ಬ್ರೇಕಿಂಗ್ ನ್ಯೂಸ್
27-05-22 03:18 pm HK News Desk ಕರ್ನಾಟಕ
ಮಂಡ್ಯ, ಮೇ 27: ಶ್ರೀರಂಗಪಟ್ಟಣದ ನಿಮಿಷಾಂಬ ದೇಗುಲದ ಬಳಿಯ ಕಾವೇರಿ ನದಿಯಲ್ಲಿ ಐಷಾರಾಮಿ ಬಿಎಂಡಬ್ಲ್ಯು ಕಾರು ಪತ್ತೆಯಾಗಿ ಪೊಲೀಸರನ್ನೇ ಬೇಸ್ತು ಬೀಳಿಸಿದ ಪ್ರಕರಣ ನಡೆದಿದೆ.
ಶುಕ್ರವಾರ ಬೆಳಗ್ಗೆ ನದಿಯಲ್ಲಿ ಅರ್ಧ ಮುಳುಗಿದ ಸ್ಥಿತಿಯಲ್ಲಿ ಕಾರು ಪತ್ತೆಯಾಗಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಾರನ್ನು ನದಿಯಿಂದ ಹೊರಕ್ಕೆಳೆದು ತಂದು ಅದರ ಮಾಲೀಕರನ್ನು ಪತ್ತೆ ಮಾಡಿ ಕರೆ ಮಾಡಿದ್ದಾರೆ. ಆದರೆ ಪೊಲೀಸರು ಕರೆ ಮಾಡಿದಾಗ, ಕಾರಿನ ಬಗ್ಗೆ ಅಚ್ಚರಿಯ ಮಾಹಿತಿ ಹೊರಬಂದಿದೆ.
ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬ ಕಾರನ್ನು ಬೇಕಂತಲೇ ನದಿಗೆ ನೂಕಿ ಬಂದಿದ್ದ ಎನ್ನುವ ವಿಚಾರ ತಿಳಿದು ಪೊಲೀಸರು ದಿಗಿಲುಗೊಂಡಿದ್ದಾರೆ. ಕಾರಿನ ರಿಜಿಸ್ಟರ್ ನಂಬರ್ ಆಧಾರದಲ್ಲಿ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನಿವಾಸಿ ರೂಪೇಶ್ ಎಂಬಾತನನ್ನು ಪತ್ತೆ ಮಾಡಿದ್ದು, ಬಳಿಕ ಅವರನ್ನು ಸ್ಥಳಕ್ಕೆ ಕರೆಸಲಾಗಿದೆ. ಬಳಿಕ ನೋಡಿದರೆ ಆತ ಮಾನಸಿಕ ಅಸ್ವಸ್ಥತೆಯಿಂದ ಕಾರನ್ನೇ ತಂದು ನದಿಗೆ ಹಾಕಿದ್ದಾನೆ ಅನ್ನೋದು ತಿಳಿದುಬಂದಿದೆ.
ತನ್ನ ತಾಯಿಯ ನಿಧನದ ಬಳಿಕ ಮಾನಸಿಕ ಅಸ್ವಸ್ಥನಾಗಿದ್ದ ರೂಪೇಶ್, ಅದೇ ಕೊರಗಿನಲ್ಲಿದ್ದ. ಇದೀಗ ತನ್ನ ಐಷಾರಾಮಿ ಕಾರಿನಲ್ಲಿ ಶ್ರೀರಂಗಪಟ್ಟಣಕ್ಕೆ ಬಂದು ಅಲ್ಲಿ ಕಾರನ್ನು ನದಿಯಲ್ಲಿ ಮುಳುಗಿಸಿ ಹಿಂತಿರುಗಿದ್ದ. ಕಾರು ಪತ್ತೆಯಾದ ಬಳಿಕ ಪೊಲೀಸರು ಆತನನ್ನು ಸ್ಥಳಕ್ಕೆ ಕರೆಸಿ ವಿಚಾರಣೆ ನಡೆಸಿದರೆ ಅಸಂಬದ್ಧ ಹೇಳಿಕೆ ನೀಡುತ್ತಿದ್ದ. ರೂಪೇಶ್ ಉತ್ತರಗಳಿಂದ ವಿಚಲಿತರಾಗಿದ್ದ ಪೊಲೀಸರು ಬಳಿಕ ಸಂಬಂಧಿಕರನ್ನು ಕರೆಸಿದ್ದರು. ಕೊನೆಗೆ ಸಂಬಂಧಿಕರ ಹೇಳಿಕೆಯಂತೆ, ಪ್ರಕರಣ ದಾಖಲಿಸದೆ ಪೊಲೀಸರು ಬಿಟ್ಟು ಕಳುಹಿಸಿದ್ದಾರೆ. ಸಂಬಂಧಿಕರು ಆತನನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ದಾಖಲು ಮಾಡುವುದಾಗಿ ತಿಳಿಸಿದ್ದಾರೆ.
A man pushes his luxury BMW car into the Kaveri river in Mandya. After tracing the registered number the police came to know that the owner belongs to Bangalore and because his mental health is not stable this act has been done.
22-04-25 02:37 pm
HK News Desk
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
ನ್ಯಾ.ಕೃಷ್ಣ ದೀಕ್ಷಿತ್, ನ್ಯಾ.ಹೇಮಂತ್ ಚಂದನಗೌಡರ್ ಸೇ...
21-04-25 07:10 pm
Jayaprakash Hegde; ಹಿಂದೂಗಳಂತೆ ಮುಸ್ಲಿಮರಲ್ಲು 93...
19-04-25 03:04 pm
22-04-25 07:13 pm
HK News Desk
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
Jagdeep Dhankhar, Justice Varma case: ರಾಷ್ಟ್ರ...
18-04-25 02:21 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm