ಬ್ರೇಕಿಂಗ್ ನ್ಯೂಸ್
01-06-22 07:42 pm HK News Desk ಕರ್ನಾಟಕ
ದಾವಣಗೆರೆ, ಜೂ 1: ದಾವಣಗೆರೆ ನಗರದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಎಸ್ಎಸ್ ಲೇ ಔಟ್ನಲ್ಲಿನ ಎ ಬ್ಲಾಕ್ನಲ್ಲಿನ ಮನೆಯಲ್ಲಿ ಶವ ಪತ್ತೆಯಾಗಿದೆ.
ಡಾ. ಅರುಣ್ ಚಂದ್ರ ಆತ್ಮಹತ್ಯೆಗೆ ಶರಣಾದ ವೈದ್ಯ ಎಂದು ಗುರುತಿಸಲಾಗಿದೆ. ಕಳೆದ ಮೂರು ವರ್ಷಗಳ ಹಿಂದೆ ಸಿಜೆ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆಗೆ ಸೇರಿಕೊಂಡಿದ್ದರು. ಗೌರವಧನ ರೂಪದಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು.
ಎಲ್ಲರೊಂದಿಗೂ ಅನೋನ್ಯವಾಗಿದ್ದರು. ಆಸ್ಪತ್ರೆಗೆ ಬರುವ ರೋಗಿಗಳನ್ನ ಪ್ರೀತಿಯಿಂದಲೇ ಮಾತನಾಡಿಸಿ ಚಿಕಿತ್ಸೆ ನೀಡುತ್ತಿದ್ದರು. ಅವರು ಎಲ್ಲರಿಗೂ ಅಚ್ಚುಮೆಚ್ಚು, ಕಷ್ಟಪಟ್ಟು ಓದಿ ಎಂಬಿಬಿಎಸ್ ಮಾಡಿ ವೈದ್ಯರಾಗಿದ್ದರು.
ಚಂದ್ರಶೇಖರ ಎಂಬುವವರ ಪುತ್ರರಾದ ಅರುಣ್ ಚಂದ್ರ ತಮ್ಮ ಮನೆಯ ಬಾತ್ ರೂಮ್ನಲ್ಲಿ ಜೀನ್ಸ್ ಪ್ಯಾಂಟ್ ಅನ್ನು ಕುತ್ತಿಗೆಗೆ ಬಿಗಿದುಕೊಂಡು ನೇಣು ಹಾಕಿಕೊಂಡಿದ್ದಾರೆ. ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರಬಹುದು ಶಂಕಿಸಲಾಗಿದೆ. ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ. ಬಿ. ರಿಷ್ಯಂತ್, ಎಫ್ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಇನ್ನು ವೈದ್ಯ ಡಾ. ಅರುಣ್ ಚಂದ್ರ ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಚಿಗಟೇರಿ ಜಿಲ್ಲಾಸ್ಪತ್ರೆಯ ವೈದ್ಯರು, ಸಿಬ್ಬಂದಿ ಸಂತಾಪ ಸೂಚಿಸಿದ್ದಾರೆ.
Davanagere Government hospital doctor commits suicide. The deceased has been identified as Dr Arun. It is said that family problem is responsible for his death.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm