ಬ್ರೇಕಿಂಗ್ ನ್ಯೂಸ್
29-09-20 09:41 pm Headline Karnataka News Network ಕರ್ನಾಟಕ
ಚಿಕ್ಕಮಗಳೂರು, ಸೆ.29: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ದೆಯಾಗಿರುವ ಸಚಿವ ಸಿ.ಟಿ.ರವಿ, ಪಕ್ಷ ಬಯಸಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ಹೇಳಿದ್ದರು. ಈಗ ಮತ್ತೆ ಅದೇ ಮಾತನ್ನು ಸಿಟಿ ರವಿ ಪುನರುಚ್ಚರಿಸಿದ್ದು ರಾಜೀನಾಮೆ ನೀಡುವ ವಿಚಾರದಲ್ಲಿ ತನ್ನಲ್ಲಿ ಯಾವುದೇ ಗೊಂದಲವಿಲ್ಲ. ಈಗಾಗಲೇ ರಾಜೀನಾಮೆ ಪತ್ರವನ್ನು ಟೈಪ್ ಮಾಡಿ ಇಟ್ಟುಕೊಂಡಿದ್ದೇನೆ. ಅ.2ರ ನಂತರ ಮುಖ್ಯಮಂತ್ರಿ ಜೊತೆಗೆ ಚರ್ಚಿಸಿ, ಅಂತಿಮ ನಿರ್ಧಾರ ಕೈಗೊಳ್ಳುತ್ತೇನೆಂದು ಹೇಳಿದ್ದಾರೆ.
ರಾಜೀನಾಮೆ ವಿಚಾರದಲ್ಲಿ ಚರ್ಚೆಯ ಆವಶ್ಯಕತೆ ಇಲ್ಲ. ಇದೊಂದು ಸ್ವಾಭಾವಿಕ ಪ್ರಕ್ರಿಯೆಯಾಗಿದೆ. ಸಂಘಟನೆ ಮತ್ತು ಸರಕಾರ ಎಂಬ ವಿಚಾರ ನನ್ನ ಮುಂದೆ ಬಂದಲ್ಲಿ ನನ್ನ ಆದ್ಯತೆ ಸಂಘಟನೆಯಾಗಿರಲಿದೆ ಎಂಬುದನ್ನು ಈಗಾಗಲೇ ಸ್ಪಷ್ಟಪಡಿಸಿದ್ದೇನೆ. ರಾಜೀನಾಮೆ ವಿಚಾರ ತೀರ್ಮಾನ ಮಾಡಬೇಕಿರುವುದು ಪಕ್ಷದ ವರಿಷ್ಠರು. ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡಿಕೊಂಡು ಬಂದಿರುವುದರಿಂದ ರಾಜೀನಾಮೆ ವಿಚಾರದಲ್ಲಿ ನನ್ನಲ್ಲಿ ಯಾವುದೇ ಗೊಂದಲಗಳಿಲ್ಲ, ಅಧಿಕಾರ ಎನ್ನುವುದೊಂದು ಸಾಧನವಾಗಿದೆಯೇ ಹೊರತು ಅಧಿಕಾರವೇ ಜೀವನದ ಅಂತಿಮ ಗುರಿಯಲ್ಲ ಎಂದರು.
ನನಗೆ ಪಕ್ಷವೇ ಮುಖ್ಯ, ರಾಜಕೀಯದಲ್ಲಿ ಅಧಿಕಾರ ಸಾಮಾನ್ಯ. ಹಾಗಂತ ನಾನು ಸನ್ಯಾಸಿಯಲ್ಲ, ಅಧಿಕಾರವೇ ಜೀವನದ ಗುರಿ ಎಂದು ಭಾವಿಸಿದವನೂ ಅಲ್ಲ. 1 ವರ್ಷ ಮಂತ್ರಿಯಾಗಿ ನನ್ನ ಯೋಜನೆ ಪ್ರಕಾರ ಕೆಲವು ಕೆಲಸಗಳನ್ನು ಅನುಷ್ಠಾನಗೊಳಿಸಿದ್ದೇನೆ, ಕೆಲವು ಕೆಲಸಗಳನ್ನು ಅನುಷ್ಠಾನದ ಹಂತಕ್ಕೆ ತಂದಿದ್ದೇನೆ. ಅ.1ರಂದು ಕ್ಯಾಬಿನೆಟ್ ಸಭೆ ಇದೆ. ಅ.2ರಂದು ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಿಲ್ಲೆಯ ವಾರ್ಷಿಕ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡುತ್ತೇನೆ. ಆನಂತರ ಮುಖ್ಯಮಂತ್ರಿಯೊಂದಿಗೆ ಚರ್ಚಿಸಿ ರಾಜೀನಾಮೆ ವಿಚಾರದಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದು ತಿಳಿಸಿದರು.
ಸಂಪುಟ ವಿಸ್ತರಣೆ ವೇಳೆ ಇಂತವರಿಗೇ ಮಂತ್ರಿಗಿರಿ ನೀಡಿ ಎಂದು ಹೇಳುವುದಿಲ್ಲ. ಅದು ಮುಖ್ಯಮಂತ್ರಿಯ ಜವಾಬ್ದಾರಿ. ಮುಖ್ಯಮಂತ್ರಿ ಯಡಿಯೂರಪ್ಪ ಅನುಭವಿಗಳು, ನಾವು ರಾಜಕೀಯಕ್ಕೆ ಬರುವ 20 ವರ್ಷ ಮುಂಚೇ ಅವರು ರಾಜಕೀಯದಲ್ಲಿದ್ದವರು. ಅವರು ಸಮರ್ಥರನ್ನೇ ಮಂತ್ರಿಯಾಗಿ ಮಾಡುತ್ತಾರೆ ಎಂದರು.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm