ಬ್ರೇಕಿಂಗ್ ನ್ಯೂಸ್
19-07-22 10:00 pm HK News Desk ಕರ್ನಾಟಕ
ಹಾಸನ, ಜುಲೈ 19: ಆನೆಯನ್ನು ಕೊಂದು ಹೂತು ಹಾಕಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಗಳ ರಕ್ಷಣೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಆರೋಪಿತ ಅರಣ್ಯಾಧಿಕಾರಿಗಳನ್ನು ಗುರಿಯಾಗಿಸಿ ವಿಜಿಲೆನ್ಸ್ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದೆ ಮನೇಕಾ ಗಾಂಧಿ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ವಿದ್ಯುತ್ ಹರಿಸಿ ಆನೆಯನ್ನು ಕೊಂದು ಹಾಕಿದ್ದಲ್ಲದೆ, ಅದರ ದಂತವನ್ನು ತೆಗೆದು ಮಾರಾಟಕ್ಕೆ ಯತ್ನಿಸಲಾಗಿತ್ತು. ಮಾರ್ಚ್ 19ರಂದು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ದಂತ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆಮೂಲಕ ಆನೆಯನ್ನು ಕೊಂದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.

ಆದರೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು ಒಟ್ಟು ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಅರಣ್ಯಾಧಿಕಾರಿಗಳು ಕೃತ್ಯದಲ್ಲಿ ಶಾಮೀಲಾಗಿದ್ದು, ಆರೋಪಿಗಳ ರಕ್ಷಣೆಗೆ ಹಾಸನ ಅರಣ್ಯ ಇಲಾಖೆಯ ಆರ್ ಎಫ್ ಓ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲು ಒತ್ತಡ ಹೇರುತ್ತಿದ್ದಾರೆ.


ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರಾಗಿದ್ದು, ಸಂಸದರು ಅವರ ರಕ್ಷಣೆಗೆ ನಿಂತಿದ್ದಾರೆ. ಪ್ರಕರಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮುತುವರ್ಜಿ ವಹಿಸಬೇಕು. ಪ್ರಕರಣವನ್ನು ಹಾಸನ ಅರಣ್ಯ ಇಲಾಖೆಯಿಂದ ಪಡೆದು ವಿಜಿಲೆನ್ಸ್ ತನಿಖೆಗೆ ಒಪ್ಪಿಸಬೇಕು ಎಂದು ಮನೇಕಾ ಗಾಂಧಿ ಜುಲೈ 18ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Animal rights activist Maneka Gandhi, MP, has written to Chief Minister Basavaraj Bommai seeking a probe into the electrocution of a tusker, which came to light early this year in Hassan.Ms. Gandhi has alleged that a Range Forest Officer (RFO) in Hassan was trying to protect the accused in the case, buckling under pressure from Prajwal Revanna, MP.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm