ಬ್ರೇಕಿಂಗ್ ನ್ಯೂಸ್
14-06-22 07:53 pm Bengalore Correspondent ಕರ್ನಾಟಕ
ಬೆಂಗಳೂರು, ಜೂ 14: ಕರ್ನಾಟಕದ ನೂತನ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕಗೊಂಡಿದ್ದಾರೆ. ಉಪ ಲೋಕಾಯುಕ್ತರಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಅವರನ್ನು ಲೋಕಾಯಕ್ತರಾಗಿ ನೇಮಕ ಮಾಡಲಾಗಿದೆ.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಂಗಳವಾರ ಈ ಕುರಿತು ಆದೇಶ ಹೊರಡಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಲ್ಲಿಕೆ ಮಾಡಿದ್ದ ಶಿಫಾರಸಿಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದು, ಅಧಿಕೃತ ಆದೇಶ ಹೊರಬಿದ್ದಿದೆ.

ಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ ಜನವರಿ 27, 2022ರಂದು ನಿವೃತ್ತರಾಗಿದ್ದರು. ಬಳಿಕ ಕರ್ನಾಟಕ ಲೋಕಾಯುಕ್ತ ಹುದ್ದೆ ಖಾಲಿಯಾಗಿತ್ತು.
ಪಿ. ವಿಶ್ವನಾಥ ಶೆಟ್ಟಿ ನಿವೃತ್ತರಾದ ಬಳಿಕ ನೂತನ ಲೋಕಾಯುಕ್ತರ ನೇಮಕಕ್ಕೆ ಸರ್ಕಾರ ವಿಳಂಬ ಮಾಡಿತ್ತು. ಈ ಕುರಿತು ಚರ್ಚೆಗಳು ಆರಂಭವಾಗಿದ್ದವು. ಮಂಗಳವಾರ ಅಂತಿಮವಾಗಿ ಹೊಸ ಲೋಕಾಯುಕ್ತರ ನೇಮಕ ಮಾಡಲಾಗಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳು, ವಿಧಾನ ಪರಿಷತ್ ಸಭಾಪತಿ, ವಿಧಾನಸಭೆ ಸ್ಪೀಕರ್ ಮತ್ತು ಪ್ರತಿಪಕ್ಷ ನಾಯಕರ ಜೊತೆ ಮಾತುಕತೆ ನಡೆಸಿದ ಬಳಿಕ ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ ನೇಮಕದ ಕುರಿತು ಶಿಫಾರಸು ಮಾಡಿದ್ದರು.
ನ್ಯಾಯಮೂರ್ತಿ ಭೀಮನಗೌಡ ಸಂಗನಗೌಡ ಪಾಟೀಲ್ 1/6/1956ರಂದು ಜನಿಸಿದರು. 5/9/1980ರಂದು ವಕೀಲರಾಗಿ ನೋಂದಣಿಯಾದರು. ಜಿಲ್ಲಾ ಮತ್ತು ಕರ್ನಾಟಕ ಹೈಕೋರ್ಟ್ನಲ್ಲಿ ವಕೀಲರಾಗಿ ಪ್ರಾಕ್ಟೀಸ್ ಮಾಡಿದರು. 21/10/2004ರಲ್ಲಿ ಕರ್ನಾಟಕ ಹೈಕೋರ್ಟ್ ಖಾಯಂ ನ್ಯಾಯಮೂರ್ತಿಯಾಗಿ ನೇಮಕವಾದರು.
After a long delay, the Karnataka government has appointed Justice Bhimanagouda Sanganagouda Patil as the next Lokayukta of the state. Justice Patil is currently serving as Upalokayukta. The Lokayukta post has been vacant since the retirement of Justice Vishwanath Shetty in January this year. Justice Patil is a former judge in Karnataka High Court. He will take oath as Lokayukta on June 15.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm