ಬ್ರೇಕಿಂಗ್ ನ್ಯೂಸ್
21-07-22 10:38 pm HK News Desk ಕರ್ನಾಟಕ
ಕಾರವಾರ, ಜುಲೈ 21 : ರಾಜ್ಯದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ಬಡ ವಿದ್ಯಾರ್ಥಿಗಳು ಓದುವ ವಸತಿ ಶಾಲೆಗಳನ್ನು ಪಿಯು ವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಸಮಾಜ ಕಲ್ಯಾಣ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶಿರಸಿ ತಾಲೂಕಿನ ಕಲ್ಲಿ ಮೊರಾರ್ಜಿ ವಸತಿ ಶಾಲೆಗೆ ಭೇಟಿ ನೀಡಿದ ಬಳಿಕ ಮಾಧ್ಯಮದೊಂದಿಗೆ ಅವರು ಮಾತನಾಡಿದರು. ಬಡವರು ಮತ್ತು ಪ್ರತಿಭಾವಂತ ಮಕ್ಕಳಿಗೆ ಮೊರಾರ್ಜಿ ಶಾಲೆಗಳಲ್ಲಿ 6ನೇ ತರಗತಿಯಿಂದ ಪಿಯು ಶಿಕ್ಷಣದ ವರೆಗೂ ವಿದ್ಯಾಭ್ಯಾಸ ದೊರೆಯುವಂತಾಗಬೇಕು ಎಂಬುದು ನಮ್ಮ ಆಶಯ. ಮೊರಾರ್ಜಿ ಶಾಲೆಗಳನ್ನು ಪಿಯು ವರೆಗೂ ವಿಸ್ತರಿಸುವ ಕುರಿತಂತೆ ಶಿಕ್ಷಣ ಇಲಾಖೆಯೊಂದಿಗೂ ಚರ್ಚೆ ನಡೆಸಲಾಗಿದೆ ಎಂದರು.
ವಿದ್ಯಾರ್ಥಿನಿಯರಿಗೆ ಈಗಾಗಲೇ ಓಬವ್ವ ಆತ್ಮರಕ್ಷಣಾ ಕಲೆಯೊಂದಿಗೆ ವಿದ್ಯಾಭ್ಯಾಸ ನೀಡಲಾಗುತ್ತಿದೆ. ಇದಕ್ಕೆ ವಿದ್ಯಾರ್ಥಿನಿಯರು ಸಹ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ವಸತಿ ಶಾಲೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಸಿಬ್ಬಂದಿಗೆ ವೇತನ ಕಡಿಮೆ ಇದೆ. ಪ್ರಾಮಾಣಿಕ ಸೇವೆಯಿಂದಾಗಿ ಶಾಲೆಗಳೂ ಉತ್ತಮ ಮಟ್ಟದಲ್ಲಿ ನಡೆಯುತ್ತಿವೆ. ಅವರ ವೇತನ ಹೆಚ್ಚಿಸುವ ಕುರಿತಂತೆ ಯತ್ನ ನಡೆಯುತ್ತಿದ್ದು, ಹಣಕಾಸು ವಿಭಾಗದಿಂದ ಒಪ್ಪಿಗೆಗೆ ಕಾಯುತ್ತಿದ್ದೇವೆ ಎಂದರು.
ಕಳೆದ ಮಳೆಗಾಲದ ಅವಧಿಯಲ್ಲಿ ಪ್ರಕೃತಿ ವಿಕೋಪ ಅನುದಾನ ಅಡಿಯಲ್ಲಿ ಮಂಜೂರಾದ ಹಣ ಗುತ್ತಿಗೆದಾರರಿಗೆ ಸಂದಾಯವಾಗಿಲ್ಲ ಎಂಬ ಆರೋಪ ಕೇಳಿಬಂದಿದೆ. ಈ ಹಣವನ್ನು ಖಂಡಿತವಾಗಿಯೂ ಮಂಜೂರು ಮಾಡುತ್ತೇವೆ. ಆದರೆ, ಹಂತ ಹಂತವಾಗಿ ಬಿಡುಗಡೆ ಆಗುತ್ತಿದೆ. ಮೊದಲು ಆದ ಕಾಮಗಾರಿಗಳಿಗೆ ಮೊದಲು ಹಣ ಬಿಡುಗಡೆ ಆಗುತ್ತಿದ್ದು, ಗುತ್ತಿಗೆದಾರರು ಅವರ ಹಣದ ಸಲುವಾಗಿ ಆಲೋಚನೆ ಮಾಡಬೇಕಾಗಿಲ್ಲ ಎಂದರು. ಮೊರಾರ್ಜಿ ಶಾಲೆಯ ಭೋಜನಾಲಯಕ್ಕೆ ಭೇಟಿ ನೀಡಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಲ್ಲಿಯೇ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿ, ಕುಶಲೋಪರಿ ವಿಚಾರಿಸಿದರು.
Kota Srinivasa Pujari, Minister-in-charge who visited Morarji Residential School in Shirasi taluk of Uttara Kannada district, visited the canteen of the school and had lunch with the students. Then inquired about the craft of the students.Minister Kota Srinivas Poojary has informed in Shirasi of Uttara Kannada district that he has decided to extend Morarji Desai Residential School to PUC. Morarji schools are a great platform for poor and talented children. He said that it is our wish that education should be available in one place from 6th standard to PUC.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 06:05 pm
Mangalore Correspondent
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm