ಬ್ರೇಕಿಂಗ್ ನ್ಯೂಸ್
29-08-22 08:38 pm HK News Desk ಕರ್ನಾಟಕ
ಧರ್ಮಸ್ಥಳ, ಆಗಸ್ಟ್ 29: ಬಿಜೆಪಿ ನಾಯಕರು ತನ್ನನ್ನು ರಾಗಿ ಕಳ್ಳ ಎಂದು ಅವಹೇಳನ ಮಾಡಿದ್ದಕ್ಕೆ ಧರ್ಮಸ್ಥಳದಲ್ಲಿ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಅವರು ಯಾರೂ ಬಂದಿಲ್ಲ. ನಾನು ಒಂದು ಕೆಜಿಯೂ ರಾಗಿ ಕದ್ದಿಲ್ಲ ಎಂದು ದೇವರ ಮುಂದೆ ಹೇಳಿದ್ದೇನೆ ಎಂಬುದಾಗಿ ಅರಸೀಕೆರೆ ಶಾಸಕ ಶಿವಲಿಂಗೇ ಗೌಡ ಹೇಳಿದ್ದಾರೆ.
ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನದಲ್ಲಿ ಆಣೆ ಪ್ರಮಾಣ ಮಾಡಿ ಮಾಧ್ಯಮಗಳ ಜೊತೆ ಮಾತನಾಡಿದ ಶಿವಲಿಂಗೇ ಗೌಡರು, ನಾನು ಒಂದು ಕೆ.ಜಿ. ಯೂ ರಾಗಿ ಕದ್ದಿಲ್ಲ. ಮಾರಾಟ ಮಾಡಿಲ್ಲ. ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿ ಕುಮಾರ್ ನನ್ನನ್ನು ಸಾರ್ವಜನಿಕ ವೇದಿಕೆಯಲ್ಲಿ ರಾಗಿ ಕಳ್ಳ ಎಂದಿದ್ದರು, ಈ ವಿಚಾರವಾಗಿ ಅವರನ್ನು ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಮುಂದೆ ಆಣೆ ಪ್ರಮಾಣಕ್ಕೆ ಕರೆದಿದ್ದೆ. ಆದರೆ ಅವರು ಬಂದಿಲ್ಲ. ಅದಕ್ಕೋಸ್ಕರ ಮಂಜುನಾಥ ಸ್ವಾಮಿಯ ಮುಂದೆ ನನ್ನ ಮಾತನ್ನು ಹೇಳಿದ್ದೇನೆ ಎಂದರು.
ರಾಜಕೀಯ ಕಾರಣಕ್ಕೆ ಈ ರೀತಿಯ ಆರೋಪ ಮಾಡಿದ್ದಾರೆ. ಈ ವಿಚಾರವಾಗಿ ನಾನು ಎಲ್ಲಾ ರೀತಿಯ ಹೋರಾಟಕ್ಕೂ, ಚರ್ಚೆಗೂ ಸಿದ್ಧನಿದ್ದೇನೆ. ಆಣೆ ಪ್ರಮಾಣಕ್ಕೆ ಮೊದಲು ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗಡೆಯವರನ್ನು ಭೇಟಿ ಮಾಡಿದ್ದೇನೆ. ರಾಜ್ಯಸಭೆ ಸದಸ್ಯರಾಗಿ ಆಯ್ಕೆಯಾಗಿದ್ದರಿಂದ ಶಾಲು ಹೊದಿಸಿ ಗೌರವಿಸಿದ್ದೇನೆ. ಹಾಸನ ಜಿಲ್ಲೆಯ ಕೃಷಿ ವಿಚಾರವಾಗಿ ಅವರು ನನ್ನ ಬಳಿ ಚರ್ಚೆ ನಡೆಸಿದ್ದಾರೆ. ಆಣೆ ಪ್ರಮಾಣದ ವಿಷಯವನ್ನು ಅವರ ಜೊತೆ ಮಾತನಾಡಿಲ್ಲ. ದಾಖಲೆ ಬಿಡುಗಡೆ ಮಾಡುತ್ತೇವೆ ಎಂದಿದ್ದರು. ಈಗ ದಾಖಲೆ ಬಿಡುಗಡೆ ಮಾಡಲಿ ಎಂದು ಸವಾಲು ಹಾಕುತ್ತೇನೆ. ಸಾರ್ವಜನಿಕವಾಗಿ ಹೆಸರು ಕೆಡಿಸುವ ಇಂಥವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡುತ್ತೇನೆ ಎಂದಿದ್ದಾರೆ.
Bjp general secretary Ravi Kumar had called me a ragi thief on a public platform and I had called him for an oath in front of Dharmasthala Manjunatheshwara Swamy on this issue. But they haven't come. That is why I have said my word in front of Manjunatha Swamy.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 08:20 pm
HK News Desk
ಗ್ರೀನ್ಲ್ಯಾಂಡ್ ವಶಕ್ಕೆ ವಿರೋಧ ; ನ್ಯಾಟೋ ಮಿತ್ರ ರಾ...
18-01-26 06:03 pm
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
18-01-26 09:58 pm
Mangalore Correspondent
ಸೇಂಟ್ ಅಲೋಶಿಯಸ್ ಶಾಲೆಯಲ್ಲಿ ವಿಶೇಷ ಚೇತನ ಮಕ್ಕಳೊಂದಿ...
17-01-26 05:12 pm
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm