ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.
ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
06-07-25 08:48 pm
Bangalore Correspondent
ತುರ್ತು ಪರಿಸ್ಥಿತಿ ಕೆಟ್ಟ ಘಟನೆಯಾಗಿದ್ದು, ಅದನ್ನು ಯ...
06-07-25 06:25 pm
Vandalism in Shivamogga Raghigudda: ಶಿವಮೊಗ್ಗ...
06-07-25 04:50 pm
Women's Commission Chairperson Nagalakshmi; ಥ...
04-07-25 10:44 pm
Heart attack news, Karnataka: ರಾಜ್ಯದಲ್ಲಿ ಹೃದಯ...
04-07-25 10:18 pm
06-07-25 03:53 pm
HK News Desk
ಹಿಜಾಬ್ ; ಪರೀಕ್ಷಾ ಕೊಠಡಿಗೆ ನುಗ್ಗಿ ಆವಾಜ್, ಪಿಇಎಸ್...
02-07-25 11:05 pm
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
05-07-25 05:16 pm
Mangalore Correspondent
Ivan Dsouza, Mangaluru: ಮಂಗಳೂರು ಬ್ರಾಂಡ್ ನೇಮ್,...
05-07-25 04:19 pm
MLA Vedavyas Kamath: ಸೌತ್ ಕೆನರಾ ಬ್ರಿಟಿಷರ ಹೆಸರ...
05-07-25 02:32 pm
Hindu Jagarana Vedike, Moodbidri, Obscene vid...
05-07-25 12:56 pm
Mangalore FIR, Dharmasthala, Criminal Activit...
04-07-25 10:54 pm
06-07-25 04:14 pm
Mangalore Correspondent
Pregnant Woman Murder, Chamarajanagar: ಗರ್ಭಿಣ...
06-07-25 01:23 pm
6 ವರ್ಷಗಳ ಹಿಂದೆ ಮಗನ ಹತ್ಯೆ ; ಇಂದು ಅಪ್ಪನ ಗುಂಡಿಕ್...
05-07-25 11:04 pm
Puttur News, Girl Pregnant, Father Arrest: ಸಹ...
05-07-25 09:06 pm
Puttur, Pregnant, Arrest, Jagannivasa Rao: ಸಹ...
05-07-25 01:20 pm