ಬ್ರೇಕಿಂಗ್ ನ್ಯೂಸ್
18-07-22 11:49 am HK News Desk ಕರ್ನಾಟಕ
ಹಾಸನ, ಜುಲೈ 18: ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಗೆ ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ಭೂಕುಸಿತ ಹಾಗೂ ರಸ್ತೆ ಕುಸಿತವಾದ ಪರಿಣಾಮ ಶಿರಾಡಿ ಘಾಟ್ ರಸ್ತೆಯನ್ನು ಸಂಪೂರ್ಣ ಬಂದ್ ಮಾಡಿ ಶುಕ್ರವಾರ ಜಿಲ್ಲಾಧಿಕಾರಿ ಆರ್.ಗಿರೀಶ್ ಆದೇಶ ಹೊರಡಿಸಿದ್ದರು. ಇದೀಗ ಮಳೆ ಕಡಿಮೆಯಾದ ಹಿನ್ನೆಲೆ ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಲು ಅವಕಾಶ ನೀಡಲಾಗಿದೆ.
ಶಿರಾಡಿ ಘಾಟ್ ರಸ್ತೆ ದಿಢೀರ್ ಬಂದ್ ಆಗಿದ್ದರಿಂದ ಪೊಲೀಸರು ವಾಹನಗಳನ್ನು ತಡೆದು ನಿಲ್ಲಿಸುತ್ತಿದ್ದರು ಇದರಿಂದಾಗಿ ಹಾಸನ ಹೊರವಲಯದ ಬೈಪಾಸ್ನಲ್ಲಿ ಸಾವಿರಾರು ಬೃಹತ್ ವಾಹನಗಳು ಕಿಲೋಮೀಟರ್ಗಟ್ಟಲೆ ನಿಂತಿವೆ. ಸರಿಯಾದ ಊಟ, ನೀರು, ಶೌಚಾಲಯ ವ್ಯವಸ್ಥೆ ಇಲ್ಲದೆ ಚಾಲಕರು ಹಾಗೂ ನಿರ್ವಾಹಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಾಷ್ಟ್ರೀಯ ಹೆದ್ದಾರಿ 75 ಶಿರಾಡಿ ಘಾಟ್ ರಸ್ತೆ ಬೆಂಗಳೂರು-ಹಾಸನ-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದೆ. ಅಲ್ಲದೇ ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ತೆರಳುವವರು ಇದೇ ಮಾರ್ಗದಲ್ಲಿ ಸಂಚರಿಸಬೇಕಿದೆ. ಪ್ರತಿನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತಿದ್ದವು. ಆದರೆ ಶಿರಾಡಿ ಘಾಟ್ ರಸ್ತೆ ಬಂದ್ ಪರಿಣಾಮ ಬದಲಿ ಮಾರ್ಗದಲ್ಲಿ ಸಂಚರಿಸಲು ಪ್ರಯಾಸ ಪಡಬೇಕಾಗಿದೆ.

ಲಘು ವಾಹನಗಳಿಗೆ ಶಿರಾಡಿ ಘಾಟ್ ರಸ್ತೆಯಲ್ಲಿ ಪರ್ಯಾಯ ಮಾರ್ಗದಲ್ಲಿ ಸಂಚರಿಸಬಹುದಾಗಿದೆ. ಇಂದು ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಡಿಸಿ ಆರ್.ಗಿರೀಶ್ ಶಿರಾಡಿ ಘಾಟ್ ಬಂದ್ ಮಾರ್ಗಸೂಚಿ ಬದಲಿಸಿ ಎರಡು ಕಡೆಯಿಂದ ಯಾವುದೇ ಸಮಸ್ಯೆ ಆಗದಂತೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ಆದೇಶಿದ್ದಾರೆ. ಇದರಿಂದಾಗಿ ಲಘು ವಾಹನಗಳು ಓಡಾಡಲು ಅನುಕೂಲವಾಗಿದೆ. ಮತ್ತೊಂದೆಡೆ ಮಳೆ ಕಡಿಮೆಯಾಗಿದ್ದು ಭೂಕುಸಿತವಾಗಿರುವ ದೋಣಿಗಾಲ್ ಬಳಿ ರಸ್ತೆ ದುರಸ್ತಿ ಕಾರ್ಯ ಆರಂಭಿಸಿದ್ದಾರೆ. ಮರದ ಪೋಲ್ ಹಾಗೂ ಮಣ್ಣಿನ ಚೀಲಗಳನ್ನು ಬಳಸಿ ಮಣ್ಣು ಕುಸಿಯದಂತೆ ತಡೆಗೋಡೆ ನಿರ್ಮಿಸಲಾಗುತ್ತಿದೆ. ರಸ್ತೆ ದುರಸ್ತಿ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ದುರಂತವೆಂದರೆ ಪ್ರತಿವರ್ಷ ಮಳೆಗಾಲದಲ್ಲಿ ಭೂಮಿ ಕುಸಿಯುತ್ತಿದ್ದರು ಇದುವರೆಗೂ ಶಾಶ್ವತ ಪರಿಹಾರ ರೂಪಿಸಲು ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು, ಸರ್ಕಾರ ವಿಫಲವಾಗಿರುವುದು ಜನರು ಹಾಗೂ ವಾಹನ ಸವಾರರ ಆಕ್ರೋಶಕ್ಕೆ ಕಾರಣವಾಗಿದೆ.
Hassan Deputy Commissioner R. Girish has issued an order suggesting alternative routes for light motor vehicles commuting between Bengaluru and Mangaluru as the Shiradi Ghat stretch of National Highway-75 has been closed for vehicles due to landslip at Donigal near Sakaleshpur.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm