ಬ್ರೇಕಿಂಗ್ ನ್ಯೂಸ್
28-06-22 07:49 pm HK News Desk ಕರ್ನಾಟಕ
ಕಾರವಾರ, ಜೂನ್ 28 : ಒಂದೆಡೆ ಅಗ್ನಿಪಥ್ ಯೋಜನೆಯ ಬಗ್ಗೆ ಪರ-ವಿರೋಧ ಚರ್ಚೆಗಳು ನಡೆಯುತ್ತಲೇ ಇವೆ. ಇದೇ ವೇಳೆ, ಮತ್ತೊಂದೆಡೆ ದೇಶದ ರಕ್ಷಣಾ ಪಡೆಗಳು ಅಗ್ನಿಪಥ್ ಪ್ರಕಾರ ನೇಮಕಾತಿ ಪ್ರಕ್ರಿಯೆಗೂ ಚಾಲನೆ ನೀಡಿವೆ. ಆಕಾಂಕ್ಷಿಗಳು ಅರ್ಜಿ ಸಲ್ಲಿಸುವುದನ್ನೂ ಆರಂಭಿಸಿದ್ದಾರೆ.
ಇದೇ ವೇಳೆ, ಕರ್ನಾಟಕ ಸರಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದ್ದು ಕರಾವಳಿಯ ಮೂರು ಜಿಲ್ಲೆಗಳಲ್ಲಿ ಹೊಸತಾಗಿ ಸೈನಿಕ ತರಬೇತಿ ಶಾಲೆಯನ್ನು ಆರಂಭಿಸಲು ಮುಂದಾಗಿದೆ. ರಾಜ್ಯ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸೇನಾ ಪೂರ್ವ ತರಬೇತಿಗಾಗಿ ಸೈನಿಕ ತರಬೇತಿ ಶಾಲೆಗಳನ್ನು ಆರಂಭಿಸುತ್ತಿದೆ. ಈ ಶಾಲೆಗಳಲ್ಲಿ ಆಕಾಂಕ್ಷಿ ಯುವಕರಿಗೆ ಉಚಿತ ತರಬೇತಿ ನೀಡಲಾಗುತ್ತದೆ.

ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯಡಿ ಆಕಾಂಕ್ಷಿಗಳಿಗೆ ಸೇನಾ ಆಯ್ಕೆ ಪೂರ್ವ ತರಬೇತಿ ಸಲುವಾಗಿ ಕರಾವಳಿ ಜಿಲ್ಲೆಗಳಲ್ಲಿ ತರಬೇತಿ ಶಾಲೆ ಆರಂಭಿಸಲು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮುಂದಾಗಿದ್ದು ಈ ಸಂಬಂಧ ಆದೇಶವನ್ನೂ ಹೊರಡಿಸಲಾಗಿದೆ. ಇನ್ನೊಂದು ತಿಂಗಳಲ್ಲೇ ಅನುಷ್ಠಾನ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎನ್ನುವ ಮಾಹಿತಿಗಳಿವೆ.
ಸೈನಿಕ ತರಬೇತಿ ಶಾಲೆಗಳಿಗೆ ಸ್ಥಳೀಯ ಸ್ವತಂತ್ರ ಹೋರಾಟಗಾರರು, ವೀರ ಪುರುಷರ ಹೆಸರನ್ನಿಡಲು ಸರಕಾರ ನಿರ್ಧರಿಸಿದ್ದು, ಉತ್ತರ ಕನ್ನಡ ಜಿಲ್ಲೆಯ ಶಾಲೆಗೆ ಬ್ರಿಟಿಷರ ವಿರುದ್ಧ ಹೋರಾಡಿದ ಹೆಂಜಾ ನಾಯ್ಕ, ಉಡುಪಿ ಜಿಲ್ಲೆಯಲ್ಲಿ ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯ್ಯ, ದಕ್ಷಿಣ ಕನ್ನಡ ಜಿಲ್ಲೆಯ ಶಾಲೆಗೆ ವೀರರಾಣಿ ಅಬ್ಬಕ್ಕ ಹೆಸರಿಡಲಾಗುವುದು. ಶಾಲೆ ಪ್ರಾರಂಭಿಸಲು ಆಯಾ ಜಾಗದಲ್ಲಿ ಸೂಕ್ತ ಸ್ಥಳವನ್ನ ಶೋಧ ಮಾಡಲಾಗಿದೆ.

ರಾಜ್ಯದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಸೇನೆ, ಇನ್ನಿತರ ಭದ್ರತಾ ವಿಭಾಗದ ಸೇವೆಗಳಿಗೆ ಸೇರಲು ಪ್ರೋತ್ಸಾಹಿಸುವುದಕ್ಕಾಗಿ ತರಬೇತಿ ಶಾಲೆಯನ್ನು ಆರಂಭಿಸಲಾಗುತ್ತಿದೆ. ರಾಜ್ಯದ ಎಲ್ಲಾ ಜಿಲ್ಲೆಯ ಹಿಂದುಳಿದ ವರ್ಗಗಳ ಮತ್ತು ಪರಿಶಿಷ್ಟ ಜಾತಿಯ ಅರ್ಹ ಅಭ್ಯರ್ಥಿಗಳು ಈ ಶಾಲೆಗಳಿಗೆ ಉಚಿತ ತರಬೇತಿಗೆ ಸೇರಬಹುದಾಗಿದ್ದು ಇದಕ್ಕೆ ತಗಲುವ ವೆಚ್ಚವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಭರಿಸಲಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರವಾರದಲ್ಲಿ ಶಾಲೆ ಪ್ರಾರಂಭಿಸುವ ಬಗ್ಗೆ ಚಿಂತನೆ ನಡೆದಿದೆ. ಇದರಿಂದ ಜಿಲ್ಲೆಯಲ್ಲಿರುವ ನಿರುದ್ಯೋಗಿ ಯುವಕರಿಗೆ ಹೆಚ್ಚು ಅನುಕೂಲವಾಗಲಿದೆ' ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರಿನಿವಾಸ್ ಪೂಜಾರಿ ಹೇಳಿದ್ದಾರೆ.
Agneepath Recruitment free training school to open in Karavali regions for aspirants.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm