ಬ್ರೇಕಿಂಗ್ ನ್ಯೂಸ್
27-08-22 04:43 pm HK News Desk ಕರ್ನಾಟಕ
ಮೈಸೂರು, ಆಗಸ್ಟ್ 27: ಮುರುಘಾ ಮಠದ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯದ ಬಗ್ಗೆ ಎಫ್ಐಆರ್ ದಾಖಲಾಗಿರುವ ಹಿನ್ನೆಲೆಯಲ್ಲಿ ಘಟನೆ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕೆಂದು ಮೈಸೂರಿನ ಒಡನಾಡಿ ಸಂಸ್ಥೆ ಆಗ್ರಹ ಮಾಡಿದೆ.
ಒಡನಾಡಿ ಸಂಸ್ಥೆಯ ಸ್ಟ್ಯಾನ್ಲಿ, ಪರಶು ಮತ್ತು ಕೌನ್ಸಿಲರ್ ಸರಸ್ವತಿ ಹೇಳಿಕೆ ನೀಡಿದ್ದು ಪ್ರೌಢಶಾಲೆಯ ಮಕ್ಕಳನ್ನು ಲೈಂಗಿಕ ದೌರ್ಜನ್ಯಕ್ಕೆ ಒಳಪಡಿಸಿರುವ ಘಟನೆಯನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.
ಜುಲೈ 24 ರಂದು ಮಕ್ಕಳು ದೌರ್ಜನ್ಯದಿಂದ ಬೇಸತ್ತು ಬೆಂಗಳೂರಿನ ಮೆಜೆಸ್ಟಿಕ್ ಗೆ ಬಂದಿದ್ದರು. ಅಲ್ಲಿ ಬಹಳಷ್ಟು ಸಮಯ ಒಂದೇ ಕಡೆ ನಿಂತಿದ್ದರಿಂದ ಆಟೋ ಚಾಲಕರೊಬ್ಬರು ಅವರನ್ನು ವಿಚಾರಿಸಿ, ಸಮೀಪದ ಕಾಟನ್ ಪೇಟೆ ಪೊಲೀಸ್ ಸ್ಟೇಷನ್ ಗೆ ಕರೆದೊಯ್ದಿದ್ದಾರೆ. ಠಾಣೆಯಲ್ಲಿ ಮಕ್ಕಳು ಯಾರನ್ನು ಭೇಟಿ ಮಾಡಿದ್ರು ಅನ್ನೋ ಮಾಹಿತಿ ನಮಗಿಲ್ಲ. ಆದರೆ ಠಾಣೆಗೆ ಹೋಗಿರೋದು ನಿಜ. ಮಕ್ಕಳು ಭಯದ ಕಾರಣಕ್ಕೆ ತಮ್ಮ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಬಗ್ಗೆ ಹೇಳಿಲ್ಲ.
ಸ್ವಾಮೀಜಿಯವರು ತಮ್ಮ ಮೇಲೆ ದೈಹಿಕವಾಗಿ ಹಲ್ಲೆ ಮಾಡುತ್ತಾರೆ. ಕೆಟ್ಟದಾಗಿ ನಿಂದಿಸುತ್ತಾರೆ ಎಂದಷ್ಟೇ ಹೇಳಿದ್ದಾರೆ. ಠಾಣೆಯಲ್ಲಿ ಸತ್ಯ ಹೇಳಿದ್ರೆ ಸ್ವಾಮೀಜಿಯವರು ಪ್ರಭಾವಿಗಳು, ತೊಂದರೆ ಆಗಬಹುದು ಎಂಬ ಕಾರಣಕ್ಕೆ ಸತ್ಯ ಹೇಳಿಲ್ಲ. ಪೊಲೀಸರು ಸಂಯಮದಿಂದ ಅವರನ್ನು ವಿಚಾರಿಸಿದ್ದರೆ ಸತ್ಯಾಂಶ ಹೊರಬರುತ್ತಿತ್ತು. ಆದರೆ ಪೊಲೀಸರು ಅಪ್ರಾಪ್ತ ಹೆಣ್ಣು ಮಕ್ಕಳಿಂದ ಸರಿಯಾಗಿ ಮಾಹಿತಿ ಪಡೆಯದೆ ನಿರ್ಲಕ್ಷ್ಯ ಮಾಡಿದ್ದಾರೆ.
ಪೊಲೀಸರಿಂದ ನ್ಯಾಯ ಸಿಗುತ್ತೆ ಎಂಬ ಖಾತ್ರಿ ಇದ್ದಿದ್ದರೆ ಆ ಮಕ್ಕಳು ನಮ್ಮ ತನಕ ಬರುತ್ತಿರಲಿಲ್ಲ. ಹೀಗಾಗಿ ಆ ಮಕ್ಕಳು ಬೇರೊಬ್ಬರ ಸಹಾಯ ಪಡೆದು ನಮ್ಮ ಬಳಿ ಬಂದಿದ್ದಾರೆ. ನಾವು ಅವರ ಪರ ನಿಂತು ಎಫ್.ಐ.ಆರ್. ಮಾಡಿಸಿದ್ದೇವೆ. ಮಕ್ಕಳ ಮಾನಸಿಕ ಸ್ಥಿತಿ ಧೃಡವಾಗಿಯೇನೂ ಇಲ್ಲ. ತುಂಬಾ ಹೆದರಿಕೆಯಿಂದಲೇ ನಮ್ಮ ಬಳಿ ಆಗಿರುವ ಅನ್ಯಾಯದ ಬಗ್ಗೆ ಹೇಳಿಕೊಂಡಿದ್ದಾರೆ ಎಂದು ಕೌನ್ಸಿಲರ್ ಸರಸ್ವತಿ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ್ದಾರೆ.
Murugha Matha Sri Shivamuruthy alleged of continuous Sexual harassment of hostel girls posco case filed in Chitradurga.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm