ಬ್ರೇಕಿಂಗ್ ನ್ಯೂಸ್
02-10-20 03:01 pm Headline Karnataka News Network ಕರ್ನಾಟಕ
ಕಾಸರಗೋಡು, ಅ.2: ಕಳೆದ ಒಂದು ವಾರದಿಂದ ಕೊರೋನ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಅ.3ರಿಂದ ಅ.31ರ ತನಕ ಸೆಕ್ಷನ್ 144ರಂತೆ ನಿಷೇಧಾಜ್ಞೆ ಜಾರಿಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ನಿಷೇಧಾಜ್ಞೆಯನ್ವಯ ಐದಕ್ಕಿಂತ ಅಧಿಕ ಮಂದಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಅಕ್ಟೋಬರ್ 3 ರ ಬೆಳಗ್ಗೆ 9ರಿಂದ 31ರ ತನಕ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಆಯಾ ಜಿಲ್ಲೆಗಳ ಸ್ಥಿತಿ ಗತಿ ಮನಗಂಡು ನಿಯಂತ್ರಣಗಳಲ್ಲಿ ಸಡಿಲಿಕೆ ಬೇಕೆ ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜಿಲ್ಲಾಧಿಕಾರಿಗಳಿಗೆ ಅಧಿಕಾರ ನೀಡಲಾಗಿದೆ.
ವಿವಾಹ, ಮರಣ ನಂತರದ ಕಾರ್ಯಕ್ರಮ ಮೊದಲಾದವುಗಳಿಗೆ ವಿನಾಯಿತಿ ನೀಡಲಾಗಿದೆ. ಆದರೆ ಕೋವಿಡ್ ಮಾನದಂಡದಂತೆ ಈ ಕಾರ್ಯಕ್ರಮ ನಡೆಸಲು ಅನುಮತಿ ಸಿಗಲಿದೆ. ಜನರು ಸೇರುವ ಎಲ್ಲ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ.
ಎರಡು ದಿನಗಳ ಹಿಂದೆ ನಡೆದ ಸರ್ವ ಪಕ್ಷ ಸಭೆಯಲ್ಲಿ ಪ್ರತಿಭಟನೆ ಸೇರಿದಂತೆ ಜನರು ಗುಂಪುಗೂಡುವ ಎಲ್ಲ ಕಾರ್ಯಕ್ರಮಗಳಿಗೂ ನಿರ್ಬಂಧ ಹೇರಲು ತೀರ್ಮಾನಿಸಲಾಗಿತ್ತು. ಅದರಂತೆ ಸರಕಾರ ಈ ಆದೇಶ ಹೊರಡಿಸಿದೆ.
ಕೇರಳದಲ್ಲಿ ಕೋವಿಡ್ -19 ಸೋಂಕಿತರ ಸಂಖ್ಯೆ ದಿನಂಪ್ರತಿ ಎಂಟು ಸಾವಿರವನ್ನು ದಾಟುತ್ತಿದ್ದು, ಕಾಸರಗೋಡು ಜಿಲ್ಲೆಯಲ್ಲೂ 500ರ ಗಡಿಗೆ ತಲುಪಿದೆ. ಕಳೆದ 20 ದಿನಗಳಿಂದ ಅನಿಯಂತ್ರಿತವಾಗಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಲಾಕ್ ಡೌನ್ ಸಡಿಲಿಕೆಯನ್ನು ಮತ್ತೆ ಬಿಗಿ ಗೊಳಿಸಲು ಕೇರಳ ಸರಕಾರ ಈಗಾಗಲೇ ತೀರ್ಮಾ ನಿಸಿದೆ.
20-06-25 10:36 am
Bangalore Correspondent
ಕಮಲ್ ನಟನೆಯ 'ಥಗ್ ಲೈಫ್' ಸಿನಿಮಾ ಪ್ರಸಾರಕ್ಕೆ ಸುಪ್ರ...
17-06-25 05:35 pm
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
19-06-25 10:58 pm
HK News Desk
ಕೇರಳ ಸಿಎಂ ಸ್ವಂತ ಊರಿನಲ್ಲೇ ಮುಸ್ಲಿಂ ಗುಂಪಿನ ನೈತಿಕ...
19-06-25 08:26 pm
Israel-Iran’s War: ಇಸ್ರೇಲಿನ ಅತಿದೊಡ್ಡ ಆಸ್ಪತ್ರೆ...
19-06-25 07:13 pm
ಪಾಕ್ ಸೇನಾ ಮುಖ್ಯಸ್ಥನಿಗೆ ಡೊನಾಲ್ಡ್ ಟ್ರಂಪ್ ಔತಣ ಕೂ...
18-06-25 09:54 pm
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
20-06-25 07:10 pm
Mangalore Correspondent
Chakravarthy Sulibele: ಕುಂದಾಪುರದಲ್ಲಿ ಅಖಂಡ ಭಾರ...
20-06-25 03:54 pm
ಆರೆಸ್ಸೆಸ್ ನಾಯಕರ ಮನೆಗಳಿಗೆ ಮಿಡ್ ನೈಟ್ ಪರಿಶೀಲನೆ ;...
20-06-25 02:59 pm
ಒಂದೇ ಮರ ತೆರವಿಗೆ ಸೂಚಿಸಿದ್ದ ಸೋಮೇಶ್ವರ ಪುರಸಭೆ ; ಐ...
19-06-25 10:08 pm
ಜಪ್ಪಿನಮೊಗರು ಕಾರು ಅಪಘಾತಕ್ಕೆ ಮದ್ಯ ಸೇವನೆ, ಅತಿ ವೇ...
19-06-25 07:48 pm
20-06-25 02:04 pm
Mangalore Correspondent
Mangalore, Bantwal Pregnant Woman Murder, Sui...
19-06-25 04:37 pm
Ccb Police, Bangalore, Drugs, crime: ಚೂಡಿದಾರ್...
17-06-25 05:06 pm
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm