ಬ್ರೇಕಿಂಗ್ ನ್ಯೂಸ್
19-07-22 10:00 pm HK News Desk ಕರ್ನಾಟಕ
ಹಾಸನ, ಜುಲೈ 19: ಆನೆಯನ್ನು ಕೊಂದು ಹೂತು ಹಾಕಿದ್ದ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಗಳ ರಕ್ಷಣೆಗೆ ಯತ್ನಿಸುತ್ತಿದ್ದಾರೆ. ಈ ಬಗ್ಗೆ ಆರೋಪಿತ ಅರಣ್ಯಾಧಿಕಾರಿಗಳನ್ನು ಗುರಿಯಾಗಿಸಿ ವಿಜಿಲೆನ್ಸ್ ತಂಡದಿಂದ ಸಮಗ್ರ ತನಿಖೆ ನಡೆಸಬೇಕು ಎಂದು ಸಂಸದೆ ಮನೇಕಾ ಗಾಂಧಿ ಅವರು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ.
ಹಾಸನ ಜಿಲ್ಲೆಯ ವೀರಾಪುರ ಗ್ರಾಮದಲ್ಲಿ ವಿದ್ಯುತ್ ಹರಿಸಿ ಆನೆಯನ್ನು ಕೊಂದು ಹಾಕಿದ್ದಲ್ಲದೆ, ಅದರ ದಂತವನ್ನು ತೆಗೆದು ಮಾರಾಟಕ್ಕೆ ಯತ್ನಿಸಲಾಗಿತ್ತು. ಮಾರ್ಚ್ 19ರಂದು ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ದಂತ ಮಾರಾಟ ಮಾಡುತ್ತಿದ್ದ ವೇಳೆ ಆರೋಪಿಗಳು ಸಿಕ್ಕಿಬಿದ್ದಿದ್ದರು. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿದ್ದು, ಆಮೂಲಕ ಆನೆಯನ್ನು ಕೊಂದಿದ್ದ ಪ್ರಕರಣ ಬೆಳಕಿಗೆ ಬಂದಿತ್ತು.
ಆದರೆ ಪ್ರಕರಣದಲ್ಲಿ ಅರಣ್ಯಾಧಿಕಾರಿಗಳು ಪ್ರತ್ಯೇಕ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದು ಒಟ್ಟು ಕೃತ್ಯವನ್ನು ಮುಚ್ಚಿ ಹಾಕಲು ಯತ್ನಿಸುತ್ತಿದ್ದಾರೆ. ಪ್ರಕರಣದಲ್ಲಿ ಆರೋಪಿಗಳ ರಕ್ಷಣೆಗೆ ಪ್ರಯತ್ನ ನಡೆಯುತ್ತಿದೆ. ಸ್ಥಳೀಯ ಅರಣ್ಯಾಧಿಕಾರಿಗಳು ಕೃತ್ಯದಲ್ಲಿ ಶಾಮೀಲಾಗಿದ್ದು, ಆರೋಪಿಗಳ ರಕ್ಷಣೆಗೆ ಹಾಸನ ಅರಣ್ಯ ಇಲಾಖೆಯ ಆರ್ ಎಫ್ ಓ ಪ್ರಯತ್ನಿಸುತ್ತಿದ್ದಾರೆ. ಈ ಬಗ್ಗೆ ಸಿಕೆ ಅಚ್ಚುಕಟ್ಟು ಠಾಣೆಯ ಪೊಲೀಸರಿಗೆ ಪ್ರಕರಣ ಹಸ್ತಾಂತರಿಸಲು ಒತ್ತಡ ಹೇರುತ್ತಿದ್ದಾರೆ.
ಆರೋಪಿಗಳು ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರಾಗಿದ್ದು, ಸಂಸದರು ಅವರ ರಕ್ಷಣೆಗೆ ನಿಂತಿದ್ದಾರೆ. ಪ್ರಕರಣದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬೊಮ್ಮಾಯಿ ಮುತುವರ್ಜಿ ವಹಿಸಬೇಕು. ಪ್ರಕರಣವನ್ನು ಹಾಸನ ಅರಣ್ಯ ಇಲಾಖೆಯಿಂದ ಪಡೆದು ವಿಜಿಲೆನ್ಸ್ ತನಿಖೆಗೆ ಒಪ್ಪಿಸಬೇಕು ಎಂದು ಮನೇಕಾ ಗಾಂಧಿ ಜುಲೈ 18ರಂದು ಬರೆದ ಪತ್ರದಲ್ಲಿ ಒತ್ತಾಯಿಸಿದ್ದಾರೆ.
Animal rights activist Maneka Gandhi, MP, has written to Chief Minister Basavaraj Bommai seeking a probe into the electrocution of a tusker, which came to light early this year in Hassan.Ms. Gandhi has alleged that a Range Forest Officer (RFO) in Hassan was trying to protect the accused in the case, buckling under pressure from Prajwal Revanna, MP.
03-07-25 05:24 pm
Bangalore Correspondent
Rain kadaba, Sullia, Mangalore: ಕಡಬ, ಸುಳ್ಯದಲ್...
03-07-25 10:54 am
Tumakuru, Fathers Jail, Traffic, Bike: ತುಮಕೂರ...
03-07-25 10:52 am
Dk Shivakumar, CM Siddaramaiah: ನನ್ನ ಹೆಸ್ರು ಹ...
02-07-25 11:02 pm
Vikas Kumar IPS, CAT: ವಿಕಾಸ್ ಕುಮಾರ್ ಅಮಾನತು ರದ...
02-07-25 10:47 pm
02-07-25 11:05 pm
HK News Desk
Adult Film Star Kylie Page Death: ನೀಲಿ ಚಿತ್ರ...
02-07-25 05:31 pm
ಹೈದ್ರಾಬಾದಿನಲ್ಲಿ ಸಿಗಾಚಿ ಇಂಡಸ್ಟ್ರೀಸ್ ಫಾರ್ಮಾ ಫ್ಯ...
01-07-25 08:57 pm
ಸುಟ್ಟರೂ ಬುದ್ಧಿ ಕಲಿಯದ ಪಾಕಿಸ್ತಾನ ; ಆಪರೇಶನ್ ಸಿಂಧ...
29-06-25 11:13 am
IPS Officer Parag Jain: ಭಾರತದ ಗುಪ್ತಚರ ಸಂಸ್ಥೆ...
28-06-25 10:14 pm
03-07-25 10:50 pm
Mangalore Correspondent
ರಹಿಮಾನ್ ಕೊಲೆ ಪ್ರಕರಣ ; ಅನುಮತಿ ನಿರಾಕರಿಸಿದ್ದರೂ ಬ...
03-07-25 10:39 pm
Mangalore Police, New Rules, Festival; ಮೊಸರು...
03-07-25 03:43 pm
Mangalore, Heart Attack Spike: ದಕ್ಷಿಣ ಕನ್ನಡ ಜ...
03-07-25 02:33 pm
Mangalore Police, Task Force: ಕೋಮು ಗಲಭೆ ನಿಗ್ರ...
03-07-25 10:50 am
03-07-25 11:03 pm
Mangalore Correspondent
ವಿದ್ಯಾರ್ಥಿಗಳಿಗೆ ಡ್ರಗ್ಸ್ ಮಾರಾಟ ; ಸಿಸಿಬಿ ಪೊಲೀಸರ...
03-07-25 08:38 pm
ಮಹಾದೇವ್ ಬೆಟ್ಟಿಂಗ್ ಹಗರಣ ; ಮೋಸ್ಟ್ ವಾಂಟೆಡ್ ಆರೋಪಿ...
03-07-25 07:09 pm
Infosys Employee, Video Recording, Crime: ಇನ್...
02-07-25 10:15 pm
Massive Scam, Mangalore City Corporation, Fak...
02-07-25 12:24 pm