ಬ್ರೇಕಿಂಗ್ ನ್ಯೂಸ್
25-07-22 08:29 pm Bangalore Correspondent ಕರ್ನಾಟಕ
ಬೆಂಗಳೂರು, ಜುಲೈ 25: ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಣಿಯಾಗುತ್ತಿರುವ ಬಿಜೆಪಿ ಕೇಂದ್ರ ನಾಯಕರು, ರಾಜ್ಯದಲ್ಲಿ 40ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಹೊಸ ಮುಖಗಳಿಗೆ ಮಣೆ ಹಾಕಲಿದ್ದಾರೆಂಬ ಸುದ್ದಿ ಹೊರಬಿದ್ದಿದೆ. ಉತ್ತರ ಪ್ರದೇಶ ಮಾದರಿಯಲ್ಲಿ ಹಳಬರನ್ನು ಬದಲಿಸಿ ಯುವಕರಿಗೆ ಆದ್ಯತೆ ನೀಡಲು ಮುಂದಾಗಿದ್ದಾರೆ ಎನ್ನುವ ಮಾತು ಕೇಳಿಬಂದಿದೆ.
ಇತ್ತೀಚೆಗಷ್ಟೆ ಮಾಜಿ ಸಿಎಂ ಯಡಿಯೂರಪ್ಪ ಮುಂದಿನ ಚುನಾವಣೆಯಲ್ಲಿ ನಿಲ್ಲೋದಿಲ್ಲ ಎಂದು ಹೇಳಿ ರಾಜ್ಯದ ಜನತೆಗೆ ಶಾಕ್ ನೀಡಿದ್ದರು. 75 ಪ್ಲಸ್ ಆದವರಿಗೆ ಬಿಜೆಪಿಯಲ್ಲಿ ಟಿಕೆಟ್ ಇಲ್ಲವೆಂಬ ನಿಯಮದ ಪ್ರಕಾರ, 79 ವಯಸ್ಸಿನ ಯಡಿಯೂರಪ್ಪ ಮುಂದಿನ ಬಾರಿ ತನಗೆ ಸ್ಥಾನ ಸಿಗದು ಅನ್ನುವ ನೆಲೆಯಲ್ಲಿಯೇ ಈ ಮಾತು ಹೇಳಿದ್ದಾರೆ ಎನ್ನಲಾಗಿತ್ತು. ಇದರ ಬೆನ್ನಲ್ಲೇ ಕೇಂದ್ರ ನಾಯಕರು ಉತ್ತರ ಪ್ರದೇಶ ಮಾದರಿಯನ್ನು ರಾಜ್ಯದಲ್ಲೂ ಅಳವಡಿಸಲಿದ್ದಾರೆ ಎನ್ನುವ ಗುಸು ಗುಸು ಹರಡಿದೆ. ಈ ಬಗ್ಗೆ ಇತ್ತೀಚೆಗೆ ಹೈದರಾಬಾದ್ ನಲ್ಲಿ ನಡೆದಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆದಿದೆ.
ಉತ್ತರ ಪ್ರದೇಶದಲ್ಲಿ ಎರಡು-ಮೂರು ಬಾರಿ ಗೆದ್ದವರನ್ನು ಬದಲಾಯಿಸಿ, ಹೊಸಬರಿಗೆ ಅವಕಾಶ ನೀಡಿ ಅಭೂತಪೂರ್ವ ಗೆಲುವು ದಾಖಲಿಸಿದ್ದು ಬಿಜೆಪಿ ಕೇಂದ್ರ ನಾಯಕರಿಗೆ ಟಾನಿಕ್ ಸಿಕ್ಕಂತಾಗಿತ್ತು. ಇದೇ ಪ್ರಯೋಗವನ್ನು ರಾಜ್ಯದಲ್ಲಿ ಅಳವಡಿಸಲು ಮುಂದಾದರೆ, 40ಕ್ಕೂ ಹೆಚ್ಚು ಮಂದಿ ಸ್ಥಾನ ಕಳಕೊಳ್ಳಲಿದ್ದಾರೆ. ವಯಸ್ಸಾದವರು, 2-3 ಬಾರಿ ಗೆದ್ದರೂ ಪಕ್ಷದ ಕೆಲಸದಲ್ಲಿ ತೊಡಗದೇ ಇರುವವರು, ಸ್ವಂತ ವರ್ಚಸ್ಸು ಗಳಿಸಿಕೊಳ್ಳದೇ ಇರುವವರನ್ನು ಬದಲಿಸಲು ಬಿಜೆಪಿ ಹೈಕಮಾಂಡ್ ಮುಂದಾಗಿದೆ ಎನ್ನುವ ಮಾತು ಕೇಳಿಬಂದಿದೆ.
ಈಗಾಗಲೇ ರಾಜ್ಯದಲ್ಲಿ ಎರಡು ಬಾರಿ ಬಿಜೆಪಿ ಕಡೆಯಿಂದ ಖಾಸಗಿ ಸರ್ವೇ ನಡೆಸಿದ್ದು, ಪ್ರತಿಕೂಲ ಫಲಿತಾಂಶ ಬಂದಿರುವುದು ದೊಡ್ಡ ಸರ್ಜರಿಗೆ ಕಾರಣ ಎನ್ನಲಾಗುತ್ತಿದೆ. ಕರಾವಳಿಯಿಂದ ತೊಡಗಿ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಮಧ್ಯ ಕರ್ನಾಟಕ ಸೇರಿದಂತೆ ಪಕ್ಷದ ಬಲ ಇರುವ ಎಲ್ಲ ಕಡೆಯೂ ಹಳೆ ಮುಖಗಳನ್ನು ಬದಲಿಸಿ ಹೊಸಬರಿಗೆ ಮಣೆ ಹಾಕಲು ಪ್ಲಾನ್ ನಡೆದಿದೆ. ಹೀಗಾಗಿ ಕೆಲವು ಹಿರಿಯ ನಾಯಕರು ತಮ್ಮ ಮಕ್ಕಳಿಗೆ ಸ್ಥಾನ ಸಿಗಲಿ ಎಂದು ತೆರೆಮರೆಯ ಕಸರತ್ತನ್ನೂ ಆರಂಭಿಸಿದ್ದಾರೆ. ಯಡಿಯೂರಪ್ಪ ತಮ್ಮ ಸ್ಥಾನವನ್ನು ಪುತ್ರನಿಗೆ ಬಿಟ್ಟು ಕೊಡುವುದಾಗಿ ಹೇಳಿದ್ದರೆ, ಇತರೇ ನಾಯಕರು ಆ ರೀತಿ ಹೇಳುವುದಕ್ಕೆ ಧೈರ್ಯ ಹೊಂದಿಲ್ಲ. ಹೀಗಾಗಿ ಬಿಜೆಪಿ ಒಳಗಡೆ ಚುನಾವಣೆ ಸಮೀಪ ಬರುತ್ತಿದ್ದಂತೆ ದೊಡ್ಡ ರೀತಿಯ ಸರ್ಜರಿ ಆಗೋದು ಖಚಿತ ಎನ್ನಲಾಗುತ್ತಿದೆ.
Uttar Pradesh model to come in Karnataka Politics, no ticket for those won twice and thrice. More than 40 plus constitutes to have new faces.
23-04-25 02:51 pm
Bangalore Correspondent
Harish Poonja, Speaker U T Khader: ಸ್ಪೀಕರ್ ಧರ...
23-04-25 01:06 pm
ಒಂದೇ ಸಮುದಾಯವನ್ನು ಶಿಕ್ಷಣ, ಉದ್ಯೋಗ ಕಾರಣಕ್ಕೆ ಪ್ರತ...
22-04-25 10:15 pm
30 ವರ್ಷಗಳಲ್ಲಿ ಮುಸ್ಲಿಮರು, ಪರಿಶಿಷ್ಟರ ಸಂಖ್ಯೆ ದುಪ...
22-04-25 10:13 pm
Bidar SSLC Student, Blackmail: ಫುಲ್ ಮಾರ್ಕ್ ಕೊ...
22-04-25 02:37 pm
23-04-25 05:16 pm
HK News Desk
Pahalgam terror attack Live: ಜಮ್ಮು ಕಾಶ್ಮೀರದಲ್...
22-04-25 10:33 pm
Rahul Gandhi, BJP : ಅಮೆರಿಕದಲ್ಲಿ ನಿಂತು ಭಾರತದ ಚ...
22-04-25 07:13 pm
Next Pope: ರೋಮನ್ ಕ್ಯಾಥೋಲಿಕ್ ಚರ್ಚ್ನ 266ನೇ ಪೋಪ...
21-04-25 07:46 pm
Pope Francis Death, Vatican, Catholic: ಕೆಥೋಲಿ...
21-04-25 02:13 pm
21-04-25 10:32 pm
Mangalore Correspondent
Puttur, Arun Putila: ಬ್ರಾಹ್ಮಣರು ಮತ್ತೆ ಪರಶುರಾಮ...
21-04-25 07:08 pm
Mangalore Chakravarti Sulibele, Ujre; ಸರ್ಕಾರವ...
20-04-25 05:42 pm
DK Shivakumar, Dharmasthala temple, Mangalore...
20-04-25 12:51 pm
Wafq Protest Mangalore, Police FIR; ವಕ್ಫ್ ವಿರ...
19-04-25 06:19 pm
23-04-25 01:03 pm
Mangalore Correspondent
Shivamogga man killed in Pahalgam attack: ಕಾಶ...
22-04-25 07:37 pm
IPS Om Prakash Murder, Update: ನಿವೃತ್ತ ಡಿಜಿಪಿ...
22-04-25 03:26 pm
Om Prakash IPS Murder, Wife arrest: ನಿವೃತ್ತ ಡ...
21-04-25 01:03 pm
Karnataka DGP Om Prakash Murder, wife: ನಿವೃತ್...
20-04-25 10:52 pm