ಬ್ರೇಕಿಂಗ್ ನ್ಯೂಸ್
12-08-22 02:40 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 12 : 2016 ರಲ್ಲಿ ಲೋಕಾಯುಕ್ತವನ್ನ ತಿರುಚಿ ಎಸಿಬಿ ತರಲಾಗಿತ್ತು. ಒಂದು ಕಾನೂನು ಇರುವಾಗಲೇ ಮತ್ತೊಂದು ಮಾಡುವುದು ಕಾನೂನು ವಿರೋಧ ಎಂದು ಜಸ್ಟಿಸ್ ಗೋಪಾಲರಾವ್ ಹೇಳಿದ್ದರು. ಈಗ ಎಸಿಬಿ ಹೋಗಿದೆ, ಲೋಕಾಯುಕ್ತ ಬಂದಿದೆ. ಇದನ್ನ ಅತ್ಯಂತ ಗೌರವದಿಂದ ನಾನು ಸ್ವಾಗತಿಸುತ್ತೇನೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.
ಮತ್ತೆ ಲೋಕಾಯುಕ್ತ ತರುವಂತೆ ಹೈಕೋರ್ಟ್ ಹೇಳಿದ್ದರಿಂದ ಮೂರು ರಾಜಕೀಯ ಪಕ್ಷಗಳು ಕೂಡ ಬೆತ್ತಲಾಗಿವೆ. ಸಿಎಂ ಪ್ರತಿಕ್ರಿಯೆ ನೀಡಿ, ಎಸಿಬಿ ರದ್ದು ಮಾಡಿರುವುದನ್ನ ಕೇಳಿದ್ದೇನೆ. ಆದೇಶ ಪ್ರತಿ ಗಮನಿಸಿ ಪ್ರತಿಕ್ರಿಯೆ ನೀಡುತ್ತೇನೆ ಎಂದಿದ್ದಾರೆ. ರಾಜ್ಯದ ಸಿಎಂ ಆದವರು ಏನು ಗೊತ್ತಿಲ್ಲದಂತೆ ವರ್ತಿಸುತ್ತಿದ್ದಾರೆ. ಮತ್ತೊಂದೆಡೆ ಮಾಜಿ ಸಿಎಂ ಸಿದ್ದರಾಮಯ್ಯ ಎಸಿಬಿ ರದ್ದು ಮಾಡಿರುವುದು ಸ್ವಾಗತಾರ್ಹ ಎಂದಿದ್ದಾರೆ. ಇನ್ನೊಂದೆಡೆ ಮಾಜಿ ಸಿಎಂ ಕುಮಾರಸ್ವಾಮಿ, ಎಸಿಬಿ ರದ್ದಿನಿಂದ ಭ್ರಷ್ಟಾಚಾರ ಕಡಿಮೆಯಾಗುತ್ತದೆ ಎಂಬ ವಿಶ್ವಾಸವಿಲ್ಲ ಎಂದಿದ್ದಾರೆ. ಎಸಿಬಿ ಹಲವು ರಾಜ್ಯಗಳಲ್ಲಿದೆ, ಆದರೆ ಇಲ್ಲಿ ಮೂರೂ ಪಕ್ಷಗಳ ನಾಯಕರು ಬೆತ್ತಲಾಗಿದ್ದಾರೆ ಎಂದು ಎಂಎಲ್ಸಿ ಎಚ್. ವಿಶ್ವನಾಥ್ ಹೇಳಿದ್ದಾರೆ.





ಯಾವುದೋ ರಾಜಕೀಯ ಪಾರ್ಟಿಗಾಗಿ ಕಾನೂನುಗಳು ಇರುವುದಲ್ಲ. ಆಡಳಿತ ಮಾಡುವವರು ರಾಜ್ಯದ ಹಿತದೃಷ್ಟಿಯಿಂದ ಲೋಕಾಯುಕ್ತವನ್ನ ಸೂಕ್ತ ರೀತಿಯಲ್ಲಿ ಬಳಸಬೇಕು. ಕೋರ್ಟ್ ತೀರ್ಪನ್ನ ಸರ್ಕಾರ ಸರಿಯಾಗಿ ಪಾಲಿಸಬೇಕು. ಇದೇ ಲೋಕಾಯುಕ್ತದಿಂದಾಗಿ ಹಿಂದೊಮ್ಮೆ ಸಿಎಂ ಆಗಿದ್ದವರೇ ಜೈಲಿಗೆ ಹೋಗಿದ್ದರು. ಈಶ್ವರಪ್ಪ ಮನೆಯಲ್ಲಿ ಹಣ ಎಣಿಸುವ ಮೆಷಿನ್ ಸಿಕ್ಕಿತ್ತು. ಆಗಲೇ ಲೋಕಾಯುಕ್ತ ಮುಚ್ಚುವ ನಿರ್ಧಾರ ಆಗಿತ್ತು. ಸಿದ್ದರಾಮಯ್ಯ ಬಂದು ಮುಚ್ಚಿಬಿಟ್ಟು ಇವರಿಗೆಲ್ಲ ಒಳಿತು ಮಾಡಿದ್ದರು ಎಂದು ಎಚ್. ವಿಶ್ವನಾಥ್ ವ್ಯಂಗ್ಯವಾಡಿದರು.
HC abolishes ACB in State MLC Vishwanath slams bjp says three ministers went naked.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm