ಬ್ರೇಕಿಂಗ್ ನ್ಯೂಸ್
02-06-22 02:32 pm HK News Desk ಕರ್ನಾಟಕ
ಹುಬ್ಬಳ್ಳಿ, ಜೂನ್ 2 : ಧ್ವನಿವರ್ಧಕ ಬಳಕೆ ವಿಚಾರದಲ್ಲಿ ಸುಪ್ರೀಂಕೋರ್ಟ್ ಆದೇಶ ಪಾಲಿಸದವರ ಮೇಲೆ ನಾನೇ ಗುಂಡಿಟ್ಟು ಹೊಡೀತೇನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ.
ರಾಜ್ಯ ಸರ್ಕಾರದ ವಿರುದ್ಧ ಮುತಾಲಿಕ್ ಆಕ್ರೋಶ ವ್ಯಕ್ತಪಡಿಸಿದ್ದು ಸುಪ್ರೀಂ ಕೋರ್ಟ್ ಅದೇಶ ಪಾಲನೆ ಮಾಡದವರ ಬಗ್ಗೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ನಿಮಗೆ ಸರ್ಕಾರ ನಡೆಸಲು ಆಗದಿದ್ದರೆ ನನಗೆ ಕೊಡಿ, ಹೇಗೆ ಸರ್ಕಾರ ನಡೆಸಬೇಕು ಅನ್ನೋದನ್ನ ತೋರಿಸುತ್ತೇವೆ. ಸುಪ್ರೀಂ ಕೋರ್ಟ್ ಆದೇಶ ಪಾಲನೆ ಮಾಡದವರ ಮೇಲೆ ಗುಂಡು ಹಾಕುತ್ತೇನೆ. ನನ್ ಕೈಯಲ್ಲಿ ಸರ್ಕಾರ ಕೊಡಿ, ಗುಂಡು ಹೊಡೀತೀನಿ. ನೀವ್ ಯಾಕೆ ಬಾಯಿ ಮುಚ್ಚಿಕೊಂಡು ಕುಳಿತುಕೊಂಡಿದ್ದೀರಿ. ನಿಮ್ಮ ಕರ್ತವ್ಯವನ್ನು ನೀವು ಮಾಡಬೇಕು ಎಂದು ಬಿಜೆಪಿ ಸರಕಾರದ ಬಗ್ಗೆ ಕಿಡಿಕಾರಿದ್ದಾರೆ.

ನಿಮ್ಮನ್ನ ಬಟಾ ಬಯಲು ಮಾಡ್ತೇವೆ. ಮುಂದಿನ ದಿನಗಳಲ್ಲಿ ಅವರನ್ನ ಆರಿಸಿ ತರಬೇಡಿ ಎಂದು ಹೇಳಿಕೊಂಡು ಹೋಗ್ತೇವೆ. ಸರ್ಕಾರ ನಮ್ಮ ಸುಪ್ರಭಾತಕ್ಕೆ ಅಡ್ಡಿಪಡಿಸುವ ಕೆಲಸ ಮಾಡಿದ್ರು. ದೇವಸ್ಥಾನಗಳಿಗೆ ತೆರಳಿ ಸುಪ್ರಭಾತ ಹಾಕದಂತೆ ಧಮ್ಕಿ ಹಾಕಿದ್ದಾರೆ. ಸರ್ಕಾರದ ಸೊಕ್ಕು ಅಡಗಿಸುವ ತನಕ ನಮ್ಮ ಹೋರಾಟ ಮುಂದುವರೆಯುತ್ತೆ. ಬಿಜೆಪಿ ನಿಮ್ಮಪ್ಪನದು ಅಲ್ಲ, ನಾವು ರಕ್ತ ಸುರಿಸಿ ಬಿಜೆಪಿ ಕಟ್ಟಿದ್ದೇವೆ ಎಂದು ಮುತಾಲಿಕ್ ಹೇಳಿದ್ದಾರೆ.

![]()
ರಾಜಕೀಯ ಈಗ ಮಾತನಾಡುವುದಿಲ್ಲ. ನಮ್ಮ ಶ್ರಮದಿಂದ ನೀವು ಅಧಿಕಾರ ಅನುಭವಿಸುತ್ತಿದ್ದೀರಿ. ಬೊಮ್ಮಾಯಿ ಅಧಿಕಾರಕ್ಕೆ ಬಂದಾಗ ಖುಷಿ ಪಟ್ಟಿದ್ದೆವು. ಆದ್ರೆ ಇದೀಗ ತೀವ್ರ ನಿರಾಸೆಯಾಗಿದೆ. ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯ ನಾಥ್ ಕಾರ್ಯವೈಖರಿ ಅಳವಡಿಸಿಕೊಳ್ಳಬೇಕು. ಕನಿಷ್ಠ 25% ಆದ್ರು ಯುಪಿ ಮಾದರಿ ಅಳವಡಿಸಿಕೊಳ್ಳಿ. ಬೊಮ್ಮಾಯಿ ಅವರೆ ನಿಮ್ಮ ಗಟ್ಸ್ ತಾಕತ್ತು ತೋರಿಸಿ. ಇಲ್ಲದಿದ್ದರೆ ನಿಮಗೆ ಮುಂದಿನ ಚುನಾವಣೆ ಕಷ್ಟವಾಗುತ್ತೆ ಎಂದು ಹುಬ್ಬಳ್ಳಿಯಲ್ಲಿ ಪ್ರಮೋದ್ ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
Loudspeaker use for azan, will shoot those who don't follow the Supreme Court rules spark row after controversial statement made by Sri Rama Sene chief Pramod Muthalik in Hubbali.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm