ಬ್ರೇಕಿಂಗ್ ನ್ಯೂಸ್
25-05-22 04:01 pm Bengalore Correspondent ಕರ್ನಾಟಕ
ಬೆಂಗಳೂರು, ಮೇ 25: ವಿಜಯೇಂದ್ರ ಅವರಿಗೆ ಟಿಕೆಟ್ ತಪ್ಪಿರುವುದಕ್ಕೂ ಬಿ.ಎಲ್ ಸಂತೋಷ್ ಅವರಿಗೂ ಸಂಬಂಧ ಇಲ್ಲ. ಅನಗತ್ಯವಾಗಿ ಮಾಧ್ಯಮಗಳಲ್ಲಿ ಅವರ ಹೆಸರು ಬರುತ್ತಿದೆ. ಇದರಲ್ಲಿ ಏನೂ ಅರ್ಥ ಇಲ್ಲ. ಸಾಮರ್ಥ್ಯ ಮತ್ತು ಪಕ್ಷದಲ್ಲಿ ನಿಷ್ಠೆ ಇರುವವರನ್ನು ಪಕ್ಷ ಯಾವತ್ತೂ ಕೈಬಿಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಸುದ್ದಿಗಾರರು ಕೇಳಿದ ಪ್ರಶ್ನೆಗೆ, ಪುತ್ರನಿಗೆ ಟಿಕೆಟ್ ತಪ್ಪಿರೋದರ ಬಗ್ಗೆ ವಿಶೇಷ ಅರ್ಥ ಕಲ್ಪಿಸುವ ಅಗತ್ಯವಿಲ್ಲ. ಮುಂದೆ ಅವರಿಗೆ ಬೇರೆ ಬೇರೆ ಅವಕಾಶಗಳು ಇದ್ದಾವೆ. ಇವಾಗ ಅವ್ರು ಬಿಜೆಪಿ ಉಪಾಧ್ಯಕ್ಷರಾಗಿದ್ದಾರೆ. ಮುಂದೆ ಅವರಿಗೆ ಬೇರೆ ರೀತಿಯ ಅವಕಾಶಗಳನ್ನು ಹೈಕಮಾಂಡ್ ಮಾಡಿಕೊಡುತ್ತದೆ. ಇವನ್ನೆಲ್ಲ ಮೋದಿ, ಜೆಪಿ ನಡ್ಡಾ ನೋಡಿಕೊಳ್ಳುತ್ತಾರೆ.

2023ಕ್ಕೆ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ ಬರಬೇಕು ಅನ್ನೋದು ನಮ್ಮ ಗುರಿ. ಆ ದಿಕ್ಕಿನಲ್ಲಿ ಏನೆಲ್ಲ ಪ್ರಯತ್ನಗಳನ್ನು ಮಾಡಬೇಕೋ ಅದನ್ನು ಈಗಿಂದಲೇ ಮಾಡುತ್ತೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿಯುವ ವಿಶ್ವಾಸ ಇದೆ. ಮೋದಿಯವರ ನೇತೃತ್ವದಲ್ಲಿ ನಾವು ಸ್ಪಷ್ಟ ಬಹುಮತ ಪಡೆಯುತ್ತೇವೆ, ಮತ್ತೆ ಅಧಿಕಾರಕ್ಕೆ ಬರ್ತೇವೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಶೀಘ್ರದಲ್ಲೇ ಪಕ್ಷದಲ್ಲಿ ಕೆಲವು ಮಾರ್ಪಾಡುಗಳಾಗಬಹುದು. ಹೆಚ್ಚಿನ ಜವಾಬ್ದಾರಿಗಳನ್ನು ಕೊಡಬಹುದು ಎಂದು ಪಕ್ಷದಲ್ಲಿ ಬದಲಾವಣೆ ಆಗುವ ಸುಳಿವು ನೀಡಿದರು. ಮುಂದಿನ ವಿಧಾಸಭೆಯಲ್ಲಿ ವಿಜಯೇಂದ್ರಗೆ ಟಿಕೆಟ್ ಸಿಗುತ್ತಾ ಎಂಬ ಪ್ರಶ್ನೆಗೆ, ಈಗಲೇ ಅದರ ಬಗ್ಗೆ ಯಾಕೆ ಚರ್ಚೆ. ಸಮಯ ಬಂದಾಗ ಅದರ ಬಗ್ಗೆ ನೋಡೋಣ ಎಂದರು ಬಿಎಸ್ವೈ.
Yediyurappa said Santhosh had nothing to do with this. “Unnecessarily, the media is taking those names,” he said. Yediyurappa also did not comment on the possibility of Vijayendra getting the 2023 Assembly election ticket. “Why discuss that now? Let's see when the time comes,” he said.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm