ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
05-05-25 01:30 pm
HK News Desk
ಅಲ್ಲೊಂದು, ಇಲ್ಲೊಂದು ಕೊಲೆ ಆಗತ್ತೆ, ಅದನ್ಯಾಕೆ ಧರ್ಮ...
04-05-25 09:55 pm
ಸಿಇಟಿ ಬಳಿಕ ನೀಟ್ ಪರೀಕ್ಷೆಗೂ ಜನಿವಾರಕ್ಕೆ ಕತ್ತರಿ !...
04-05-25 09:26 pm
ಹಿಮಾಲಯ - ದೆಹಲಿಗೆ ಸುನಾಮಿ, ಮಹಾನ್ ನಾಯಕರ ದುರ್ಮರಣ...
04-05-25 09:15 pm
Bangalore Girl Naked, HSR Layout: ಬೆಂಗಳೂರಿನಲ್...
04-05-25 02:27 pm
05-05-25 11:10 pm
HK News Desk
ಪಾಕ್ ವಾಯು ಪ್ರದೇಶದಲ್ಲಿ ಭಾರತದ ವಿಮಾನಗಳಿಗೆ ನಿರ್ಬಂ...
30-04-25 06:59 pm
India Pakistan War: ಭಾರತೀಯ ಸೇನಾಪಡೆಗೆ ಪರಮಾಧಿಕಾ...
30-04-25 03:14 pm
Pakistan, No-fly zone islamabad: ಭಾರತದ ಪ್ರತೀಕ...
30-04-25 02:13 pm
ಮೋದಿ 'ಗಾಯಬ್' ಎಂದು ಕಾಂಗ್ರೆಸ್ ಪೋಸ್ಟ್ ; ಕಾಂಗ್ರೆಸ...
29-04-25 03:45 pm
05-05-25 10:59 pm
Mangalore Correspondent
Suhas Shetty murder, MP Brijesh Chowta, Param...
05-05-25 10:43 pm
Mangalore Suhas Shetty murder, BJP Umanath Ko...
05-05-25 07:15 pm
MLA Harish Poonja, Dinesh Gundurao: ಬುರ್ಖಾಧಾರ...
05-05-25 05:10 pm
Suhas Shetty Murder, VHP, Bajpe Police: ಸುಹಾಸ...
05-05-25 03:24 pm
03-05-25 02:16 pm
Mangalore Correspondent
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm
Mangalore Mudipu Murder, Mob, Police, Crime:...
29-04-25 09:59 pm