ಬ್ರೇಕಿಂಗ್ ನ್ಯೂಸ್
24-07-22 01:28 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 24 : ಗಾಂಜಾ ಗ್ಯಾಂಗ್ ಬೆನ್ನತ್ತಿ ಆಂಧ್ರ ಪ್ರದೇಶಕ್ಕೆ ತೆರಳಿದ್ದ ಶಿವಾಜಿನಗರ ಠಾಣೆ ಪೊಲೀಸರ ಕಾರು ಚಿತ್ತೂರಿನ ಬಳಿ ಅಪಘಾತಕ್ಕೀಡಾಗಿದ್ದು ಪಿಎಸ್ಐ ಸೇರಿ ಮೂವರು ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಪೊಲೀಸ್ ಸಿಬ್ಬಂದಿಯ ಇನ್ನೋವಾ ಕಾರು ರಸ್ತೆ ಡಿವೈಡರ್ಗೆ ಡಿಕ್ಕಿಯಾಗಿ ಸುಮಾರು 30 ಅಡಿ ತಗ್ಗಿನಲ್ಲಿದ್ದ ಮತ್ತೊಂದು ರಸ್ತೆಗೆ ಪಲ್ಟಿಯಾಗಿ ಬಿದ್ದಿದೆ. ಇದರಿಂದ ತೀವ್ರ ಗಾಯಗೊಂಡ ಮೂವರು ಪೊಲೀಸ್ ಸಿಬಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ ಮತ್ತು ಇನ್ನಿಬ್ಬರ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಶಿವಾಜಿನಗರ ಠಾಣೆಯ ಪಿಎಸ್ಐ ಅವಿನಾಶ್, ಪ್ರೊಬೇಷನರಿ ಪಿಎಸ್ಐ ದೀಕ್ಷಿತ್, ಪೊಲೀಸ್ ಕಾನ್ಸ್ಟೇಬಲ್ ಅನಿಲ್ ಸೇರಿ ಆರು ಸಿಬಂದಿಯ ತಂಡವು ಖಾಸಗಿ ಏಜನ್ಸಿಯಿಂದ ಇನ್ನೋವಾ ಕಾರನ್ನು ಬಾಡಿಗೆ ಪಡೆದು ಗಾಂಜಾ ಗ್ಯಾಂಗ್ ಹಿಡಿಯಲು ಆಂಧ್ರಕ್ಕೆ ತೆರಳಿದ್ದರು. ನಸುಕಿನ ಜಾವ 3 ಗಂಟೆ ಸುಮಾರಿಗೆ ತಂಡವೊಂದನ್ನು ಬೆನ್ನಟ್ಟುವ ಧಾವಂತದಲ್ಲಿ ಪೊಲೀಸರ ಕಾರು ಡಿವೈಡರ್ ಹೊಡೆದು ಪಲ್ಟಿಯಾಗಿದೆ ಎನ್ನಲಾಗುತ್ತಿದೆ.

ಸಬ್ ಇನ್ಸ್ಪೆಕ್ಟರ್ ಅವಿನಾಶ್, ಕಾನ್ಸ್ಟೇಬಲ್ ಅನಿಲ್ ಹಾಗೂ ಖಾಸಗಿ ಕಾರು ಚಾಲಕ ಮೃತಪಟ್ಟಿದ್ದಾರೆ. ಪ್ರೊಬೆಷನರಿ ಪಿಎಸ್ಐ ದೀಕ್ಷಿತ್, ಕಾನ್ಸ್ಟೇಬಲ್ ಶರಣಬಸವ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಶನಿವಾರ ಹೊರಟಿದ್ದ ಪೊಲೀಸರ ತಂಡ ಚಿತ್ತೂರಿನಲ್ಲಿ ಆರೋಪಿಗಳು ಸಿಗದ ಹಿನ್ನೆಲೆಯಲ್ಲಿ ತಿರುಪತಿಯತ್ತ ಹೊರಟಿತ್ತು. ಈ ವೇಳೆ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಇತ್ತ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಸಹೋದ್ಯೋಗಿಗಳ ದಾರುಣ ಸಾವು ಹಿನ್ನಲೆಯಲ್ಲಿ ನೀರವ ಮೌನ ಆವರಿಸಿದೆ.
Bangalore Shivajinagara police meet with a ghastly accident in Andhra by chasing Ganja Gang at Andhra, three dead on spot including Police Sub Inspector.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm