ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.

ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 12:40 pm
HK News Staffer
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm
ಕಟ್ಟಡ ನಿರ್ಮಾಣ ಕೆಲಸಕ್ಕೆ ಬಾಂಗ್ಲಾನ್ನರ ಪೂರೈಕೆ ; ಪ...
14-07-26 01:01 pm