ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.


ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm