ಬ್ರೇಕಿಂಗ್ ನ್ಯೂಸ್
19-08-22 02:32 pm HK News Desk ಕರ್ನಾಟಕ
ವಿಜಯಪುರ, ಆಗಸ್ಟ್ 19: ವಿಜಯಪುರ ನಗರ ಹಾಗೂ ಹೆದ್ದಾರಿಗಳಲ್ಲಿ ಸಂಚರಿಸುತ್ತಿದ್ದ ಜನರನ್ನು ಮಾರಕಾಸ್ತ್ರಗಳಿಂದ ಬೆದರಿಸಿ ದರೋಡೆ ಮಾಡುತ್ತಿದ್ದ ಮಹಾರಾಷ್ಟ್ರ ಮೂಲದ ಮೂವರು ಸೇರಿದಂತೆ ಒಟ್ಟು ಏಳು ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ.
ಇಟ್ಟಂಗಿಹಾಳ ದೊಡ್ಡಿಯ ನಿವಾಸಿ ವಿಜಯ ಭೀರಪ್ಪ ಕರಾಡೆ (23), ಆನಂದ ಮಾಯಪ್ಪ ಡೇರೆ, ಹಣಮಂತ ಜಯಪ್ಪ ಖರಾತ (20), ಬಬಲಾದಿ ಗ್ರಾಮದ ನಿವಾಸಿ ಸಚಿನ್ ಮಧು ಗೋಪಣೆ (20), ಮಹಾರಾಷ್ಟ್ರದ ತಿಕ್ಕುಂಡಿ ಕರೆವಾಡಿ ಮೂಲದ ನಿವಾಸಿ ನವನಾಥ ಅಮಗೊಂಡ ಕರಾಡೆ (20), ಸಚಿನ್ ವಿಕಾಸ ಕಾಳೆ (21), ವಿಕಾಸ ಲಕ್ಷ್ಮಣ ಢಾಣೆ (20) ಬಂಧಿತರು. ಪ್ರಕರಣದಲ್ಲಿ ತಲೆ ಮರೆಸಿಕೊಂಡಿರುವ ಇತರೆ ಮೂವರ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.
ಬಂಧಿತರಿಂದ ಕೃತ್ಯಕ್ಕೆ ಬಳಸುತ್ತಿದ್ದ ಮಚ್ಚು, ಕುಡಗೋಲು, ಬಡಿಗೆ, ವೈರ್ ಪೈಪ್, ಮೊಬೈಲ್, ಖಾರದ ಪುಡಿ, ಮೂರು ಬೈಕ್ ಸೇರಿದಂತೆ 5.13 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.
ವಿಜಯಪುರ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಇಟ್ಟಂಗಿಹಾಳ ಕ್ರಾಸ್ ಹತ್ತಿರ ಆ.8 ರಂದು ಹಾಗೂ ಆ.12 ಹಂಚಿನಾಳ ತಾಂಡಾ ಹತ್ತಿರ ಮೂರು ಬೈಕಗಳ ಮೇಲೆ ಬಂದಿದ್ದ ಆರೇಳು ಜನರ ತಂಡ, ಮಾರಕಾಸ್ತ್ರಗಳಿಂದ ಬೆದರಿಸಿ, ಹಣ, ಮೊಬೈಲ್ ಸೇರಿದಂತೆ ಇತರೆ ವಸ್ತುಗಳನ್ನು ದೋಚಿದ ಬಗ್ಗೆ ದೂರುಗಳು ದಾಖಲಾಗಿದ್ದವು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಆನಂದಕುಮಾರ, ಡಿಎಸ್ಪಿ ಸಿದ್ದೇಶ್ವರ ಹಾಗೂ ಗ್ರಾಮೀಣ ವಲಯ ಸಿಪಿಐ ಸಂಗಮೇಶ ಪಾಲಭಾವಿ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿದ್ದರು.
ಆರೋಪಿಗಳು ಮಧ್ಯರಾತ್ರಿ ವೇಳೆ ಮಾರಕಾಸ್ತ್ರ ಹಿಡಿದು ನಗರದ ಪ್ರಮುಖ ರಸ್ತೆಗಳಲ್ಲಿ ಓಡಾಡು ದೃಶ್ಯಗಳು ಸಿ.ಸಿ. ಕೆಮೆರಾದಲ್ಲಿ ಸೆರೆಯಾಗಿತ್ತು. ಶುಕ್ರವಾರ ಏಳು ಆರೋಪಿಗಳು ಸಂಶಯಾಸ್ಪದ ರೀತಿಯಲ್ಲಿ ಓಡಾತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಬೇಧಿಸುವಲ್ಲಿ ಯಶಸ್ವಿಯಾಗಿರುವ ತನಿಖಾ ತಂಡದ ಕಾರ್ಯವನ್ನು ಶ್ಲಾಘಿಸಿರುವ ಎಸ್ಪಿ ಆನಂದಕುಮಾರ ನಗದು ಬಹುಮಾನ ಘೋಷಿಸಿದ್ದಾರೆ.
Seven of Dacoity gang from Maharashtra arrested by police in Vijayapura.
04-03-26 06:47 pm
HK News Staffer
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ; ಕಂಟೇನರ್ ವಾಹನಕ್...
04-03-26 01:33 pm
ಮಾರ್ಚ್ 10ಕ್ಕೆ ಎಲ್ಲ ಶಾಸಕರು, ಸಚಿವರಿಗೆ ಡಿಕೆಶಿ ಡಿ...
04-03-26 01:27 pm
ಇರಾನ್ಗೆ ತೆರಳಿದ್ದ ಕಾಫಿನಾಡಿನ ಯುವಕ ನಾಪತ್ತೆ ; ಮಗ...
04-03-26 11:51 am
04-03-26 11:13 pm
HK News Desk
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
ಇರಾನ್ ಸರ್ವೋಚ್ಚ ನಾಯಕರಾಗಿ ಖಮೇನಿ ಪುತ್ರ ಮೊಜ್ತಾಬಾ...
04-03-26 12:58 pm
ಯುದ್ಧಪೀಡಿತ ಮಧ್ಯಪ್ರಾಚ್ಯದಿಂದ ಪಾರಾಗಲು ಪ್ರತಿ ಸೀಟ್...
03-03-26 04:30 pm
05-03-26 12:42 pm
HK News Staffer
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
ಉಡುಪಿ; ಲವ್ ಮ್ಯಾಟರ್ ರಾಜಿ ವೇಳೆ ಮೀನುಗಾರ ಮುಖಂಡನಿಗ...
04-03-26 10:54 am
ಬೇಸಗೆಯಲ್ಲಿ ಹಾವು ಕಡಿತ ಪ್ರಕರಣ ಹೆಚ್ಚಳ; ಕರಾವಳಿ, ಮ...
03-03-26 09:33 pm
'ಉಳ್ಳಾಲ ಮಸೀದಿ ಬಳಿ ಬಾಂಬ್ ಸ್ಫೋಟಿಸುತ್ತೇನೆ' ಎಂದು...
03-03-26 08:42 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm