ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:59 am
HK News Staffer
ಇಂಗ್ಲಿಷ್ ಕಡಲ್ಗಾಲುವೆ ಗೆದ್ದ ಮಂಗಳೂರಿನ ಕ್ಯಾನ್ಸರ್...
14-07-26 07:55 pm
ಹೊರ್ಮುಜ್ ಜಲಸಂಧಿಯಲ್ಲಿ ಕಾರ್ಗೋ ಹಡಗಿನ ಮೇಲೆ ಇರಾನ್...
14-07-26 01:37 pm
ಮರುಜನ್ಮ ಪಡೆದ ಬಂಟ್ವಾಳ ರೈಲ್ವೆ ನಿಲ್ದಾಣ ; 26 ಕೋಟಿ...
13-07-26 09:16 pm
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
15-07-26 01:17 pm
HK News Staffer
Kasaragod car Accident: ಕಾಸರಗೋಡಿನಲ್ಲಿ ಡೆಡ್ಲಿ...
15-07-26 12:40 pm
ಟ್ರಾಫಿಕ್ ದಂಡ ಕಟ್ಟಲು ಎಪಿಕೆ ಫೈಲ್ ಡೌನ್ಲೋಡ್ ಮಾಡಲು...
14-07-26 09:13 pm
ಕಣ್ಣಿಗೆ ಕರಿ ಮೆತ್ತಿಕೊಂಡು ಬುರ್ಖಾದಲ್ಲೇ ಓಡಾಡ್ತಿದ್...
14-07-26 09:10 pm
ಮಂಗಳೂರಿನಲ್ಲಿ ಅಕ್ರಮ ಬಾಂಗ್ಲಾನ್ನರ ಪತ್ತೆ ; ಮಂಗಳೂರ...
14-07-26 02:43 pm