ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm