ಬ್ರೇಕಿಂಗ್ ನ್ಯೂಸ್
30-05-22 05:12 pm HK News Desk ಕರ್ನಾಟಕ
ಬಾಗಲಕೋಟೆ, ಮೇ 30: ಮುಸ್ಲಿಂ ಹುಡುಗನೊಬ್ಬ ಮದ್ರಸಕ್ಕೆ ಹಾಕ್ಕೊಂಡು ಹೋಗುವ ಬಿಳಿ ಟೋಪಿಯನ್ನು ಧರಿಸಿ ಕಾಲೇಜಿಗೆ ಬಂದ ಕಾರಣಕ್ಕೆ ಪ್ರಾಂಶುಪಾಲ ಸೇರಿ ಸ್ಥಳೀಯ ಪೊಲೀಸರು ಹಲ್ಲೆ ನಡೆಸಿದ್ದಾರೆಂಬ ಘಟನೆ ಬಗ್ಗೆ ಕೋರ್ಟ್ ಆದೇಶದನ್ವಯ ಅಲ್ಲಿನ ಪೊಲೀಸರ ವಿರುದ್ಧವೇ ಎಫ್ಐಆರ್ ದಾಖಲಾಗಿದೆ.
ತೇರದಾಳ ಪೊಲೀಸ್ ಠಾಣೆಯ ಪಿಎಸ್ಐ ರಾಜು ಬೀಳಗಿ, ಪೊಲೀಸ್ ಕಾನ್ಸ್ಟೇಬಲ್ಗಳಾದ ಗಣಿ ಪಿ.ಹೆಚ್, ಮಲ್ಲಿಕಾರ್ಜುನ ಕೆಂಚಣ್ಣವರ, ಎಸ್.ಬಿ.ಕಲಾಟೆ, ಎಸ್.ಸಿ. ಮದನಮಟ್ಟಿ, ಸನ್ನತ್ತಿ ಹಾಗೂ ಕಾಲೇಜಿನ ಪ್ರಿನ್ಸಿಪಾಲ್ ಅಣ್ಣಪ್ಪಯ್ಯ ಪೂಜಾರಿ ವಿರುದ್ಧ ತೇರದಾಳ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
ಫೆಬ್ರವರಿ 18ರಂದು ರಾಜ್ಯದೆಲ್ಲೆಡೆ ಹಿಜಾಬ್ ವಿವಾದ ತಲೆಎತ್ತಿದ್ದಾಗ ತೇರದಾಳ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನಲ್ಲಿ ಈ ಘಟನೆ ನಡೆದಿತ್ತು. ವಿದ್ಯಾರ್ಥಿ ನವೀದ್ ಥರಥರಿ ಎಂಬಾತ ಕಾಲೇಜಿಗೆ ಬಿಳಿ ಟೋಪಿ ಧರಿಸಿ ಬಂದಿದ್ದು ಕಾಲೇಜಿನ ಪ್ರಿನ್ಸಿಪಾಲ್ ವಿರೋಧಿಸಿದ್ದರು. ಬಳಿಕ ತೇರದಾಳ ಪೊಲೀಸರಿಗೆ ಕರೆ ಮಾಡಿ ವಿದ್ಯಾರ್ಥಿಯನ್ನು ಕಾಲೇಜಿನಿಂದ ಹೊರ ಹಾಕಿಸಿದ್ದರು. ಆದರೆ ತನ್ನ ಮೇಲೆ ಪ್ರಿನ್ಸಿಪಾಲ್ ಸೇರಿ 7 ಪೊಲೀಸ್ ಸಿಬ್ಬಂದಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿ ಜಮಖಂಡಿ ಆಸ್ಪತ್ರೆಗೆ ದಾಖಲಾಗಿದ್ದ. ಅಲ್ಲದೆ, ಘಟನೆಗೆ ಸಂಬಂಧಿಸಿ ಬನಹಟ್ಟಿಯ ಜೆಎಂಎಫ್ಸಿ ನ್ಯಾಯಾಲಯಕ್ಕೆ ಖಾಸಗಿ ರಿಟ್ ಹಾಕಿ ಘಟನೆ ಬಗ್ಗೆ ಪ್ರಶ್ನೆ ಮಾಡಿದ್ದ. ಪೊಲೀಸರು ಮತ್ತು ಪ್ರಾಂಶುಪಾಲರ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಕೀಲರ ಮೂಲಕ ಒತ್ತಾಯಿಸಿದ್ದ. ಇದೀಗ ಕೋರ್ಟ್ ಅದೇ ತೇರದಾಳ ಠಾಣೆಯಲ್ಲಿ ಅಲ್ಲಿನದ್ದೇ ಪೊಲೀಸರ ವಿರುದ್ಧ ಎಫ್ಐಆರ್ ದಾಖಲಿಸಿ ಮೇಲಧಿಕಾರಿಯಿಂದ ತನಿಖೆ ನಡೆಸಿ ವರದಿ ನೀಡಲು ಆದೇಶಿಸಿದೆ.
An FIR has been lodged against seven people, including principal, sub inspectors and five others in connection with alleged thrashing of a student for wearing a skull cap on the premises of a college in Karnataka, police said on Sunday (May 29).
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm