ಬ್ರೇಕಿಂಗ್ ನ್ಯೂಸ್
05-07-22 04:45 pm HK News Desk ಕರ್ನಾಟಕ
ಹುಬ್ಬಳ್ಳಿ, ಜುಲೈ 5: ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಹಂತಕರನ್ನು ಪೊಲೀಸರು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸಿದ್ದಾರೆ. ಮಧ್ಯಾಹ್ನ ಹತ್ಯೆಯಾದ ಬೆನ್ನಲ್ಲೇ ಆರೋಪಿಗಳ ಪತ್ತೆಗೆ ಪೊಲೀಸರ ಐದು ತಂಡವನ್ನು ರಚಿಸಲಾಗಿತ್ತು.
ಮಹಾಂತೇಶ್ ಶಿರೂರು ಮತ್ತು ಮಂಜುನಾಥ್ ಮರೆವಾಡ ಬಂಧಿತರು. ಇವರಿಬ್ಬರೂ ಈ ಹಿಂದೆ ಗುರೂಜಿ ಜೊತೆಗೇ ಕೆಲಸ ಮಾಡುತ್ತಿದ್ದರು. ಮಹಾಂತೇಶ್ 2016ರಲ್ಲಿ ಗುರೂಜಿ ಜೊತೆಗಿನ ಕೆಲಸ ಬಿಟ್ಟು ಹೊರ ನಡೆದಿದ್ದ. ಆನಂತರ, 2019ರಲ್ಲಿ ಮಂಜುನಾಥ್ ಕೂಡ ಗುರೂಜಿ ಸಖ್ಯ ಬಿಟ್ಟು ಹೊರಬಂದಿದ್ದ.



ಪ್ರಾಥಮಿಕ ಮಾಹಿತಿ ಪ್ರಕಾರ, ಚಂದ್ರಶೇಖರ್ ಗುರೂಜಿಯವರು ತಮ್ಮ ನೌಕರರ ಹೆಸರಲ್ಲಿ ಕೋಟ್ಯಂತರ ಬೇನಾಮಿ ಆಸ್ತಿ ಮಾಡಿಕೊಂಡಿದ್ದರು. ಸರಕಾರಿ ಲೆಕ್ಕಕ್ಕೆ ತಿಳಿಯಬಾರದು ಎಂದು ಗುರೂಜಿ ಈ ಎರಡು ನೌಕರರ ಹೆಸರಲ್ಲೂ ದೊಡ್ಡ ಆಸ್ತಿ ಮಾಡಿದ್ದರು. ಇಬ್ಬರಲ್ಲೂ ಆಸ್ತಿಯನ್ನು ಮರಳಿ ಕೊಡುವಂತೆ ಗುರೂಜಿ ಹೇಳಿದ್ದರು ಎನ್ನಲಾಗಿದ್ದು, ಅದೇ ವಿಚಾರದಲ್ಲಿ ಮಾತನಾಡುವುದಕ್ಕೆ ಹುಬ್ಬಳ್ಳಿ ಹೊಟೇಲ್ ಗೆ ತೆರಳಿದ್ದರು. ಇಂದು ಮಧ್ಯಾಹ್ನ ಆರೋಪಿಗಳು ತಾವು ಬಂದಿರುವ ವಿಷಯ ಹೇಳಿ, ಹೊಟೇಲ್ ರಿಸೆಪ್ಶನ್ ಬರುವಂತೆ ತಿಳಿಸಿದ್ದರು. ಇಬ್ಬರು ಕೂಡ ಮೊದಲೇ ನಿಶ್ಚಯ ಮಾಡಿಕೊಂಡು ಅಲ್ಲಿ ತೆರಳಿದ್ದು, ಚೂರಿಯಿಂದ ಯದ್ವಾತದ್ವಾ ಇರಿದು ಕೆಲಸ ಮುಗಿಸಿದ್ದಾರೆ. ಒಬ್ಬಾತ ಕಾಲಿಗೆ ಬೀಳುವ ನಾಟಕ ಮಾಡುತ್ತಲೇ ಇನ್ನೊಬ್ಬಾತ ಚೂರಿ ತೆಗೆದು ತಿವಿದಿದ್ದಾನೆ.



ಗುರೂಜಿಯನ್ನು ಕೊಲೆ ಮಾಡಿ ಮುಗಿಸಿದರೆ ಈ ಆಸ್ತಿ ಎಲ್ಲ ತಮ್ಮದೇ ಹೆಸರಲ್ಲಿ ಶಾಶ್ವತವಾಗಿ ಇರುತ್ತೆ ಅನ್ನುವ ದೂರಗಾಮಿ ಯೋಚನೆಯಲ್ಲಿ ಚೂರಿಯಿಂದ ತಿವಿದು ಕೊಂದಿದ್ದಾರೆ. 40 ಸೆಕೆಂಡಿನ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದ್ದು, 60ಕ್ಕೂ ಹೆಚ್ಚು ಬಾರಿ ಭೀಕರವಾಗಿ ಹತ್ಯೆ ಮಾಡಿದ್ದಾರೆ. ಹತ್ಯೆ ಬೆನ್ನಲ್ಲೇ ಪೊಲೀಸರು ತಂಡ ರಚಿಸಿಕೊಂಡು ಹಂತಕರ ಬೆನ್ನು ಬಿದ್ದಿದ್ದರು. ಮಹಾಂತೇಶ್ ಪತ್ನಿ ವನಜಾಕ್ಷಿಯನ್ನು ವಶಕ್ಕೆ ಪಡೆದಿದ್ದರು. ಅಲ್ಲದೆ, ಹುಬ್ಬಳ್ಳಿ ಬಿಟ್ಟು ಹೊರಕ್ಕೆ ತೆರಳದಂತೆ ಪೊಲೀಸ್ ಕಾವಲು ಹಾಕಿದ್ದರು. ಸಂಜೆ ನಾಲ್ಕು ಗಂಟೆ ಹೊತ್ತಿಗೆ ಹಂತಕರನ್ನು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಭೀಕರ ಹತ್ಯೆ, ಗ್ರಾಹಕರ ಸೋಗಿನಲ್ಲಿ ಬಂದು ಹೊಟೇಲಿನಲ್ಲೇ ಕೃತ್ಯ
Chandrashekhar Guruji brutal murder in Hubbali, Accused have been arrested just in 4 hours by police, Guruji had written unaccountable property in the of Vanjakyshi and when Guruji asked to give to back the three planned to Murder him. The arrested have been identified as Mahantesh and Manjunath.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm