ಬ್ರೇಕಿಂಗ್ ನ್ಯೂಸ್
03-08-20 11:25 am Bangalore Correspondent ಕರ್ನಾಟಕ
ಬೆಂಗಳೂರು : ಎಂಥಹ ಕಾಲ ಬಂದಿದೆ ನೋಡಿ, ವೈದ್ಯೋ ನಾರಾಯಣ ಅಂತ ಹೇಳ್ತೀವಿ. ಆದರೆ ಅವರೇ ಕಾಮುಕರಾದರೆ. ಹೌದು, ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ಕೆಲಸ ಮಾಡುತ್ತಿದ್ದ ವೈದ್ಯರೊಬ್ಬರು ಕರೋನಾ ರೋಗಿಯ ಮೇಲೂ ಕಾಮದ ವಕ್ರ ದೃಷ್ಟಿ ಬೀರಿದ್ದಾರೆ. ಜುಲೈ 25ರಂದು ನಡೆದ ಈ ಘಟನೆ ಈಗ ಮುನ್ನೆಲೆಗೆ ಬಂದಿದೆ.
ಕರೋನಾದಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಮಹಿಳಾ ರೋಗಿಗೆ ವೈದ್ಯರು ಲೈಂಗಿಕ ಕಿರುಕುಳ ನೀಡಿರುವುದಾಗಿ ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳೇ ವಿವಿ ಪುರಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ರಾತ್ರಿ ಹೊತ್ತು ರೋಗಿಯಿದ್ದ ವಾರ್ಡ್ಗೆ ಬಂದಿದ್ದ ವೈದ್ಯರು ಆಕೆಯ ಖಾಸಗಿ ಭಾಗಗಳನ್ನು ಮುಟ್ಟಿ, ಅಸಹಜವಾಗಿ ವರ್ತಿಸಿದ್ದರು ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

ವಿಕ್ಟೋರಿಯಾ ಆಸ್ಪತ್ರೆಯ ಟ್ರಾಮಾ ಕೇರ್ ಸೆಂಟರ್ನಲ್ಲಿ ದಾಖಲಾಗಿದ್ದ ರೋಗಿ ತನಗಾದ ಕೆಟ್ಟ ಅನುಭವವನ್ನು ಅಲ್ಲಿನ ನೋಡಲ್ ಆಫೀಸರ್ ಬಳಿ ಹೇಳಿಕೊಂಡಿದ್ದರು. ನಂತರ ನೋಡಲ್ ಅಧಿಕಾರಿ ಈ ವಿಷಯವನ್ನು ವಿಕ್ಟೋರಿಯಾ ಆಸ್ಪತ್ರೆಯ ಆಡಳಿತ ಮಂಡಳಿಗೆ ತಿಳಿಸಿದ್ದರು. ಪೊಲೀಸರ ಪ್ರಕಾರ, ಆಸ್ಪತ್ರೆಯ ಅಧಿಕಾರಿಗಳು ಆ ಘಟನೆಯ ಬಗೆಗಾಗಲಿ ಅಥವಾ ಆರೋಪಿ ವೈದ್ಯರ ಬಗ್ಗೆಯಾಗಲಿ ಸಂಪೂರ್ಣ ಮಾಹಿತಿ ನೀಡಿಲ್ಲ.
ಈ ಘಟನೆಯ ಬಗ್ಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಆಂತರಿಕ ತನಿಖೆ ನಡೆಸಲಾಗುತ್ತಿದೆ. ಅದಾದ ಬಳಿಕ ನಾಲ್ಕೈದು ದಿನಗಳಲ್ಲಿ ಸಂಪೂರ್ಣ ಮಾಹಿತಿಯನ್ನು ಪೊಲೀಸರಿಗೆ ನೀಡಲಾಗುವುದು ಎಂದು ವಿಕ್ಟೋರಿಯಾ ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಕರೋನಾ ಸೋಂಕಿತರಿಗೆ ಮೊದಲೇ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗುತ್ತಿಲ್ಲ. ಇನ್ನು ಚಿಕಿತ್ಸೆ ಕೊಡುವ ಆಸ್ಪತ್ರೆಗಳಲ್ಲಿ ಇಂತಹ ಘಟನೆಗಳು ನಡೆದರೆ ಕರೋನಾ ಸೋಂಕಿತರು ಯಾವ ನಂಬಿಕೆಯ ಮೇಲೆ ಆಸ್ಪತ್ರೆಗೆ ದಾಖಲಾಗಬೇಕು ಅನ್ನೋದೇ ಈಗ ಯಕ್ಷ ಪ್ರಶ್ನೆ.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm