ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm