ಬ್ರೇಕಿಂಗ್ ನ್ಯೂಸ್
27-08-22 08:54 pm HK News Desk ಕರ್ನಾಟಕ
ಕಲಬುರ್ಗಿ, ಆಗಸ್ಟ್ 27 : ಅಕ್ರಮ ಪಿಎಸ್ಐ ನೇಮಕಾತಿ ಪ್ರಕರಣ ಸಂಬಂಧಿಸಿ ಒಎಂಆರ್ ಉತ್ತರ ಪತ್ರಿಕೆಯಲ್ಲಿ ತಿದ್ದುಪಡಿ ಮಾಡಿಸಿ ಮಹಿಳಾ ವಿಭಾಗದಲ್ಲಿ ರಾಜ್ಯಕ್ಕೆ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಹನುಮಂತ (25) ಎಂಬವರನ್ನು ಸಿಐಡಿ ಅಧಿಕಾರಿಗಳು ಕಡೆಗೂ ಶನಿವಾರ ಬಂಧಿಸಿದ್ದಾರೆ.
ಕಳೆದ ಮೂರುವರೆ ತಿಂಗಳಿಂದ ಪೊಲೀಸರ ಕಣ್ಣುತಪ್ಪಿಸಿ ತಿರುಗಾಡುತ್ತಿದ್ದ ರಚನಾ ಒಂದೆಡೆ ನೆಲೆ ನಿಲ್ಲದೇ ಹಲವು ಕಡೆ ವಾಸ್ತವ್ಯ ಬದಲಾಯಿಸಿದ್ದರು. ಬೆಂಗಳೂರು, ಕಲಬುರಗಿ ಸಿಐಡಿ ಅಧಿಕಾರಿಗಳು ನಿರಂತರ ಹುಡುಕಾಟ ನಡೆಸಿದ್ದರು. ಮಹಾರಾಷ್ಟ್ರ ಗಡಿಯ ಆಳಂದ ತಾಲ್ಲೂಕಿನ ಹಿರೋಳ್ಳಿ ಚೆಕ್ಪೋಸ್ಟ್ ಬಳಿ ಸಿಐಡಿ ಡಿವೈಎಸ್ಪಿ ಶಂಕರಗೌಡ ಪಾಟೀಲ ಹಾಗೂ ಸಿಐಡಿ ಡಿಟೆಕ್ಟಿವ್ ಸಬ್ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡವು ರಚನಾರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು. ಶನಿವಾರ ನಗರದ ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶ ದಸ್ತಗೀರಸಾಬ್ ಮುಲ್ಲಾ ಅವರ ಎದುರು ಆರೋಪಿಯನ್ನು ಹಾಜರುಪಡಿಸಲಾಯಿತು.
ರಚನಾ ವಿರುದ್ಧ ಬೆಂಗಳೂರಿನಲ್ಲಿ ಎಫ್ಐಆರ್ ದಾಖಲಾಗಿದ್ದರಿಂದ ಟ್ರಾನ್ಸಿಟ್ ವಾರೆಂಟ್ ಪಡೆದ ಸಿಐಡಿ ಅಧಿಕಾರಿಗಳು ಶನಿವಾರ ಸಂಜೆ ಬೆಂಗಳೂರಿಗೆ ಕರೆದೊಯ್ದಿದ್ದಾರೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿಯ ರಚನಾ ಪಿಎಸ್ಐ ಅಕ್ರಮದ ಆರೋಪ ಕೇಳಿಬಂದಾಗ ನೇಮಕಾತಿ ಪ್ರಕ್ರಿಯೆಯನ್ನು ರದ್ದುಗೊಳಿಸಿದ ಸರ್ಕಾರದ ಕ್ರಮ ಖಂಡಿಸಿ ಅಭ್ಯರ್ಥಿಗಳ ಪ್ರತಿಭಟನೆಯಲ್ಲಿ ಮುಂಚೂಣಿಯಲ್ಲಿದ್ದರು. ತನ್ನ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆಯೇ ರಚನಾ ನಾಪತ್ತೆಯಾಗಿದ್ದರು.
CID police have arrested a top ranker in the rigged PSI recruitment examination. Sources said that Rachana who had secured the top spot in the women’s quota in the exam was arrested for alleged irregularities.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm