ಬ್ರೇಕಿಂಗ್ ನ್ಯೂಸ್
11-08-22 05:49 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 11: ಮಹತ್ವದ ಬೆಳವಣಿಗೆಯಲ್ಲಿ ಕಾಂಗ್ರೆಸ್ ಸರಕಾರದ ಅವಧಿಯಲ್ಲಿ ರಚಿಸಲಾಗಿದ್ದ ಎಸಿಬಿ ತನಿಖಾ ಘಟಕವನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದ್ದು ಎಸಿಬಿಯನ್ನು ಲೋಕಾಯುಕ್ತ ವ್ಯಾಪ್ತಿಗೆ ವಿಲೀನಗೊಳಿಸುವಂತೆ ಆದೇಶ ಹೊರಡಿಸಿದೆ. ಅಲ್ಲದೆ, ಎಸಿಬಿಯಲ್ಲಿ ದಾಖಲಾಗಿರುವ ಎಲ್ಲ ಪ್ರಕರಣಗಳನ್ನೂ ಲೋಕಾಯುಕ್ತಕ್ಕೆ ವರ್ಗಾವಣೆ ಮಾಡುವಂತೆ ಸೂಚಿಸಿದ್ದು, ರಾಜ್ಯದ ಎಲ್ಲೆಡೆ ಇದ್ದ ಲೋಕಾಯುಕ್ತ ಪೊಲೀಸ್ ಠಾಣೆಗಳನ್ನು ಪುನರ್ ಚಾಲನೆಗೊಳ್ಳುವಂತೆ ಆದೇಶದಲ್ಲಿ ಹೇಳಿದೆ.
ಆದೇಶ ಪ್ರಕಾರ, ಎಸಿಬಿ ಘಟಕದಲ್ಲಿರುವ ಎಲ್ಲ ಪೊಲೀಸರು ಲೋಕಾಯುಕ್ತ ವ್ಯಾಪ್ತಿಗೆ ಬರಲಿದ್ದಾರೆ. ಇದುವರೆಗೆ ಎಸಿಬಿ ನಡೆಸಿರುವ ತನಿಖೆಗೆ ಸಂಬಂಧಿಸಿದ ದಾಖಲೆಗಳು ಹಾಗೂ ಬಾಕಿ ಇರುವ ಎಲ್ಲ ಪ್ರಕರಣಗಳನ್ನೂ ತಕ್ಷಣವೇ ಲೋಕಾಯುಕ್ತಕ್ಕೆ ವರ್ಗಾಯಿಸಬೇಕು ಎಂದು ನ್ಯಾಯಮೂರ್ತಿಗಳಾದ ಬಿ.ವೀರಪ್ಪ ಮತ್ತು ನ್ಯಾ. ಕೆ.ಎಸ್. ಹೇಮಲೇಖ ಅವರಿದ್ದ ಪೀಠ ಮಹತ್ವದ ಆದೇಶ ಹೊರಡಿಸಿದೆ.

2016ರ ಮಾ.14ರಂದು ರಾಜ್ಯದಲ್ಲಿ ಆಡಳಿತ ನಡೆಸುತ್ತಿದ್ದ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಲೋಕಾಯುಕ್ತ ಅಧಿಕಾರ ಮೊಟಕುಗೊಳಿಸಿ ಹೊಸತಾಗಿ ಎಸಿಬಿ ರಚಿಸಿ ಆದೇಶ ಹೊರಡಿಸಿತ್ತು. ಆದರೆ ಎಸಿಬಿ ರಚನೆಯ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹೈಕೋರ್ಟ್ಗೆ ಸಲ್ಲಿಕೆಯಾಗಿದ್ದವು. ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಅಪರಾಧ ದಾಖಲಿಸಲು ಮತ್ತು ತನಿಖೆಗೆ ಸಂಬಂಧಿಸಿದಂತೆ ಇದ್ದ ಸಾಂವಿಧಾನಿಕ ಅಧಿಕಾರವನ್ನು ಲೋಕಾಯುಕ್ತ ಪೊಲೀಸರಿಂದ ಹಿಂಪಡೆದಿದ್ದ ರಾಜ್ಯ ಸರಕಾರದ ಆದೇಶವನ್ನು ಒಂದೇ ವಾರದಲ್ಲಿ 2016ರ ಮಾ.19ರಂದು ಹೈಕೋರ್ಟ್ನಲ್ಲಿ ಪ್ರಶ್ನೆ ಮಾಡಲಾಗಿತ್ತು. ಪ್ರಕರಣದ ಕುರಿತು ಸುದೀರ್ಘ ವಾದ ಆಲಿಸಿದ ಬಳಿಕ ತೀರ್ಪು ಪ್ರಕಟಿಸಿದ ಹೈಕೋರ್ಟ್, ಎಸಿಬಿ ರಚನೆಯನ್ನೇ ರದ್ದುಗೊಳಿಸಿದೆ.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಚಿಕ್ಕಬಳ್ಳಾಪುರದಲ್ಲಿ ಪ್ರತಿಕ್ರಿಯಿಸಿದ್ದು ಹೈಕೋರ್ಟ್ ತೀರ್ಮಾನವನ್ನು ಗೌರವಿಸುತ್ತೇನೆ. ಪೂರ್ಣ ಪ್ರಮಾಣದ ಆದೇಶ ನೋಡಿದ ಮೇಲೆ ಪ್ರತಿಕ್ರಿಯಿಸುತ್ತೇನೆ. ಎಸಿಬಿ ಸ್ವತಂತ್ರ ತನಿಖಾ ಸಂಸ್ಥೆ. ನಮ್ಮ ರಾಜ್ಯದಲ್ಲಿ ಮಾತ್ರ ಎಸಿಬಿ ಇರಲಿಲ್ಲ. ಬೇರೆ ಬೇರೆ ರಾಜ್ಯಗಳಲ್ಲಿ ಎಸಿಬಿ ಇದೆ ಎಂದು ಹೇಳಿದ್ದಾರೆ.
In a significant judgement, the High Court of Karnataka on Thursday abolished the Anti Corruption Bureau (ACB), formed by the state government in 2016 by withdrawing the Lokayukta police wing’s power under Prevention of Corruption (PC) Act
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
04-03-26 09:31 pm
HK News Staffer
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
ವಿದ್ಯುತ್ ಗುತ್ತಿಗೆದಾರರಲ್ಲಿ ಪರ್ಸೆಂಟ್ ಲೆಕ್ಕದಲ್ಲಿ...
03-03-26 03:10 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm