ಬ್ರೇಕಿಂಗ್ ನ್ಯೂಸ್
18-08-22 10:34 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ 18: ಹಿಜಾಬ್ ವಿವಾದದ ಬಳಿಕ ಶಾಲೆ, ಕಾಲೇಜಿನಲ್ಲಿ ಮತೀಯ ದ್ವೇಷದ ವಾತಾವರಣ ಕಿಡಿ ಹೊತ್ತಿಕೊಳ್ಳುವಂತಾಗಿದೆ. ಇದೀಗ ಗಣೇಶನ ಹಬ್ಬ ಹತ್ತಿರ ಬರುತ್ತಿದ್ದಂತೆ, ವಕ್ಫ್ ಬೋರ್ಡ್ ಸದಸ್ಯರು ಸರಕಾರಕ್ಕೆ ಹೊಸ ಅಹವಾಲು ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಗಣೇಶನ ಹಬ್ಬಕ್ಕೆ ಅವಕಾಶ ಕೊಟ್ಟರೆ, ಈದ್ ಮಿಲಾದ್ ನಡೆಸುವುದಕ್ಕೂ ಅವಕಾಶ ನೀಡಬೇಕು ಎಂದು ಶಿಕ್ಷಣ ಸಚಿವರಿಗೆ ಮನವಿ ನೀಡಿದ್ದಾರೆ.
ಈದ್ ಮಿಲಾದ್ ಹಬ್ಬವನ್ನೂ ಶಾಲೆಗಳಲ್ಲಿ ಆಚರಿಸಲು ಮತ್ತು ನಮಾಜ್ ನಡೆಸುವುದಕ್ಕೆ ಅವಕಾಶ ನೀಡಬೇಕು ಎಂದು ವಕ್ಫ್ ಮಂಡಳಿ ಸದಸ್ಯರು ಅಹವಾಲು ಮುಂದಿಟ್ಟಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಶಿಕ್ಷಣ ಸಚಿವ ಬಿಸಿ ನಾಗೇಶ್, ಯಾವುದೇ ಧಾರ್ಮಿಕ ಆಚರಣೆಗೂ ಶಾಲೆಗಳಲ್ಲಿ ಅವಕಾಶ ಇಲ್ಲ ಎಂದಿದ್ದಾರೆ. ಗಣೇಶನ ಹಬ್ಬ ನಡೆಸುವುದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಗಣೇಶನ ಹಬ್ಬವನ್ನು ದೇಶಕ್ಕೆ ಸ್ವಾತಂತ್ರ್ಯ ಸಿಗುವುದಕ್ಕೂ ಮೊದಲೇ ಶಾಲೆಗಳಲ್ಲಿ ಆಚರಿಸುತ್ತಾ ಬರಲಾಗಿತ್ತು. ಕೆಲವು ಶಾಲೆಗಳಲ್ಲಿ ಗಣೇಶನ ಮೂರ್ತಿ ಇಟ್ಟು ಪೂಜಿಸುತ್ತಿದ್ದರು. ನಮ್ಮ ಸರಕಾರ ಬಂದ ಬಳಿಕ ಗಣೇಶನ ಹಬ್ಬ ಆಚರಿಸಿದ್ದಲ್ಲ ಎಂದು ಹೇಳಿದ್ದಾರೆ.
ವಕ್ಫ್ ಬೋರ್ಡ್ ಅಧ್ಯಕ್ಷ ಶಾಫಿ ಸಹದಿ, ಶಾಲೆಗಳಲ್ಲಿ ಶುಕ್ರವಾರದ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಮಾಡಿಕೊಡಬೇಕು ಎಂಬ ಅಹವಾಲನ್ನೂ ಸರಕಾರದ ಮುಂದಿಟ್ಟಿದ್ದಾರೆ. ಶಾಲೆಗಳಲ್ಲಿ ಎಲ್ಲ ಮತ, ಧರ್ಮದವರೂ ಇದ್ದಾರೆ. ಎಲ್ಲರಿಗೂ ಸಮಾನ ಅವಕಾಶ ಕೊಡಬೇಕು. ಅವರಿಗೊಂದು ನ್ಯಾಯ, ಇವರಿಗೊಂದು ನ್ಯಾಯ ಅನ್ನುವಂತಾಗಬಾರದು. ಅವರಿಗೆ ಅನುಮತಿ ನೀಡಿದರೆ, ನಮಗೂ ನಮಾಜ್ ಮಾಡುವುದಕ್ಕೆ ಅವಕಾಶ ನೀಡಬೇಕು ಎಂದು ಶಾಫಿ ಹೇಳಿದ್ದಾರೆ.
ಹಿಜಾಬ್ ವಿವಾದ ಸಂದರ್ಭದಲ್ಲೂ ಈ ಬಗ್ಗೆ ನಾವು ಹೇಳಿದ್ದೆವು. ಒಂದು ಸಮುದಾಯವನ್ನು ಗುರಿ ಮಾಡಿಕೊಂಡು ಇಂತಹ ಕಾನೂನು ತರುತ್ತಿದ್ದಾರೆಂದು. ಈಗಲೂ ಅದನ್ನೇ ಹೇಳುತ್ತೇವೆ. ಗಣೇಶನ ಹಬ್ಬ ಆಚರಿಸುವುದಾದರೆ, ನಮಗೆ ನಮಾಜ್ ಮಾಡುವುದಕ್ಕೆ ಪ್ರತ್ಯೇಕ ಕೊಠಡಿ ಕೊಡಬೇಕೆಂದು ಕೇಳುತ್ತೇವೆ ಎಂದಿದ್ದಾರೆ.
On Wednesday, Nagesh's statement about Ganesha being worshipped in schools and colleges went viral on social media. The minister said at a press conference in Bengaluru, “We have given the freedom to schools and colleges to place (Ganesha) as they were practising earlier. It’s a practice of uniting society.”
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm