ಬ್ರೇಕಿಂಗ್ ನ್ಯೂಸ್
29-05-22 08:23 pm HK News Desk ಕರ್ನಾಟಕ
ಹಾವೇರಿ, ಮೇ 29: ಬಸವರಾಜ ಹೊರಟ್ಟಿ ಸೋಲಿನ ಭೀತಿ ಹಾಗೂ ಅಧಿಕಾರದ ಆಸೆಯಿಂದ ಬಿಜೆಪಿ ಸೇರಿದ್ದಾರೆ. ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ನಂಬಿದ ಸಿದ್ಧಾಂತ ಬಲಿ ಕೊಟ್ಟಿದ್ದಾರೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಸಲೀಂ ಅಹ್ಮದ್ ಹೇಳಿದ್ದಾರೆ.
ಹಾವೇರಿ ನಗರದಲ್ಲಿ ಸುದ್ದಿಗೋಷ್ಟಿ ನಡೆಸಿದ ಸಲೀಂ ಅಹ್ಮದ್, ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರಾಜ ಗುರಿಕಾರ್ ಸ್ಪರ್ಧಿಸಿದ್ದಾರೆ. ಬಸವರಾಜ ಗುರಿಕಾರ್ 40 ವರ್ಷಗಳಿಂದ ಜನರ ಸೇವೆ ಮಾಡುತ್ತಿದ್ದಾರೆ. ಅವರ ಕೆಲಸ ಪ್ರಾಮಾಣಿಕತೆ, ಹೋರಾಟ ಎಲ್ಲ ಶಿಕ್ಷಕರಿಗೆ ಗೊತ್ತಿದೆ. ಬಸವರಾಜ ಹೊರಟ್ಟಿಯವರು ಈ ಕ್ಷೇತ್ರದಿಂದ ಏಳು ಬಾರಿ ಆಯ್ಕೆಯಾಗಿದ್ದಾರೆ. ಹಾಗಿದ್ದರೂ ಕೊನೆಗಾಲದಲ್ಲಿ ಹೊರಟ್ಟಿಯವರು ಪಕ್ಷ ಬದಲಾವಣೆ ಮಾಡಿದ್ದಾರೆ. ಇದಕ್ಕೆ ಕಾರಣ ಸೋಲಿನ ಭೀತಿ ಇರಬಹುದು. ಇಲ್ಲದಿದ್ದರೆ ಅಧಿಕಾರದ ಆಸೆಯೂ ಇರಬಹುದು. ಮತ್ತೆ ಚೇರ್ಮನ್ ಆಗಿ ಮುಂದುವರೆಯಬಹುದು ಎಂಬ ದೂರಾಲೋಚನೆ ಇಟ್ಟುಕೊಂಡು ಬಿಜೆಪಿಗೆ ಹೋಗಿದ್ದಾರೆ.

ಈತನಕ ಜಾತ್ಯಾತೀತ ವಿಚಾರ ಇಟ್ಟುಕೊಂಡು ಚುನಾವಣೆ ಗೆದ್ದು ಅವರು ಈಗ ಕೋಮುವಾದಿ ಪಕ್ಷಕ್ಕೆ ಸೇರಿದ್ದಾರೆ. ಹೊರಟ್ಟಿ ತಮ್ಮ ರಾಜಕೀಯದ ಕೊನೆಯ ದಿನಗಳಲ್ಲಿ ಸಿದ್ಧಾಂತ ಬಲಿ ಕೊಟ್ಟಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ ಪಕ್ಷಕ್ಕೆ ಸೇರಿಕೊಂಡಿದ್ದಾರೆ. ಹಾಗಾಗಿ ಶಿಕ್ಷಕರು ಈ ಬಾರಿ ಬಸವರಾಜ ಗುರಿಕಾರ್ ಅವರಿಗೆ ಆಶೀರ್ವಾದ ಮಾಡಬೇಕು. ಜಾತ್ಯತೀತ ಸಿದ್ಧಾಂತಕ್ಕೆ ಜಯ ದೊರಕಿಸಬೇಕು ಎಂದು ಹೇಳಿದರು.

ಇತ್ತೀಚೆಗೆ ಮಾಜಿ ಪ್ರಧಾನಿ ನೆಹರು ಹಾಗೂ ಪ್ರಧಾನಿ ಮೋದಿ ಸಾಧನೆಗಳ ಕುರಿತು ಭಾರೀ ಚರ್ಚೆ ನಡೆಯುತ್ತಿದೆ. ಅಧಿಕಾರಕ್ಕೆ ಬಂದು ಎಂಟು ವರ್ಷವಾದರೂ ಒಂದೇ ಒಂದು ಪ್ರೆಸ್ ಕಾನ್ಫರೆನ್ಸ್ ಮಾಡಿಲ್ಲ. ಸುಳ್ಳು ಹೇಳುತ್ತಾ ಮೋದಿ ಅಧಿಕಾರ ನಡೆಸುತ್ತಾ ಬಂದಿದ್ದಾರೆ. ಮೈ ನರೇಂದ್ರ ಮೋದಿ ಹುಂ ಅಂತ ಹೇಳ್ತಾರಲ್ಲಾ ಅದೊಂದೇ ಅವರು ಹೇಳಿದ ಸತ್ಯ. ನೆಹರೂರವರು ತಮ್ಮ ಅಧಿಕಾರಾವಧಿಯಲ್ಲಿ ಕಟ್ಟಿ ಬೆಳೆಸಿದ ಸಂಸ್ಥೆ, ಕಟ್ಟಡಗಳು ಎಲ್ಲವನ್ನೂ ಇವರು ಮಾರಿದರು. ಅವರು ಕಟ್ಟಿದ್ದರು, ಇವರು ಮಾರಿದರು. ಇದೇ ನೆಹರೂ ಹಾಗೂ ಮೋದಿಯವರ ನಡುವೆ ಇರುವ ವ್ಯತ್ಯಾಸ ಎಂದು ಮೋದಿ ವಿರುದ್ದ ಸಲೀಂ ಅಹ್ಮದ್ ವ್ಯಂಗ್ಯವಾಡಿದರು.
Desire for position Basavaraj Horatti has joined BJP, slams KPCC secretary Salim Ahmed.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm