ಬ್ರೇಕಿಂಗ್ ನ್ಯೂಸ್
26-08-22 04:59 pm Bangalore Correspondent ಕರ್ನಾಟಕ
ಬೆಂಗಳೂರು, ಆ 26: ರಾಜ್ಯದಲ್ಲಿ ಹಿಂದೆ ಬಿಜೆಪಿ ಸರಕಾರ ಇದ್ದಾಗ ಭೂ ವ್ಯವಹಾರಗಳಲ್ಲಿ ಅಕ್ರಮ ನಡೆದು ಸ್ವತಃ ಕೈಗಾರಿಕಾ ಸಚಿವರೇ ಜೈಲಿಗೆ ಹೋದರು. ಅದರೂ ಬಿಜೆಪಿ ಪಾಠ ಕಲಿತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದರು.
ದೇವನಹಳ್ಳಿಯ ಚನ್ನರಾಯಪಟ್ಟಣದಲ್ಲಿ ಕೃಷಿ ಭೂಮಿಯನ್ನು ಸರಕಾರ ನಿರ್ದಯವಾಗಿ ಸ್ವಾಧೀನ ಮಾಡಿಕೊಳ್ಳುತ್ತಿರುವುದು ಖಂಡಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ನಡೆದ ಬೃಹತ್ ರೈತ ಪ್ರತಿಭಟನೆಯಲ್ಲಿ ಪಾಲ್ಗೊಂಡ ನಂತರ ಕುಮಾರಸ್ವಾಮಿ ಮಾಧ್ಯಮಗಳ ಜತೆ ಮಾತನಾಡಿದರು.

"ಅಷ್ಟೆಲ್ಲಾ ಆದರೂ ಕೂಡ ಬಿಜೆಪಿಗೆ ಇನ್ನೂ ಬುದ್ದಿ ಬಂದಿಲ್ಲ. ಈಗಿನ ಕೈಗಾರಿಕಾ ಸಚಿವರದ್ದು ಬ್ರಹ್ಮಾಂಡ ಭ್ರಷ್ಟಾಚಾರ ಇದೆ. ರೈತರ ಬದುಕಿನ ಜೊತೆ ಚೆಲ್ಲಾಟ ಆಡುವುದು ಮುರುಗೇಶ್ ನಿರಾಣಿ ಮಾಡುತ್ತಿರುವ ಘನಂದಾರಿ ಕೆಲಸ. ಇವರ ದೃಷ್ಟಿಯಲ್ಲಿ ರೈತರು ಬದುಕುವ ಹಾಗೆಯೇ ಇಲ್ಲ. ಬೆಂಗಳೂರಿನಲ್ಲಿಯೂ ಬದಕಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ" ಎಂದು ಕುಮಾರಸ್ವಾಮಿ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ದ ಟೀಕಾ ಪ್ರಹಾರ ನಡೆಸಿದರು.
"ಕೇವಲ ಬೆಂಗಳೂರು ನಗರದ ಸುತ್ತಮುತ್ತಲಿನ ಪ್ರದೇಶದಲ್ಲಿಯೇ ಕೈಗಾರಿಕೆ ಬರಬೇಕು ಎಂಬ ಚಿಂತನೆ ಬಿಡಿ, ಕೃಷಿಯೇತರ ಭೂಮಿಗಳಲ್ಲಿ ಕೈಗಾರಿಕೆಗಳನ್ನು ಆರಂಭ ಮಾಡಬೇಕೆ ವಿನಾ ಫಲವತ್ತಾದ ಜಮೀನನನ್ನು ಕಿತ್ತುಕೊಂಡು ಅಲ್ಲಿ ಕೈಗಾರಿಕೆ ಮಾಡುವುದಲ್ಲ" ಎಂದು ಮಾಜಿ ಮುಖ್ಯಮಂತ್ರಿಗಳು ಕಿಡಿಕಾರಿದರು.
ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ ;
"ರಾಜ್ಯದಲ್ಲಿ ಅಕ್ರಮ, ಅನ್ಯಾಯಗಳು ಎಷ್ಟು ಮೇರೆ ಮೀರಿವೆ ಎಂದರೆ, ತಪ್ಪಿತಸ್ಥರಿಗೆ ಒಂದು ಪರಪ್ಪನ ಆಗ್ರಹಾರ ಜೈಲು ಸಾಲುವುದಿಲ್ಲ. ಈಗಿನ ಭ್ರಷ್ಟಾಚಾರ ನೋಡಿದರೆ 10-15 ಪರಪ್ಪನ ಅಗ್ರಹಾರ ಜೈಲುಗಳು ಬೇಕು. ಇಷ್ಟೆಲ್ಲಾ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಇಟ್ಟುಕೊಂಡು ಪಾಪ.. ಸಿಸೋಡಿಯಾ ಅವರನ್ನು ಹಿಡಿಯಲು ಹೊರಟಿದ್ದಾರೆ. ಅಬಕಾರಿ ನೀತಿಯಲ್ಲಿ ಒಂದು ಕೋಟಿ ವರ್ಗಾವಣೆ ಆಗಿದೆ ಅಂತ ಆರೋಪ ಮಾಡಿ ಅವರ ಮೇಲೆ ದಾಳಿ ನಡೆಸಲಾಗುತ್ತಿದೆ" ಎಂದು ಕುಮಾರಸ್ವಾಮಿ ಕಿಡಿಕಾರಿದರು.
Bjp has highly corrupted people, 10-15 jails aren't enough slams HDK.
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm