ಬ್ರೇಕಿಂಗ್ ನ್ಯೂಸ್
06-06-22 08:58 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 6 : ಆಕ್ಮೆ ಕ್ಲೀನ್ ಟೆಕ್ ಸೊಲ್ಯುಷನ್ಸ್ ಕಂಪೆನಿಯು ಮಂಗಳೂರಿನಲ್ಲಿ ಹೈಡ್ರೊಜನ್ ಮತ್ತು ಅಮೋನಿಯಾ ಘಟಕ ಸ್ಥಾಪನೆ ಹಾಗೂ ಸೋಲಾರ್ ಘಟಕ ಸ್ಥಾಪನೆಗಾಗಿ 52 ಸಾವಿರ ಕೋಟಿ ರೂ. ಹೂಡಿಕೆ ಮಾಡಲಿದ್ದು ರಾಜ್ಯ ಸರ್ಕಾರ ಈ ಬಗ್ಗೆ ಮಹತ್ವದ ಒಪ್ಪಂದ ಮಾಡಿಕೊಂಡಿದೆ.
ರಾಜ್ಯ ಸರ್ಕಾರದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ.ವಿ. ರಮಣ ರೆಡ್ಡಿ ಹಾಗೂ ಆಕ್ಮೆ ಗ್ರೂಪ್ ಕಂಪೆನಿಯ ಸಿಓಓ ಸಂದೀಪ್ ಕಶ್ಯಪ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಮ್ಮುಖದಲ್ಲಿ ಒಪ್ಪಂದಕ್ಕೆ ಸಹಿ ಮಾಡಿದರು. ಇದೇ ವೇಳೆ ಮಾತನಾಡಿದ ಮುಖ್ಯಮಂತ್ರಿ ಬೊಮ್ಮಾಯಿ, ನವೀಕರಿಸಬಲ್ಲ ಇಂಧನ ಕ್ಷೇತ್ರದಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ರಾಜ್ಯ ಸರ್ಕಾರವು ಗ್ರೀನ್ ಹೈಡ್ರೋಜನ್ ನೀತಿಯನ್ನು ರೂಪಿಸುತ್ತಿದ್ದು, ಇದರ ಲಾಭ ಪಡೆದುಕೊಳ್ಳುವಂತೆ ಸಲಹೆ ನೀಡಿದರು. ಅಲ್ಲದೆ, ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ತ್ವರಿತವಾಗಿ ಅಗತ್ಯ ಬೆಂಬಲ ನೀಡಲಿದೆ. ನೀವು ಸಹ ಸಕಾಲದಲ್ಲಿ ಯೋಜನೆ ಜಾರಿಗೊಳಿಸಿ ಎಂದು ಮುಖ್ಯಮಂತ್ರಿಗಳು ಕಂಪನಿಗೆ ಸಲಹೆ ನೀಡಿದರು.
![]()
ಆಕ್ಮೆ ಗ್ರೂಪ್ ಜಾಗತಿಕ ಮಟ್ಟದಲ್ಲಿ ಹೈಡ್ರೋಜನ್ –ಅಮೋನಿಯಂ ಘಟಕಗಳ ಸ್ಥಾಪನೆಯಲ್ಲಿ ಮುಂಚೂಣಿಯಲ್ಲಿದೆ. ರಾಜಸ್ಥಾನದ ಬಿಕಾನೇರ್ ನಲ್ಲಿ ವಿಶ್ವದ ಮೊದಲ ಹೈಡ್ರೋಜನ್ - ಅಮೋನಿಯಂ ಮತ್ತು ಸೋಲಾರ್ ಘಟಕವನ್ನು ಸ್ಥಾಪಿಸಿದ್ದು, ಕಾರ್ಯಾರಂಭ ಮಾಡಿದೆ ಎಂದು ಆಕ್ಮೆ ಗ್ರೂಪ್ ನ ಉಪಾಧ್ಯಕ್ಷ ಶಶಿ ಶೇಖರ್ ತಿಳಿಸಿದ್ದಾರೆ.

ಇತ್ತೀಚೆಗೆ ಸ್ವಿಟ್ಸರ್ಲೆಂಡಿನ ದಾವೊಸ್ ನಲ್ಲಿ ರೆನ್ಯೂ ಪವರ್ ಕಂಪೆನಿಯವರು ನವೀಕರಿಸಬಹುದಾದ ಇಂಧನ ವಲಯದಲ್ಲಿ ಕರ್ನಾಟಕದಲ್ಲಿ 50 ಸಾವಿರ ಕೋಟಿ ರೂ. ಹೂಡಿಕೆ ಒಪ್ಪಂದ ಮಾಡಿಕೊಂಡಿತ್ತು. ಆಕ್ಮೆ ಜೊತೆಗಿನ ಒಪ್ಪಂದ ಏರ್ಪಟ್ಟ ವೇಳೆ, ಇಂಧನ ಸಚಿವ ವಿ. ಸುನಿಲ್ ಕುಮಾರ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ, ಆಕ್ಮೆ ಗ್ರೂಪ್ ಅಧಿಕಾರಿಗಳಾದ ಎಂ.ವಿ.ವಿ.ಎಸ್ ರೆಡ್ಡಿ, ಅರುಣ್ ಚೋಪ್ರಾ ಮತ್ತಿತರರು ಉಪಸ್ಥಿತರಿದ್ದರು.
Gurugram-based renewable energy company ACME Cleantech Solutions on Monday signed up with Karnataka proposing to invest about Rs 52,000 crore in a 1.2 million tonnes per annum (MTPA) green hydrogen and ammonia plant, along with an associated solar power unit in Mangaluru.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm