ಬ್ರೇಕಿಂಗ್ ನ್ಯೂಸ್
06-10-20 10:28 am Bangalore Correspondent ಕರ್ನಾಟಕ
ಬೆಂಗಳೂರು, ಅಕ್ಟೋಬರ್ 06: ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಬೆನ್ನತ್ತಿದ ಸಿಸಿಬಿ ಅಧಿಕಾರಿಗಳು ಮಾಜಿ ಡಾನ್, ಇತ್ತೀಚೆಗಷ್ಟೇ ನಿಧನರಾಗಿರುವ ಬಿಡದಿಯ ಮುತ್ತಪ್ಪ ರೈ ನಿವಾಸಗಳ ಮೇಲೆ ದಾಳಿ ನಡೆಸಿದ್ದಾರೆ.
ಬೆಳ್ಳಂಬೆಳಗ್ಗೆ ಏಳು ಕಾರುಗಳಲ್ಲಿ ಆಗಮಿಸಿರುವ ಸಿಸಿಬಿ ಅಧಿಕಾರಿಗಳು, ರಾಮನಗರದ ಬಿಡದಿ ಬಳಿ ಇರುವ ಮುತ್ತಪ್ಪ ರೈ ಮಗ ರಿಕ್ಕಿ ರೈ ನಿವಾಸಕ್ಕೆ ದಾಳಿ ನಡೆಸಿದ್ದಾರೆ. ಸರ್ಚ್ ವಾರೆಂಟ್ ಪಡೆದೇ ಬೆಳಗ್ಗೆ 6 ಗಂಟೆ ವೇಳೆಗೆ ಸಿಸಿಬಿ ಅಧಿಕಾರಿಗಳು ಮನೆಗೆ ಆಗಮಿಸಿದ್ದರು. ಈ ವೇಳೆ, ನಿವಾಸದ ಹೊರಗೆ ಕೇವಲ ಕೆಲಸಗಾರರು ಅಷ್ಟೇ ಇದ್ದರು. ನಾವು ಪೊಲೀಸರು, ಯಾರನ್ನು ಒಳಗೆ ಬಿಡಬೇಡಿ ಎಂದು ಸೆಕ್ಯುರಿಟಿ ಬಳಿ ಹೇಳಿ ಮನೆ ಒಳಗೆ ಹೋಗಿರುವ ಅಧಿಕಾರಿಗಳು, ಸರ್ಚ್ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನಲ್ಲಿ ಇತ್ತೀಚೆಗೆ ಬಂಧಿತನಾದ ಡ್ರಗ್ ಪೆಡ್ಲರ್ ನೀಡಿರುವ ಮಾಹಿತಿ ಮೇರೆಗೆ ರಿಕ್ಕಿ ರೈ ಮನೆ ಮೇಲೆ ದಾಳಿ ನಡೆದಿದೆ ಎನ್ನಲಾಗ್ತಿದೆ. ಇದಕ್ಕೂ ಮುನ್ನ ರಿಕ್ಕಿ ರೈಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದರು ಎನ್ನಲಾಗುತ್ತಿದೆ.
ಮನೆಯಲ್ಲಿದ್ದ ರಿಕ್ಕಿ ರೈಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡ್ರಗ್ ನಂಟಿನಲ್ಲಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವಾ ಜೊತೆಗೆ ರಿಕ್ಕಿ ರೈ ನಂಟು ಹೊಂದಿರುವ ಹಿನ್ನೆಲೆಯಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ. ಆದಿತ್ಯ ಆಳ್ವಾ ಎಸ್ಕೇಪ್ ಆಗಲು ರಿಕ್ಕಿ ರೈ ಸಹಾಯ ಮಾಡಿದ್ದ ಎನ್ನಲಾಗುತ್ತಿದೆ.
ಸಿಸಿಬಿಯ ಎಸಿಪಿ ವೇಣುಗೋಪಾಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು. ಡ್ರಗ್ಸ್ ಕೇಸ್ನಲ್ಲಿ ಮುತ್ತಪ್ಪ ರೈ ಪುತ್ರನನ್ನು ಫಿಕ್ಸ್ ಮಾಡುತ್ತಾರೆಯೇ ಅಥವಾ ಮನೆಯ ಒಳಗೆ ಡ್ರಗ್ ಪತ್ತೆಯಾಗಿದೆಯೇ ಅನ್ನೋದು ಗೊತ್ತಾಗಿಲ್ಲ. ಡ್ರಗ್ ಪೆಡ್ಲರ್ ಮುತ್ತಪ್ಪ ರೈ ನಿವಾಸಕ್ಕೆ ಡ್ರಗ್ ಪೂರೈಕೆ ಮಾಡುತ್ತಿದ್ದ ಬಗ್ಗೆ ಬಾಯಿಬಿಟ್ಟಿದ್ದು ಅದೇ ವಿಚಾರದಲ್ಲಿ ಪೊಲೀಸರು ರೈಗೆ ಸೇರಿದ ಬಿಡದಿಯ ತೋಟದ ಮನೆ ಮತ್ತು ಬೆಂಗಳೂರಿನ ವಯ್ಯಾಲಿಕಾವಲ್ ಮನೆಯನ್ನು ಸರ್ಚ್ ನಡೆಸಿದ್ದಾರೆ.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 08:26 pm
HK News Staffer
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
02-05-26 08:35 pm
HK News Staffer
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm