವರಿ ಬ್ಯಾಗ್ ನೊಂದಿಗೆ ಬಂದಿದ್ದರು. ಅವರೇ ಸ್ಪ್ರೇ ಪೈಂಟ್ ಮೂಲಕ ಸಿಕ್ಕ ಸಿಕ್ಕಲ್ಲಿ ಸಾರಿ ಎಂದು ಬರೆದಿದ್ದಾರೆ ಎನ್ನುವ ಶಂಕೆಯಿದೆ. ಪಾಗಲ್ ಪ್ರೇಮಿಗಳದ್ದೇ ಕೃತ್ಯ ಅಂತ ಸ್ಥಳೀಯರು ಶಂಕಿಸಿದ್ದಾರೆ.


ಬೆಳಗ್ಗೆ ಎದ್ದು ರಸ್ತೆ, ಶಾಲೆ ನೋಡಿದ ಸ್ಥಳೀಯರಿಗೆ ಶಾಕ್ ಆಗಿದೆ. ಬಳಿಕ ಸ್ಛಳೀಯರು ಹಾಗೂ ಕಾಲೇಜ್ ಪ್ರಿನ್ಸಿಪಾಲ್ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಬರಹಗಳನ್ನು ಪರಿಶೀಲಿಸಿದ್ದಾರೆ. ಸುತ್ತಮುತ್ತಲಿನ ಸಿಸಿಟಿವಿಗಳ ಪರಿಶೀಲನೆ ನಡೆಸಿ ಅಪರಿಚಿತ ವ್ಯಕ್ತಿಗೆ ಹುಡುಕಾಟ ನಡೆಸಿದ್ದಾರೆ.
Roads and walls painted with Sorry in Bangalore, public approach police to investigate the case.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm