ಬ್ರೇಕಿಂಗ್ ನ್ಯೂಸ್
10-08-22 03:14 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 10: ನಾಲ್ವರನ್ನು ಕೊಲೆಗೈದು ಜೀವಾವಧಿ ಶಿಕ್ಷೆಗೊಳಗಾಗಿರುವ ವಾಮಂಜೂರು ಪ್ರವೀಣನನ್ನು ಜೈಲಿನಿಂದ ಬಿಡುಗಡೆ ಮಾಡಬಾರದು ಎಂದು ಮನೆಯವರು ಒತ್ತಾಯಿಸಿದ್ದಾರೆ. ಈ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.
ಪ್ರವೀಣ್ ನನ್ನು ಯಾವುದೇ ಕಾರಣಕ್ಕೂ ಜೈಲಿನಿಂದ ಬಿಡುಗಡೆ ಮಾಡಬಾರೆಂದು ಒತ್ತಾಯಿಸಿ ಆತನ ಮನೆಯವರು ಬುಧವಾರ ಬೆಳಗ್ಗೆ ಗೃಹ ಸಚಿವರನ್ನು ಭೇಟಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಪ್ರವೀಣ್ ಜೈಲಿನಿಂದ ಹೊರಗೆ ಬಂದರೆ ತಮ್ಮನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾಗಿ ಮನೆಯವರು ಹೇಳುತ್ತಿದ್ದಾರೆ. ಪ್ರವೀಣನಿಗೆ ಗಲ್ಲು ಶಿಕ್ಷೆ ಆಗಿತ್ತು. ಆನಂತರ ಸುಪ್ರೀಂ ಕೋರ್ಟ್ ಜೀವಾವಧಿ ಶಿಕ್ಷೆಯಾಗಿ ಬದಲಾವಣೆ ಮಾಡಿತ್ತು. ಅದಕ್ಕೂ ಮೊದಲು ರಾಷ್ಟ್ರಪತಿಯವರು ಗಲ್ಲು ಶಿಕ್ಷೆಯನ್ನು ಎತ್ತಿಹಿಡಿದಿದ್ದರು. ಈಗ ನಮಗೆ ಆತನ ಹಿನ್ನೆಲೆ ಗೊತ್ತಾಗಿದೆ ಎಂದರು.
ಬೆಳಗಾವಿ ಜೈಲಿನಿಂದ ಕರೆದೊಯ್ಯುವಾಗ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಹೋಗಿದ್ದ. ಗೋವಾದಲ್ಲಿ ತಲೆಮರೆಸಿಕೊಂಡು ಅಲ್ಲಿ ಮದುವೆಯಾಗಿ ಮಗು ಹೊಂದಿದ್ದಾನೆಂದು ಮನೆಯವರು ಹೇಳುತ್ತಿದ್ದಾರೆ. ಸರಕಾರದ ಹಳೆಯ ಆದೇಶದಲ್ಲಿ 14 ವರ್ಷಗಳ ಜೈಲು ಶಿಕ್ಷೆಯ ಬಳಿಕ ಸನ್ನಡತೆಯ ಆಧಾರದಲ್ಲಿ ಕೈದಿಯನ್ನು ಬಿಡುಗಡೆ ಮಾಡಲು ಅವಕಾಶ ಇದೆ.
ವಾಮಂಜೂರು ಪ್ರವೀಣನದ್ದು ವಿಶೇಷ ಪ್ರಕರಣ. ಈ ಬಗ್ಗೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆದಿದ್ದೇನೆ. ಕಾನೂನು ಪ್ರಕಾರ ಏನು ಮಾಡಲು ಸಾಧ್ಯವೋ, ಅದನ್ನು ಮಾಡುತ್ತೇವೆ. ಕೊಲೆ, ಅತ್ಯಾಚಾರ ಮಾಡಿದ ಆರೋಪಿಗಳನ್ನು ಬಿಡುಗಡೆ ಮಾಡಬಾರದೆಂದು ಸಂಪುಟದಲ್ಲಿ ನಿರ್ಣಯಿಸಿ ನಿಯಮ ಮಾಡಿದ್ದೇವೆ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಬಿಡುಗಡೆಗೆ ಅವಕಾಶ ಇಲ್ಲ. ಸರಕಾರದ ಈ ಹಿಂದಿನ ಆದೇಶದ ಪ್ರಕಾರ ಬಿಡುಗಡೆ ಪ್ರಸ್ತಾಪ ಬಂದಿದೆ. ಈ ಬಗ್ಗೆ ಕಾನೂನು ಪ್ರಕಾರ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಗೃಹ ಸಚಿವರು ಹೇಳಿದ್ದಾರೆ.
Mangalore Murderer Praveen Vamanjoor who is all set to be released on Aug 15th from jail has now got strong objection from his family members to not release him from the jail as he killed four of his own family members, Home Minister Araga will now discuss the matter if connection to release him or not.
17-07-26 02:55 pm
HK News Staffer
ನಾಲ್ಕು ತಿಂಗಳಲ್ಲೇ ಅಂತ್ಯಗೊಂಡ ನವಜೀವನ! ಅನಾರೋಗ್ಯದ...
13-07-26 10:21 pm
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
17-07-26 10:32 am
HK News Staffer
ಹಾರ್ಮುಜ್ನಲ್ಲಿ ಇರಾನ್ ಅಟ್ಟಹಾಸ! ಮತ್ತೆ ಎರಡು ಟ್ಯಾ...
14-07-26 08:20 pm
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
17-07-26 10:25 pm
HK News Staffer
ಎಸ್ಐಆರ್ ನಡುವೆ ಶಾಶ್ವತ ನಿವಾಸಿ ಪತ್ರ ಜಾರಿ ಅಕ್ರಮ ಬ...
17-07-26 07:58 pm
ಉಳ್ಳಾಲ ತೀರಕ್ಕೆ ಅಪ್ಪಳಿಸಿದ ಬೂತಾಯಿ ಮೀನುಗಳ ರಾಶಿ !...
17-07-26 07:22 pm
ಸುರತ್ಕಲ್ ಬಳಿ ಮೀನುಗಾರಿಕಾ ದೋಣಿ ಪಲ್ಟಿ ; ಸಮುದ್ರಕ್...
17-07-26 03:55 pm
ಸೌಂದರ್ಯ ಕೆಡಿಸಿದೆ ತೊಕ್ಕೊಟ್ಟು ಫ್ಲೈ ಓವರಿನ ಅನಧಿಕೃ...
15-07-26 10:44 pm
17-07-26 09:07 pm
HK News Staffer
ಮಠದಕಣಿ ಮನೆ ಕಳ್ಳತನ ಬೆನ್ನತ್ತಿದ ಬರ್ಕೆ ಪೊಲೀಸರು; ನ...
17-07-26 08:11 pm
ಬಿಸಿ ರೋಡಿನಲ್ಲಿ ಯುವತಿ ಕೊಂದ ಆರೋಪಿ ಚೇತನ್ ಪಚ್ಚನಾಡ...
17-07-26 12:58 pm
Bc Road Murder Update, Mangalore: ಏಕಮುಖದ ಪ್ರೀ...
16-07-26 09:26 pm
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm