ಬ್ರೇಕಿಂಗ್ ನ್ಯೂಸ್
20-06-22 01:45 pm Bengalore Correspondent ಕರ್ನಾಟಕ
ಬೆಂಗಳೂರು, ಜೂನ್ 20 : ಪ್ರಧಾನಿ ಮೋದಿ ಭದ್ರತೆಗೆ ನಿಯೋಜನೆಗೊಂಡಿದ್ದ ಬೆಂಗಳೂರು ದಕ್ಷಿಣ ವಿಭಾಗದ ಸೈಬರ್ ಕ್ರೈಂ ಠಾಣೆ ಪಿಎಸ್ಐ ಸುದರ್ಶನ್ ಶೆಟ್ಟಿ (51) ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಯಶವಂತಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆಮ
ಹನುಮಂತನಗರ ಠಾಣೆ ಪಿಎಸ್ಐ ಆಗಿದ್ದ ಸುದರ್ಶನ್ ಅವರನ್ನು ಕೆಲ ತಿಂಗಳ ಹಿಂದೆಯಷ್ಟೇ ನಿಯೋಜನೆ ಮೇರೆಗೆ ಸೈಬರ್ ಕ್ರೈಂ ಠಾಣೆಗೆ ವರ್ಗಾಯಿಸಲಾಗಿತ್ತು. ಎರಡು ದಿನಗಳ ಹಿಂದೆ ಪ್ರಧಾನ ಮಂತ್ರಿಯವರ ಪ್ರವಾಸ ಕಾರ್ಯಕ್ರಮದ ಭದ್ರತೆಗಾಗಿ ಸುದರ್ಶನ್ ಅವರನ್ನು ನಿಯೋಜಿಸಲಾಗಿತ್ತು. ಆದರೆ ತಮಗೆ ಹುಷಾರಿಲ್ಲವೆಂದು ಹೇಳಿ ಕರ್ತವ್ಯಕ್ಕೆ ಗೈರಾಗಿದ್ದ ಅವರು, ಯಶವಂತಪುರದ ತನ್ನ ಮನೆಯಲ್ಲಿ ಉಳಿದುಕೊಂಡಿದ್ದರು.
ಭಾನುವಾರ ಜೂನ್ 19 ರಂದು ವಿಶ್ವ ಅಪ್ಪಂದಿರ ದಿನವಾಗಿದ್ದರಿಂದ, ಸುದರ್ಶನ್ ಅವರು ಮನೆಯಲ್ಲಿ ಮಗನ ಜೊತೆ ಕಾಲ ಕಳೆದಿದ್ದರು. ಮಗನೂ ಶುಭಾಶಯ ತಿಳಿಸಿದ್ದ ಎನ್ನಲಾಗಿದೆ. ಸುದರ್ಶನ್ ಬಳಿಕ ತನ್ನ ಕೊಠಡಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದರು. ಮಲಗಲು ಹೋಗಿರಬಹುದೆಂದು ಮಗ ಸುಮ್ಮನಾಗಿದ್ದರು. ಹೊರಗೆ ಬಾರದೇ ಇರುವುದನ್ನು ನೋಡಿ ಕೊಠಡಿ ತೆರೆದು ನೋಡಿದಾಗ ನೇಣು ಬಿಗಿದುಕೊಂಡಿದ್ದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸುದರ್ಶನ್ ಶೆಟ್ಟಿ ಕೆಲವು ಸಮಯದಿಂದ ಕುಡಿತದ ಚಟ ಅಂಟಿಸಿಕೊಂಡಿದ್ದರು. ಕರ್ತವ್ಯದ ವೇಳೆಯಲ್ಲಿ ಕುಡಿದಿದ್ದ ಕಾರಣಕ್ಕೆ ಒಮ್ಮೆ ಸಸ್ಪೆಂಡ್ ಆಗಿದ್ದರು. ಇದರಿಂದ ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದೆ. ನಿವೃತ್ತ ಯೋಧರಾಗಿದ್ದ ಸುದರ್ಶನ್ ಪೊಲೀಸ್ ಇಲಾಖೆಯಲ್ಲಿ ಸಬ್ ಇನ್ಸ್ಪೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.
Police constable deployed in PM Modis security in Bangalore commits suicide. The deceased has been identified as Sudarshan Shetty (51).
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm