ಬ್ರೇಕಿಂಗ್ ನ್ಯೂಸ್
15-07-22 10:28 pm HK News Desk ಕರ್ನಾಟಕ
ಹಾಸನ, ಜುಲೈ 15: ಸಕಲೇಶಪುರ ತಾಲೂಕಿನ ಮಾರನಹಳ್ಳಿಯಿಂದ ದೋಣಿಗಲ್ ವರೆಗಿನ ಹೆದ್ದಾರಿಯಲ್ಲಿ ಭೂಕುಸಿತ ಆಗಿರುವುದರಿಂದ ಮಂಗಳೂರು – ಬೆಂಗಳೂರು ಸಂಪರ್ಕಿಸುವ ಶಿರಾಡಿ ಘಾಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಎಲ್ಲ ರೀತಿಯ ವಾಹನಗಳನ್ನು ನಿಷೇಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಜುಲೈ 15ರಿಂದ ಈ ಆದೇಶ ಜಾರಿಗೆ ಬರಲಿದ್ದು, ಮುಂದಿನ ಆದೇಶದ ವರೆಗೂ ಚಾಲ್ತಿಯಲ್ಲಿರಲಿದೆ.
ಜುಲೈ 14ರಂದು ಘನ ವಾಹನಗಳ ಸಂಚಾರವನ್ನು ಮಾತ್ರ ನಿಷೇಧ ಮಾಡಲಾಗಿತ್ತು. ಜುಲೈ 15ರ ಬೆಳಗ್ಗೆ ದೋಣಿಗಲ್ ಭಾಗದಲ್ಲಿ ಮತ್ತೆ ಭೂಕುಸಿತ ಆಗಿರುವುದರಿಂದ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿದೆ. ಪರ್ಯಾಯ ಮಾರ್ಗವಾಗಿ ಬೆಂಗಳೂರಿನಿಂದ ಹಾಸನ ಮೂಲಕ ಬರುವ ವಾಹನಗಳು ಹಾಸನ- ಅರಕಲಗೂಡು- ಕುಶಾಲನಗರ- ಸಂಪಾಜೆ ಹೆದ್ದಾರಿಯಾಗಿ ಮಂಗಳೂರು ಸೇರಬಹುದು. ಅಥವಾ ಹಾಸನ- ಬೇಲೂರು- ಮೂಡಿಗೆರೆ- ಚಾರ್ಮಾಡಿ ಮಾರ್ಗವಾಗಿ ಸಂಚಾರ ನಡೆಸಬಹುದು. ಇವರೆಡೂ ಹೆದ್ದಾರಿಗಳಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧ ಇರುತ್ತದೆ. ಸಾರಿಗೆ ಬಸ್ ಹೊರತುಪಡಿಸಿ ಇತರೇ ಘನ ವಾಹನಗಳು ಬದಲಿ ರಸ್ತೆಯನ್ನು ಸಂಚಾರಕ್ಕೆ ಬಳಸಿಕೊಳ್ಳಬೇಕು ಎಂಬುದಾಗಿ ಜಿಲ್ಲಾಧಿಕಾರಿ ಗಿರೀಶ್ ಆರ್. ಆದೇಶದಲ್ಲಿ ತಿಳಿಸಿದ್ದಾರೆ.
ಕಳೆದ ಬಾರಿಯೂ ಶಿರಾಡಿ ಘಾಟ್ ಹೆದ್ದಾರಿಯಲ್ಲಿ ಭೂಕುಸಿತ ಆಗಿದ್ದರಿಂದ ವಾಹನಗಳ ಸಂಚಾರವನ್ನು ನಿಷೇಧ ಮಾಡಲಾಗಿತ್ತು. ಈ ಬಾರಿಯೂ ವಾಹನ ಸಂಚಾರ ನಿಷೇಧಿಸಲಾಗಿದ್ದು, ಮಳೆ ಕಡಿಮೆಯಾಗುವ ವರೆಗೂ ಇದು ಮುಂದುವರಿಯುವ ಸಾಧ್ಯತೆ ಇದೆ.
Mangalore Vehicles banned moving to shiradi ghat due to extreme landslide orders Hassan dc.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm