ಬ್ರೇಕಿಂಗ್ ನ್ಯೂಸ್
05-08-22 07:47 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 5: ಕೇಂದ್ರ ಸರಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಜಾರಿಗೊಳಿಸಿದ್ದ ಹಳೆ ವಾಹನಗಳ ಗುಜರಿಗೆ ಹಾಕುವ ಸ್ಕ್ರಾಪಿಂಗ್ ನಿಯಮವನ್ನು ರಾಜ್ಯದಲ್ಲೂ ಜಾರಿಗೆ ತರಲಾಗಿದೆ. ಈ ಬಗ್ಗೆ ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು ತಕ್ಷಣದಿಂದಲೇ ಜಾರಿಗೆ ತರುವಂತೆ ಸಾರಿಗೆ ಇಲಾಖೆಗೆ ಸೂಚಿಸಿದ್ದಾರೆ.
ಮೋಟಾರ್ ವಾಹನ ಕಾಯ್ದೆ - 2021 (ರಿಜಿಸ್ಟ್ರೇಷನ್ ಮತ್ತು ವಾಹನ ಚಾಲನಾ ಪರವಾನಗಿ ಸ್ಕ್ರಾಫ್ ಫೆಸಿಲಿಟಿ) ಜಾರಿಗೆ ತರುವ ಬಗ್ಗೆ ಕೇಂದ್ರ ಸರ್ಕಾರ ಕಳೆದ ಎಪ್ರಿಲ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿತ್ತು. ಈ ನಿಯಮವನ್ನು ಇಂದಿನಿಂದಲೇ ಜಾರಿಗೆ ಬರುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಾಲಿನ್ಯ ಮತ್ತು ಅಪಘಾತಗಳನ್ನು ಕಡಿಮೆ ಮಾಡುವ ಸಲುವಾಗಿ ಹಳೆಯ ವಾಹನಗಳನ್ನು ತೆರವುಗೊಳಿಸಲು ಹಳೆ ವಾಹನಗಳ ಗುಜರಿಗೆ ಹಾಕುವ ನೀತಿಯನ್ನು ಕಳೆದ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರ ಜಾರಿಗೆ ತಂದಿತ್ತು. ಈ ನಿಯಮದಡಿ ವಾಹನ ಮಾಲೀಕರು 15 ವರ್ಷಗಳ ನಂತರ ನೋಂದಣಿ ಮುಗಿದ ತಮ್ಮ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡಲು ಸಾಧ್ಯವಾಗುತ್ತದೆ. ದೆಹಲಿಯಲ್ಲಿ ಡೀಸೆಲ್ ವಾಹನಗಳಿಗೆ 10 ವರ್ಷಗಳ ನಂತರ ಮತ್ತು ಪೆಟ್ರೋಲ್ ವಾಹನಗಳಿಗೆ 15 ವರ್ಷಗಳಿಗೆ ನೋಂದಣಿ ಕೊನೆಗೊಳ್ಳುವಂತೆ ನೀತಿ ಮಾಡಲಾಗಿದೆ. ಆಬಳಿಕ ವಾಹನ ಸಾಮರ್ಥ್ಯ ಅನುಸರಿಸಿ ಪರವಾನಗಿ ನವೀಕರಿಸುವುದಿದ್ದರೆ ಹಲವು ಪಟ್ಟು ಹೆಚ್ಚು ದಂಡ ಕಟ್ಟಬೇಕಾಗುತ್ತದೆ.
ಇದೇ ವೇಳೆ, ಸ್ಕ್ರ್ಯಾಪೇಜ್ ನೀತಿಯು ಹಳೆಯ ವಾಹನಗಳನ್ನು ತೆಗೆದುಹಾಕುವುದರ ಜೊತೆಗೆ ಹೊಸ ಆಟೋಮೊಬೈಲ್ ಉದ್ಯಮಕ್ಕೆ ಉತ್ತೇಜನ ನೀಡುವ ಗುರಿಯನ್ನು ಹೊಂದಿದೆ. 2023ರ ಬಳಿಕ ಎಲ್ಲ ರೀತಿಯ ಭಾರೀ ವಾಣಿಜ್ಯ ವಾಹನಗಳು ಕಡ್ಡಾಯ ಫಿಟ್ನೆಸ್ ಪರೀಕ್ಷೆಗೆ ಒಳಗಾಗಬೇಕಾಗುತ್ತದೆ. ಇದೇ ನೀತಿಯು ಜೂನ್ 2024 ರಿಂದ ಖಾಸಗಿ ಮತ್ತು ಇತರ ವಾಹನಗಳಿಗೂ ಅನ್ವಯಿಸಲಿದೆ. ಆದರೆ ರಾಜ್ಯದಲ್ಲಿ ದೆಹಲಿಯ ನೀತಿಗಳೇ ಇರಲಿವೆಯಾ, ವಾಹನಗಳ ಪರವಾನಗಿ ಅವಧಿಯನ್ನು ಹೆಚ್ಚಿಸುತ್ತಾರಾ ಅನ್ನುವ ಬಗ್ಗೆ ರಾಜ್ಯ ಸರಕಾರ ಸ್ಪಷ್ಟ ಪಡಿಸಿಲ್ಲ.
Govt vehicle scrappage policy implements in Karnataka state
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm