ಬ್ರೇಕಿಂಗ್ ನ್ಯೂಸ್
11-07-22 05:47 pm HK News Desk ಕರ್ನಾಟಕ
ಹಾಸನ, ಜುಲೈ 11: ಮಂಗಳೂರು- ಬೆಂಗಳೂರು ಸಂಪರ್ಕದ ಶಿರಾಡಿ ಘಾಟ್ ಹೆದ್ದಾರಿಯನ್ನು ಕಾಮಗಾರಿಯ ಉದ್ದೇಶಕ್ಕೆ ಸಂಪೂರ್ಣ ಬಂದ್ ಮಾಡುವುದಿಲ್ಲ. ಬದಲಿಗೆ ಒಂದು ಬದಿಯಲ್ಲಿ ವಾಹನ ಸಂಚಾರಕ್ಕೆ ಅವಕಾಶ ಕೊಟ್ಟು ಕಾಮಗಾರಿ ಮುಂದುವರಿಸಲಾಗುವುದು ಎಂದು ರಾಜ್ಯ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ ಹೇಳಿದ್ದಾರೆ.
ಸಕಲೇಶಪುರ ತಾಲೂಕಿನ ದೋಣಿಗಲ್ ಸಮೀಪ ಹೆದ್ದಾರಿ ಕುಸಿತ ಆಗಿರುವ ಪ್ರದೇಶಕ್ಕೆ ಭೇಟಿ ನೀಡಿದ ಸಚಿವರು ಅಲ್ಲಿನ ಸ್ಥಳ ಪರಿಶೀಲನೆ ನಡೆಸಿದರು. ಇದೇ ವೇಳೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ದಿನವೊಂದಕ್ಕೆ ಈ ಹೆದ್ದಾರಿಯಲ್ಲಿ 30 ಸಾವಿರಕ್ಕೂ ಹೆಚ್ಚು ವಾಹನಗಳು ಸಾಗುತ್ತವೆ. ಮಂಗಳೂರನ್ನು ಸಂಪರ್ಕಿಸುವ ಪ್ರಮುಖ ಹೆದ್ದಾರಿಯಾಗಿದ್ದು ಇಲ್ಲಿ ರಸ್ತೆಯನ್ನು ಬಂದ್ ಮಾಡಿದರೆ ಸಂಚಾರಕ್ಕೆ ಕಷ್ಟವಾಗುತ್ತದೆ. ಒಂದು ಬದಿಯಲ್ಲಿ ಕಾಮಗಾರಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದರು.
ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಬೆಂಗಳೂರಿನ ನೆಲಮಂಗಲದಿಂದ ಹಾಸನದ ವರೆಗೆ ಉತ್ತಮ ರಸ್ತೆ ಕಾಮಗಾರಿ ನಡೆದಿದೆ. ಆದರೆ ಸಕಲೇಶಪುರ ಭಾಗದಲ್ಲಿ ಹಲವು ವರ್ಷಗಳಿಂದ ರಸ್ತೆ ಕಾಮಗಾರಿ ಕುಂಟುತ್ತಾ ಸಾಗಿದೆ. ಅಲ್ಲಲ್ಲಿ ಕಳಪೆ ಕಾಮಗಾರಿ ನಡೆದಿರುವುದನ್ನೂ ವೀಕ್ಷಿಸಿದ್ದೇನೆ. ಹೆದ್ದಾರಿ ಕಾಮಗಾರಿ ವಿಚಾರ ಸದನದಲ್ಲಿಯೂ ಪ್ರಸ್ತಾಪವಾಗಿದ್ದು, ಅದಕ್ಕಾಗಿ ವೀಕ್ಷಣೆಗೆ ಬಂದಿದ್ದೇನೆ. 2024ರ ವೇಳೆಗೆ ಕಾಮಗಾರಿ ಪೂರ್ತಿಗೊಳಿಸುವ ಭರವಸೆಯನ್ನು ಗುತ್ತಿಗೆದಾರರು ನೀಡಿದ್ದಾರೆ ಎಂದರು.
ಹೆದ್ದಾರಿ ಕಾಮಗಾರಿ ಬಗ್ಗೆ ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಗಮನಕ್ಕೂ ತರುತ್ತೇನೆ. ಕಾಮಗಾರಿ ಗುಣಮಟ್ಟದ ಬಗ್ಗೆ ನಿಗಾ ವಹಿಸಲು ಅಧಿಕಾರಿಯೊಬ್ಬರನ್ನು ನೇಮಿಸಲಾಗುವುದು. ಸಾರ್ವಜನಿಕರ ದೂರು, ಇತರೇ ಕಾಮಗಾರಿ ಸಮಸ್ಯೆ ಬಗ್ಗೆ ಗಮನ ಹರಿಸಲಿದ್ದಾರೆ ಎಂದು ಹೇಳಿದರು.
Shiradi Ghatt Road Never Close Minister CC Patil.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm