ಬ್ರೇಕಿಂಗ್ ನ್ಯೂಸ್
27-08-22 12:31 pm Bangalore Correspondent ಕರ್ನಾಟಕ
ಬೆಂಗಳೂರು, ಆಗಸ್ಟ್ : ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘಿಸಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (ಬಿಡಿಎ) ಬಿಜೆಪಿ ಶಾಸಕ ವೀರಣ್ಣ ಸಿ.ಚರಂತಿಮಠ, ಬಿಜೆಪಿ ಮುಖಂಡ ಬಸವರಾಜ ಪಾಟೀಲ ಸೇಡಂ ಹಾಗೂ ಕರ್ನಾಟಕ ಲೋಕಸೇವಾ ಆಯೋಗದ ಮಾಜಿ ಸದಸ್ಯ ಡಾ.ಎಂ.ನಾಗರಾಜ್ ಅವರಿಗೂ ಬದಲಿ ನಿವೇಶನ ಹಂಚಿಕೆ ಮಾಡಿರುವುದು ಬೆಳಕಿಗೆ ಬಂದಿದೆ.
ನಗರಾಭಿವೃದ್ಧಿ ಇಲಾಖೆಯ ಉಪ ಕಾರ್ಯದರ್ಶಿ ಕೆ.ಎಸ್.ಜಗದೀಶ ರೆಡ್ಡಿ ಅವರ ಸಂಬಂಧಿ ರಾಮ ರೆಡ್ಡಿ, ಗೀತಾ ರೆಡ್ಡಿ ಅವರಿಗೂ 40X60 ಅಡಿ ಅಳತೆಯ ಬದಲಿ ನಿವೇಶನ ಹಂಚಲಾಗಿದೆ. ಬೆಂಗಳೂರಿನಲ್ಲಿ ಪೆರಿಫೆರಲ್ ವರ್ತುಲ ರಸ್ತೆ ನಿರ್ಮಾಣದ ಕುರಿತ ವಿವಾದವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಯೋಜನೆಗೆ ಸಂಪನ್ಮೂಲವನ್ನು ಹೇಗೆ ಕ್ರೋಡೀಕರಣ ಮಾಡಲಾಗುತ್ತದೆ ಎಂದು ಪ್ರಾಧಿಕಾರವನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತ್ತು. ನಿವೇಶನಗಳನ್ನು ಮಾರಾಟ ಮಾಡಿ ಸಂಪನ್ಮೂಲ ಕ್ರೋಡೀಕರಣ ಮಾಡಲಾಗುವುದು ಎಂದು ಬಿಡಿಎ ಉತ್ತರಿಸಿತ್ತು. ಈ ವೇಳೆ, ಮರು ಸ್ವಾಧೀನ ಪಡೆದಿರುವ ಅಥವಾ ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಸಾರ್ವಜನಿಕ ಹರಾಜಿನ ಮೂಲಕ ಮಾತ್ರ ನಿವೇಶನಗಳನ್ನು ಹಂಚಿಕೆ ಮಾಡಬೇಕು ಎಂದು ಸುಪ್ರೀಂ ಕೋರ್ಟ್ 2021ರ ಅಕ್ಟೋಬರ್ 29ರಂದು ಆದೇಶಿಸಿತ್ತು.
ಆದರೆ, ಕೋರ್ಟ್ ಆದೇಶ ಉಲ್ಲಂಘಿಸಿ ಪ್ರಸಕ್ತ ಸರಕಾರದಲ್ಲಿ ಸಚಿವ ಆರಗ ಜ್ಞಾನೇಂದ್ರ ಸೇರಿದಂತೆ ಹಲವರಿಗೆ ಪರ್ಯಾಯ ನಿವೇಶನಗಳನ್ನು ಹಂಚಿಕೆ ಮಾಡಿದ್ದ ಕಾರಣಕ್ಕೆ ಬಿಡಿಎ ಆಯುಕ್ತ ಎಂ.ಬಿ.ರಾಜೇಗೌಡ ಅವರನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡು ವರ್ಗಾವಣೆಗೆ ನಿರ್ದೇಶಿಸಿತ್ತು. 'ಜಿ ಕೆಟಗರಿ ನಿವೇಶನ ಹಂಚಿಕೆಯೇ ಅಕ್ರಮ. ಈ ಅಕ್ರಮದಲ್ಲಿ ಬಿಡಿಎ ಕಾರ್ಯದರ್ಶಿ, ಉಪ ಕಾರ್ಯದರ್ಶಿ ಭಾಗಿಯಾಗಿದ್ದಾರೆ ಎಂದೂ ನ್ಯಾಯಪೀಠ ಹೇಳಿತ್ತು.
ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡರ ಸಂಬಂಧಿ ಹಾಗೂ ಬಿಜೆಪಿ ಶಾಸಕ ಅಭಯ ಪಾಟೀಲ ಅವರಿಗೂ ಆರ್ಎಂವಿ ಎರಡನೇ ಹಂತದಲ್ಲಿ ಬದಲಿ ನಿವೇಶನ ಹಂಚಿಕೆಗೆ ಕಡತ ಸಿದ್ಧವಾಗಿತ್ತು. ಈಗ ಸುಪ್ರೀಂ ಆದೇಶದಿಂದ ಇದಕ್ಕೆ ಕಡಿವಾಣ ಬಿದ್ದಿದೆ' ಎಂದು ಮೂಲಗಳು ತಿಳಿಸಿವೆ. ಕೆಂಪೇಗೌಡ ಬಡಾವಣೆ ಹಾಗೂ ಅರ್ಕಾವತಿ ಬಡಾವಣೆ ಬಿಟ್ಟು ಪೂರ್ಣ ಅಭಿವೃದ್ಧಿ ಹೊಂದಿದ ಬಡಾವಣೆಗಳಲ್ಲಿ ಹರಾಜಿನ ಮೂಲಕವೇ ನಿವೇಶನ ಹಂಚಬೇಕು ಎಂದು ಕೋರ್ಟ್ ನಿರ್ದೇಶನ ನೀಡಿದೆ. ಒಂದು ಪ್ರಕರಣದಲ್ಲಿ ಲೋಪ ಆಗಿದೆ. ಎಚ್ಎಸ್ಆರ್ ಬಡಾವಣೆಗಿಂತ ಮೂರು ತಿಂಗಳ ಮೊದಲು ಆರ್ಎಂವಿ ಬಡಾವಣೆ ನಿರ್ಮಾಣವಾಗಿತ್ತು. ಮುಂದೆ ಇಂತಹ ತಪ್ಪು ಘಟಿಸದಂತೆ ಎಚ್ಚರಿಕೆ ವಹಿಸಲು ಸೂಚಿಸಿದ್ದೇನೆ ಎಂದು ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ತಿಳಿಸಿದ್ದಾರೆ.
Three people, including Home Minister Araga Jnanendra, who recently received alternative sites, have been asked to surrender them back to the Bangalore Development says Authority (BDA), Chairman
26-04-26 08:05 pm
HK News Staffer
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 01:35 pm
Mangaluru Correspondent
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
28-04-26 02:36 pm
Mangaluru Staffer
ರೈಲಿನಿಂದ ಕೈಜಾರಿ ಬಿದ್ದ ಮಗು ; ಚೈನ್ ಎಳೆದರೂ ನಿಲ್...
27-04-26 10:04 pm
ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ; ಪ್ರಮುಖ ಆ...
27-04-26 05:42 pm
ಉಡುಪಿಯಲ್ಲಿ ಕಟ್ಟಡಕ್ಕೆ ಬೆಂಕಿ ; ಮೊಬೈಲ್, ಹಾರ್ಡ್...
26-04-26 09:26 pm
ಚಾರ್ಮಾಡಿ ಘಾಟಿಯಲ್ಲಿ ಬಸ್ ಪಲ್ಟಿ; ಧರ್ಮಸ್ಥಳದಲ್ಲಿ ಮ...
26-04-26 09:23 pm