ಬ್ರೇಕಿಂಗ್ ನ್ಯೂಸ್
20-06-22 11:26 am Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ಬೆಂಗಳೂರಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿ ಅವರು 15,000 ಕೋಟಿ ರೂ.ಗಳ ಮಹತ್ವಾಕಾಂಕ್ಷೆಯ ಬೆಂಗಳೂರು ಉಪನಗರ ರೈಲ್ವೆ ಯೋಜನೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ.
ಇದು ಬೆಂಗಳೂರಿನ ಜನತೆಗೆ ಪ್ರಧಾನಿ ನೀಡುತ್ತಿರುವ ದೊಡ್ಡ ಕೊಡುಗೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಣ್ಣಿಸಿದ್ದಾರೆ. ಒಟ್ಟಾರೆ ರಾಜ್ಯದಲ್ಲಿ 50,000 ಕೋಟಿ ರೂ.ಗೂ ಅಧಿಕ ಮೊತ್ತದ ಯೋಜನೆಗಳಿಗೆ ಮೋದಿ ಚಾಲನೆ ನೀಡಲಿದ್ದಾರೆ. ಮಂಗಳವಾರ ಮೈಸೂರಿನಲ್ಲಿ ನಡೆಯಲಿರುವ ಯೋಗ ದಿನಾಚರಣೆಯಲ್ಲಿ ಪ್ರಧಾನಿ ಭಾಗವಹಿಸಲಿದ್ದಾರೆ.
ರೈಲು, ಮೂಲಭೂತ ಯೋಜನೆಗಳಿಗೆ ಪ್ರಧಾನಿ ಚಾಲನೆ
ಸೋಮವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ಯಲಹಂಕದ ವಾಯುನೆಲೆಗೆ ಬಂದಿಳಿಯುವ ಮೋದಿ, ಹೆಲಿಕಾಪ್ಟರ್ ಮೂಲಕ ಭಾರತೀಯ ವಿಜ್ಞಾನ ಸಂಸ್ಥೆಗೆ ತೆರಳಲಿದ್ದಾರೆ. ಅಲ್ಲಿ ಅವರು ಸೆಂಟರ್ ಫಾರ್ ಬ್ರೈನ್ ರಿಸರ್ಚ್ (ಸಿಬಿಆರ್) ಉದ್ಘಾಟಿಸಲಿದ್ದಾರೆ ಮತ್ತು ಬಾಗ್ಚಿ-ಪಾರ್ಥಸಾರಥಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ಮಧ್ಯಾಹ್ನ 1.25ಕ್ಕೆ ಕೊಮ್ಮಘಟ್ಟದಲ್ಲಿ ಆಯೋಜಿಸಲಾಗಿರುವ ಸಾರ್ವಜನಿಕ ಸಭೆಯಲ್ಲಿ ದಾಬಸ್ ಪೇಟೆಯಿಂದ ಹೊಸಕೋಟೆ ವರೆಗಿನ ಬಹುಕೋಟಿ ವೆಚ್ಚದ ಸ್ಯಾಟಲೈಟ್ ಟೌನ್ ರಿಂಗ್ ರೋಡ್ ಹಾಗೂ 27,000 ಕೋಟಿ ರೂ. ಅಧಿಕ ಮೊತ್ತದ ಬಹು ರೈಲು ಮತ್ತು ರಸ್ತೆ ಮೂಲಸೌಕರ್ಯ ಯೋಜನೆಗಳಿಗೆ ಅವರು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು 50,000 ಜನರಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ.
ಕಂಟೋನ್ಮೆಂಟ್ ಮತ್ತು ಯಶವಂತಪುರ ರೈಲು ನಿಲ್ದಾಣಗಳ ಪುನರಾಭಿವೃದ್ಧಿ, ಬಹು ರಸ್ತೆಗಳ ಉನ್ನತೀಕರಣ ಯೋಜನೆಗಳು ಮತ್ತು ಬೆಂಗಳೂರಿನ ಮಲ್ಟಿ ಮೋಡಲ್ ಲಾಜಿಸ್ಟಿಕ್ ಪಾರ್ಕ್ ಸೇರಿದಂತೆ ಹಲವು ಯೋಜನೆಗಳಿಗೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬೈಯಪ್ಪನಹಳ್ಳಿಯಲ್ಲಿ ನಿರ್ಮಿಸಲಾಗಿರುವ ದೇಶದ ಮೊದಲ ಹವಾನಿಯಂತ್ರಿತ ನಿಲ್ದಾಣವಾದ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣವನ್ನು ದೇಶಕ್ಕೆ ಸಮರ್ಪಿಸಲಿದ್ದಾರೆ. ಕೊಂಕಣ ರೈಲ್ವೆ ಮಾರ್ಗದ ಸಂಪೂರ್ಣ ವಿದ್ಯುದ್ದೀಕರಣ ಮತ್ತು ಇತರ ರೈಲ್ವೆ ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ.
ನಂತರ ಡಾ.ಬಿ.ಆರ್.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ (ಬೇಸ್)ನ ನೂತನ ಕ್ಯಾಂಪಸ್ ಉದ್ಘಾಟನೆ ಹಾಗೂ ಡಾ.ಅಂಬೇಡ್ಕರ್ ಪ್ರತಿಮೆಯನ್ನು ಅನಾವರಣಗೊಳಿಸಲಿದ್ದಾರೆ. ಮೇಲ್ದರ್ಜೇಗೇರಿಸಲಾಗಿರುವ ಐಟಿಐನ 150 'ತಂತ್ರಜ್ಞಾನ ಕೇಂದ್ರ'ಗಳನ್ನು ಅವರು ದೇಶಕ್ಕೆ ಅರ್ಪಿಸಲಿದ್ದಾರೆ.
PM Narendra Modi, arriving here on Monday as part of his two-day visit to the state, will give a push for the development of Bengaluru and Karnataka by launching various works, including the ambitious Rs 15,000 crore Bengaluru Suburban railway project.
22-04-25 10:15 pm
Bangalore Correspondent
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
ಜನಿವಾರ ತೆಗೆಸಿರುವ ಕ್ರಮ ನಿಯಮಬಾಹಿರ, ಧಾರ್ಮಿಕ ನಂಬಿ...
22-04-25 01:00 pm
R Ashok, Census Probe: ಜಾತಿಗಣತಿ ವರದಿಯೇ ನಕಲಿ,...
21-04-25 07:27 pm
22-04-25 10:33 pm
HK News Desk
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
No GST on UPI Payments: ಎರಡು ಸಾವಿರಕ್ಕಿಂತ ಮೇಲಿ...
20-04-25 08:42 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
22-04-25 07:37 pm
Bangalore Correspondent
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm
ರಾಮಕೃಷ್ಣ ಆಶ್ರಮದ ಕಾರ್ಯದರ್ಶಿಗೇ ಟೋಪಿ ; ಇಡಿ ಅಧಿಕಾ...
20-04-25 07:26 pm