ಬ್ರೇಕಿಂಗ್ ನ್ಯೂಸ್
18-07-22 11:49 am HK News Desk ಕರ್ನಾಟಕ
ಹಾಸನ, ಜುಲೈ 18: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ ರಸ್ತೆ ಕುಸಿತವಾದ ಪರಿಣಾಮ ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದರು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಶಿರಾಡಿ ಘಾಟ್ ರಸ್ತೆ ದಿಢೀರ್ ಬಂದ್ ಆಗಿದ್ದರಿಂದ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದರು ಇದರಿಂದಾಗಿ ಹಾಸನ ಹೊರವಲಯದ ಬೈಪಾಸ್ನಲ್ಲಿ ಸಾವಿರಾರು ಬೃಹತ್ ವಾಹನಗಳು ಕಿಲೋಮೀಟರ್ಗಟ್ಟಲೆ ನಿಂತಿವೆ. ಸರಿಯಾದ ಊಟ, ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ಚಾಲಕರು ಹಾಗೂ ನಿರ್ವಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆ ಬೆಂಗಳೂರು-ಹಾಸನ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೇ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವವರು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ಆದರೆ ಶಿರಾಡಿ ಘಾಟ್ ರಸ್ತೆ ಬಂದ್ ಪರಿಣಾಮ ಬದಲಿ ಮಾರ್ಗದಲ್ಲಿ ಸಂಚರಿಸಲು ಪ್ರಯಾಸ ಪಡಬೇಕಾಗಿದೆ.
ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಇಂದು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಡಿಸಿ ಆರ್.ಗಿರೀಶ್ ಶಿರಾಡಿ ಘಾಟ್ ಬಂದ್ ಮಾರ್ಗಸೂಚಿ ಬದಲಿಸಿ ಎರಡು ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಆದೇಶಿದ್ದಾರೆ. ಇದರಿಂದಾಗಿ ಲಘು ವಾಹನಗಳು ಓಡಾಡಲು ಅನುಕೂಲವಾಗಿದೆ. ಮತ್ತೊಂದೆಡೆ ಮಳೆ ಕಡಿಮೆಯಾಗಿದ್ದು ಭೂಕುಸಿತವಾಗಿರುವ ದೋಣಿಗಾಲ್ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಮರದ ಪೋಲ್ ಹಾಗೂ ಮಣ್ಣಿನ ಚೀಲಗಳನ್ನು ಬಳಸಿ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸಲಾಗುತ್ತಿದೆ. ರಸ್ತೆ ದುರಸ್ತಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದುರಂತವೆಂದರೆ ಪ್ರತಿವರ್ಷ ಮಳೆಗಾಲದಲ್ಲಿ ಭೂಮಿ ಕುಸಿಯುತ್ತಿದ್ದರು ಇದುವರೆಗೂ ಶಾಶ್ವತ ಪರಿಹಾರ ರೂಪಿಸಲು ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸರ್ಕಾರ ವಿಫಲವಾಗಿರುವುದು ಜನರು ಹಾಗೂ ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.
Hassan Deputy Commissioner R. Girish has issued an order suggesting alternative routes for light motor vehicles commuting between Bengaluru and Mangaluru as the Shiradi Ghat stretch of National Highway-75 has been closed for vehicles due to landslip at Donigal near Sakaleshpur.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm