ಬ್ರೇಕಿಂಗ್ ನ್ಯೂಸ್
23-06-22 05:09 pm HK News Desk ಕರ್ನಾಟಕ
ಹಾಸನ, ಜೂನ್ 23: ಹಾಸನ, ಕೊಡಗು ಭಾಗದಲ್ಲಿ ಗುರುವಾರ ನಸುಕಿನ ಜಾವ ಭೂಕಂಪನ ಸಂಭವಿಸಿದೆ. ಜನರು ಮಲಗಿದ್ದ ಸಂದರ್ಭದಲ್ಲಿಯೇ ಭೂಮಿ ನಡುಗಿದ ಅನುಭವ ಆಗಿದ್ದು, ಬೆಚ್ಚಿಬಿದ್ದು ಮನೆಯಿಂದ ಹೊರಗೆ ಓಡಿಬಂದಿದ್ದಾರೆ. ಎರಡು-ಮೂರು ಸೆಕೆಂಡ್ ಕಾಲ ಕಂಪಿಸಿದ ಅನುಭವ ಆಗಿತ್ತು.
ರಿಕ್ಟರ್ ಮಾಪಕದಲ್ಲಿ 3.4ರಷ್ಟು ಕಂಪನದ ತೀವ್ರತೆ ಇತ್ತು ಎಂದು ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ. ಭೂಕಂಪನದ ಕೇಂದ್ರ ಬಿಂದು ಹೊಳೆನರಸೀಪುರ ತಾಲೂಕಿನ ಮಾಲುಗೇನಹಳ್ಳಿಯಲ್ಲಿ ಕಂಪನದ ಕೇಂದ್ರ ಬಿಂದು ಇತ್ತು. ಅರಕಲಗೂಡು, ಹೊಳೆನರಸೀಪುರ ತಾಲೂಕಿನ ಹಲವೆಡೆ ಜನರಿಗೆ ಕಂಪನದ ಅನುಭವ ಆಗಿದ್ದು ಜನ ಗಾಬರಿಗೊಂಡಿದ್ದಾರೆ. ಅರಕಲಗೂಡು ಪಟ್ಟಣ, ಮುದ್ದೇನಹಳ್ಳಿ, ಹನೆಮಾರನಹಳ್ಳಿ, ಕಾರಳ್ಳಿ, ಹೊಳೆನರಸೀಪುರ ತಾಲೂಕಿನ ಚಟ್ನಳ್ಳಿ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಜನರಿಗೆ ಕಂಪನ ಸ್ಪಷ್ಟವಾಗಿ ಅರಿವಿಗೆ ಬಂದಿದೆ.
ಈ ಬಗ್ಗೆ ಮಾಹಿತಿ ನೀಡಿರುವ ನೈಸರ್ಗಿಕ ವಿಕೋಪ ನಿರ್ವಹಣಾ ಕೇಂದ್ರದ ಅಧಿಕಾರಿಗಳು, ಈ ರೀತಿಯ ಕಂಪನದಿಂದ ಯಾವುದೇ ಹಾನಿ ಆಗುವುದಿಲ್ಲ. ಕಂಪನದ ಕೇಂದ್ರ ಬಿಂದು ಸೀಸ್ಮಿಕ್ ವಲಯ-1ರಲ್ಲಿ ಬರುತ್ತಿದ್ದು, ಭೂಕಂಪನದ ಸಾಧ್ಯತೆ ಕಡಿಮೆ ಇರುತ್ತದೆ. ಜನ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಆದರೆ ಕಂಪನಕ್ಕೂ ಮೊದಲು ಅರಕಲಗೂಡು ಪ್ರದೇಶದ ಜನರಿಗೆ ದೊಡ್ಡ ಸದ್ದು ಕೇಳಿಬಂದಿದ್ದು, ಅದರ ಬೆನ್ನಲ್ಲೇ ಕಂಪನ ಆಗಿದ್ದು ಗಾಬರಿಗೆ ಕಾರಣವಾಗಿತ್ತು.
ಕೊಡಗು ಜಿಲ್ಲೆಯ ಮಡಿಕೇರಿ, ಸೋಮವಾರಪೇಟೆ, ಸುಂಟಿಕೊಪ್ಪ ಪ್ರದೇಶದಲ್ಲೂ ಬೆಳಗಿನ ಜಾವ 4.30ರ ಸುಮಾರಿಗೆ ಕಂಪನದ ಅನುಭವ ಆಗಿದೆ. ಸೋಮವಾರ ಪೇಟೆ ಪಟ್ಟಣದ ರೇಂಜರ್ ಬ್ಲಾಕ್, ನೇಗಳ್ಳೆ ವ್ಯಾಪ್ತಿಯ ಜನರಿಗೆ ಕಂಪನ ಅರಿವಿಗೆ ಬಂದಿದೆ. ಮಡಿಕೇರಿ ನಗರದಲ್ಲೂ ಸಣ್ಣ ಪ್ರಮಾಣದ ಅನುಭವ ಆಗಿತ್ತು. ಸುಂಟಿಕೊಪ್ಪದ ಕಾನ್ ಬೈಲು, ನಾಕೂರು ಗ್ರಾಮಸ್ಥರಿಗೆ ಭೂಕಂಪನ ಆಗಿರುವುದು ಅನುಭವಕ್ಕೆ ಬಂದಿದೆ.
An earthquake measuring 3.4 on the Richter scale shook parts of Hassan district and neighbouring regions in Karnataka in the wee hours of Thursday, a disaster management official said. The earthquake was also felt in many villages near Somwarpet in Kodagu district. People ran out of their houses following the tremor.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm