ಬ್ರೇಕಿಂಗ್ ನ್ಯೂಸ್
13-08-22 09:59 pm Bangalore Correspondent ಕರ್ನಾಟಕ
ಬೆಂಗಳೂರು, ಆ.13: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಅಂಗವಾಗಿ ರಾಜ್ಯದಲ್ಲಿ ಸುಮಾರು 1.20 ಕೋಟಿ ಮನೆಗಳ ಮೇಲೆ ರಾಷ್ಟ್ರಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಂಗಳೂರಿನ ವಿಧಾನಸೌಧ ಮಹಾ ಮೆಟ್ಟಿಲುಗಳ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಯೋಜಿಸಿದ್ದ ಮನೆ ಮನೆಯಲ್ಲಿ ತ್ರಿವರ್ಣ ಧ್ವಜ ಕಾರ್ಯಕ್ರಮಕ್ಕೆ ಬಲೂನು ಹಾರಿ ಬಿಡುವ ಮೂಲಕ ಚಾಲನೆ ನೀಡಿ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿ ಅವರ ಕರೆಯ ಮೇರೆಗೆ ಹರ್ ಘರ್ ತಿರಂಗಾ ಅಭಿಯಾನ ಇಂದಿನಿಂದ ರಾಜ್ಯದಲ್ಲಿ ಪ್ರಾರಂಭವಾಗಿದೆ. ಸರ್ಕಾರದಿಂದ ಈಗಾಗಲೇ 1.08 ಕೋಟಿ ಧ್ವಜಗಳನ್ನು ವಿತರಿಸಲಾಗಿದೆ. ಇದಲ್ಲದೆ, ಸಂಘ ಸಂಸ್ಥೆಗಳೂ ಸಹ ಕೈ ಜೋಡಿಸಿದ್ದು ಮೂರು ದಿನಗಳ ಅಭಿಯಾನದಲ್ಲಿ 1.20 ಕೋಟಿ ರಾಷ್ಟ್ರಧ್ವಜಗಳು ಹಾರಾಡುತ್ತವೆ ಎಂದು ಹೇಳಿದರು.

ಹರ್ ಘರ್ ತಿರಂಗಾ ಪ್ರತಿ ಹಳ್ಳಿಯಲ್ಲೂ ವಿಸ್ತಾರಗೊಂಡಿದೆ. ಜನರು ತಮ್ಮ ತಮ್ಮ ಮನೆಗಳ ಮೇಲೆ ರಾಷ್ಟ್ರಧ್ವಜಗಳನ್ನು ಹಾಕುತ್ತಿದ್ದಾರೆ. ವಾಸ್ತವವಾಗಿ ಅಭಿಯಾನ ಇಂದಿನಿಂದ ಆಂಭವಾಗುತ್ತಿದ್ದರೂ ಸಹ ಕಳೆದ ಎರಡು ದಿನಗಳಿಂದಲೇ ಜನರಿಂದ ಸ್ಪಂದನೆ ವ್ಯಕ್ತವಾಗುತ್ತಿದೆ. ಶಾಲಾ ಮಕ್ಕಳು ಎಲ್ಲಾ ಕಡೆ ಪಥಸಂಚಲನ ನಡೆಸಿ ಧ್ವಜದ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಹೇಳಿದರು.
ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳಾಗಿವೆ. ಅಮೃತ ಮಹೋತ್ಸವ ನೆನಪಿಗೆ ದೇಶದ ಎಲ್ಲಾ ಜನರಿಂದಲೂ ಧ್ವಜ ಹಾರಿಸುವ ಅಭಿಯಾನ ನಡೆಸುವ ಮೂಲಕ ನಾವೆಲ್ಲರೂ ಒಂದು, ನಾವೆಲ್ಲರೂ ದೇಶಭಕ್ತರು ಎಂದು ಸಾರಲಾಗುತ್ತದೆ. ಅಲ್ಲದೆ, ಮುಂದಿನ 25 ವರ್ಷ ಭಾರತದ ಭವ್ಯ ಭವಿಷ್ಯಕ್ಕೆ ಸಂಕಲ್ಪ ಮಾಡಲಾಗುತ್ತದೆ. ಜಾತಿ, ಮತ, ಭೇದ ಬಿಟ್ಟು ಭಾರತವನ್ನು ಶಕ್ತಿಶಾಲಿಯಾಗಿ ರೂಪಿಸಲು ನಿರ್ಣಯ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.
Chief Minister Basavaraj Bommai has said that the national flag will be hoisted over 1.20 crore houses in the state as part of the Amrit Mahotsav on 75th Independence day.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm